ಹೊಸದುರ್ಗ: ಪೂಜಾರಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ

ಚಿತ್ರದುರ್ಗ, ಆಗಸ್ಟ್‌, 27: ಪೂಜಾರಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಆದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಲಕ್ಕಿಹಳ್ಳಿ ಗ್ರಾಮದ ಮುದ್ದುಲಿಂಗೇಶ್ವರ ದೇಗುಲದಲ್ಲಿ ನಡೆದಿದೆ. ಹಾಗಾದರೆ ಈ ಗಲಾಟೆ ನಡೆದಿದ್ದು ಯಾವಾಗ ಹಾಗೂ ಯಾವ ಕಾರಣಕ್ಕೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ.

ಪೂಜಾರಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಆಗಷ್ಟ್ 25ರ ರಾತ್ರಿ ಘರ್ಷಣೆ ನಡೆದಿದ್ದು, ಈ ದೃಶ್ಯ ಇದೀಗ ವೈರಲ್ ಆಗುತ್ತಿದೆ.

Clash between two groups in Lakkihalli village Temple-what is the reason

ಘಟನೆಯಲ್ಲಿ ಸೋಮಶೇಖರ್ ಎಂಬುವವರ ಮೇಲೆ ಹಲ್ಲೆ ನಡೆದಿದ್ದು, ಮುದ್ದಣ್ಣ & ಇತರರ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದೆ.

ಹಿರಿಯ ವೈದ್ಯನಿಗೆ ವಂಚನೆ: ಸೈಬರ್‌ ವಂಚಕರು ಸಾಮಾನ್ಯ ಜನರನ್ನು ಬಲಿಪಶುಗಳಾಗಿಸಿಕೊಂಡು ಆನ್‌ಲೈನ್‌ ಮೂಲಕ ಆಸೆ, ಆಮಿಷಗಳನ್ನೊಡ್ಡಿ ಹಣ ದೋಚಿರುವ ಪ್ರಕರಣಗಳು ದಾಖಲಾದ ಉದಾಹರಣೆಗಳಿವೆ. ಆದರೆ ಇದೀಗ, TRAI & ಮುಂಬೈ ಪೊಲೀಸರೆಂದು ಹೇಳಿ ಕರೆ ಮಾಡಿದ್ದ ಸೈಬರ್‌ ವಂಚಕರು ಹಿರಿಯ ವೈದ್ಯರೊಬ್ಬರ ಬಳಿ 1 ಕೋಟಿ 27ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಸೈಬರ್ ವಂಚಕರು ಚಿತ್ರದುರ್ಗದ ಹಿರಿಯ ವೈದ್ಯ ಶ್ರೀನಿವಾಸ್ ಶೆಟ್ಟಿಗೆ 1 ಕೋಟಿ 27 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ. ಹಾಗಾದರೆ ಇದು ಹೇಗೆ ಸಾಧ್ಯ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

TRAI & ಮುಂಬೈ ಪೊಲೀಸರೆಂದು ಹೇಳಿ ಕರೆ ಮಾಡಿ ನಿಮ್ಮ ಖಾತೆಯ ಹಣದ ಆಡಿಟ್ ಮಾಡಬೇಕಿದೆ ಎಂದು ವಾಟ್ಸಪ್ ಕಾಲ್ & ನಾರ್ಮಲ್ ಕಾಲ್ ಮಾಡಿ ನಂಬಿಸಿ ದಾಖಲೆ ಕೇಳಿದ್ದಾರೆ. ಬಳಿಕ ಅವರ ಖಾತೆಗೆ 1 ಕೋಟಿ 27 ಲಕ್ಷ ರೂಪಾಯಿ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಹಿರಿಯ ವೈದ್ಯ ಶ್ರೀನಿವಾಸ್ ಶೆಟ್ಟಿ ಚಿತ್ರದುರ್ಗದ CEN ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+