Get Updates
Get notified of breaking news, exclusive insights, and must-see stories!

ಭದ್ರಾ ಮೇಲ್ದಂಡೆ & ಈ ಎರಡು ಪ್ರಮುಖ ಮಾರ್ಗಗಳ ನಡುವೆ ನೇರ ರೈಲ್ವೆ ಯೋಜನೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ

ಚಿತ್ರದುರ್ಗ, ಜುಲೈ, 02: ಭದ್ರಾ ಮೇಲ್ದಂಡೆ ಯೋಜನೆ ಹಾಗೂ ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.

ಹಿರಿಯೂರು ನಗರಸಭೆ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲ್ವೆ ಯೋಜನೆ ಹಾಗೂ ಕೆಐಡಿಬಿ ಇಲಾಖೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

Complete Upper bank of Bhadra and Davanagere-Tumkur Direct Railway Project Soon D Sudhakar

ಭದ್ರಾ ಮೇಲ್ದಂಡೆ ಯೋಜನೆ, ನೇರ ರೈಲ್ವೆ ಯೋಜನೆ, ಕೈಗಾರಿಕಾ ಕಾರಿಡಾರ್ ಯೋಜನೆಗಳನ್ನು ನಿಗಧಿತ ಸಮಯದೊಳಗೆ ಪೂರ್ಣಗೊಳಿಸಬೇಕು. ಚುನಾವಣಾ ನೀತಿ ಸಂಹಿತೆಯಿಂದಾಗಿ ಯೋಜನೆ ಕಾಮಗಾರಿಗಳು ಮಂದಗತಿಯಾಗಿದ್ದು, ಇದೀಗ ಯೋಜನೆಗಳ ಪೂರ್ಣಗೊಳಿಸಲು ವೇಗ ನೀಡಲಾಗುವುದು ಎಂದರು.

ಬೋರನಕಣಿವೆ ಜಲಾಶಯದ ವಿವರ ಪರಿಶೀಲಿಸಿ ಹೆಚ್ಚಿನ ನೀರಿನ ಅಲೋಕೇಶನ್ ತಂದು ಅಲ್ಲಿಂದ ಗಾಯಿತ್ರಿ ಜಲಾಶಯಕ್ಕೆ ತರಲು ಕ್ರಮವಹಿಸಲಾಗುವುದು. ಹೊಸಹಳ್ಳಿ ಬ್ಯಾರೇಜ್‍ನ ವಿದ್ಯುತ್ ಸಮಸ್ಯೆಯನ್ನು ಆ ಭಾಗದ ರೈತರೊಂದಿಗೆ ಚರ್ಚಿಸಿ ಶೀಘ್ರ ಬಗೆಹರಿಸಿ ಬಹುದೊಡ್ಡ ಈ ಯೋಜನೆಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕಿದೆ ಎಂದರು.

ಕೆಐಡಿಬಿ ಅಧಿಕಾರಿ ಲಕ್ಷ್ಮೀಶ್ ಮಾತನಾಡಿ, ಮೇಟಿಕುರ್ಕೆ ಕೈಗಾರಿಕಾ ಕಾರಿಡಾರ್ ಯೋಜನೆಯ 1,156 ಹೆಕ್ಟೇರ್‌ ಪ್ರದೇಶದಲ್ಲಿ 920 ಹೆಕ್ಟೇರ್‌ ಪ್ರದೇಶದ ರೈತರಿಗೆ ಪರಿಹಾರ ನೀಡಲಾಗಿದೆ. ಇನ್ನೂ 336 ಹೆಕ್ಟೇರ್‌ಗೆ ಪರಿಹಾರ ಕೊಡಬೇಕು. ಇಲ್ಲಿಯವರೆಗೆ 380 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಅದರಲ್ಲಿ 312 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದರು.

ಮೇಟಿಕುರ್ಕೆ ಕರಿಯೋಬನಹಳ್ಳಿಯಲ್ಲಿ ಲೇಔಟ್ ಅನುಮೋದನೆ ಆಗಿದೆ. ನಾಲ್ಕರಲ್ಲಿ ಮೂರು ಪ್ಯಾಕೇಜ್ ವರ್ಕ್ ಅವಾರ್ಡ್ ಆಗಿದ್ದು, ಕೆಲಸ ನಡೆಯುತ್ತಿದೆ. ಒಂದರಲ್ಲಿ ಕೆಲಸ ಶುರು ಆಗಬೇಕಿದೆ. 1,156 ಹೆಕ್ಟೇರ್‌ ಪ್ರದೇಶದಲ್ಲಿ 764 ಹೆಕ್ಟೇರ್‌ ಕೈಗಾರಿಕಾ ಪ್ರದೇಶವಾಗಿದ್ದು, ಉಳಿದ ಪ್ರದೇಶದಲ್ಲಿ ಉದ್ಯಾನವನ, ಆಸ್ಪತ್ರೆ, ವಸತಿ ಗೃಹಗಳಿಗೆ ಮೀಸಲಿರಿಸಲಾಗಿದೆ ಎಂದರು.

ದಾವಣಗೆರೆ-ತುಮಕೂರು ನೇರ ರೈಲ್ವೆ ಯೋಜನೆಗೆ 1,210 ಹೆಕ್ಟೇರ್‌ ಬೇಕಾಗಿದ್ದು, ಹಿರಿಯೂರಿನಲ್ಲಿ 55 ಕಿಲೋ ಮೀಟರ್‌ ಹಾದು ಹೋಗಲಿದೆ. ತಾಲ್ಲೂಕಿನಲ್ಲಿ 113 ಹೆಕ್ಟೇರ್‌ ಭೂ ಸ್ವಾಧೀನ ಬಾಕಿಯಿದೆ. ಎರಡು ತಿಂಗಳಲ್ಲಿ 70 ಹೆಕ್ಟೇರ್‌ ಭೂ ಸ್ವಾಧೀನಪಡಿಸಿಕೊಂಡು ಕೆಲಸ ಪ್ರಾರಂಭ ಮಾಡಲಾಗುವುದು ಎಂದು ವಿಶೇಷ ಭೂಸ್ವಾಧೀನಾಧಿಕಾರಿ ವಿವೇಕ್ ಸಭೆಗೆ ಮಾಹಿತಿ ನೀಡಿದರು.

ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಎಂಜಿನಿಯರ್ ಎಸ್.ಎಚ್.ಲಮಾಣಿ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಯಿಂದ ಅನುಮೋದನೆ ಆಗಿರುವ ಕೆರೆಗಳಿಗೆ ನೀರು ಬರಲಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಇನ್ನು ಜವನಗೊಂಡನಹಳ್ಳಿ ಹಾಗೂ ಕರಿಯಾಲ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ನಮಗೆ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಕರಿಯಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಅವರು ಸಚಿವರಿಗೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+