ಹಿರಿಯೂರಿನಲ್ಲಿ ರಾತ್ರೋರಾತ್ರಿ ಕುವೆಂಪು, ಅಪ್ಪು ಪ್ರತಿಮೆಗಳ ನಿರ್ಮಾಣ: ಕಾರಣವೇನು..?
ಚಿತ್ರದುರ್ಗ, ಅಕ್ಟೋಬರ್ 03: ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ರಾತ್ರೋರಾತ್ರಿ ಎರಡು ಪ್ರತಿಮೆ ನಿರ್ಮಾಣ ಮಾಡಲಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಹಿರಿಯೂರು ನಗರದ ಇಂದಿರಾ ಕ್ಯಾಂಟೀನ್ ಬಳಿ ಇರುವ ನೂತನ ಬಿಇಓ ಕಚೇರಿ ಮುಂಭಾಗದಲ್ಲಿ ಕರ್ನಾಟಕ ರತ್ನ ನಟ ಪುನೀತ್ ರಾಜ್ ಕುಮಾರ್ ಅವರ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ. ಮತ್ತೊಂದು ಕಡೆ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಯನ್ನು ಕೂಡ ನಿರ್ಮಾಣ ಮಾಡಲಾಗಿದೆ.

ಇನ್ನು ರಾತ್ರೋರಾತ್ರಿ ನಿರ್ಮಾಣವಾದ ಈ ಪ್ರತಿಮೆಗಳಿಗೆ ಕೆಂಪು ಹಾಗೂ ಹಳದಿ ಬಣ್ಣದ ಬಟ್ಟೆಯನ್ನು ಸುತ್ತಲಾಗಿದ್ದು, ಉದ್ಘಾಟನಾ ಕಾರ್ಯಕ್ರಮ ಏರ್ಪಡಿಸುವ ಸಾಧ್ಯತೆ ಇದೆ. ಪ್ರತಿಮೆಗಳ ಕೆಳ ಭಾಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಎಂದು ಬರೆಯಲಾಗಿದ್ದು, ಹೀಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಈ ಪ್ರತಿಮೆ ಸ್ಥಾಪನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮತ್ತೊಂದು ಕಡೆ ನಗರದ ರಂಜಿತಾ ಹೋಟೆಲ್ ಮುಂಭಾಗದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಎರಡು ಪ್ರತಿಮೆಗಳನ್ನು ಕರವೇ ಕಾರ್ಯಕರ್ತರು ಪ್ರತಿಷ್ಟಾಪಿಸಿದ್ದಾರೆ ಎನ್ನಲಾಗಿದೆ. ಈ ಎರಡು ಪ್ರತಿಮೆಗಳನ್ನು ಬೆಂಗಳೂರಿನಿಂದ ಪ್ರತಿಮೆಗಳನ್ನು ತರಲಾಗಿದೆ ಎನ್ನಲಾಗಿದೆ. ರಾತ್ರಿ ಬೆಳಾಗುವುದರಲ್ಲಿ ಒಂದೇ ನಗರದಲ್ಲಿ ಎರಡು ಪ್ರತಿಮೆಗಳು ನಿರ್ಮಾಣವಾಗಿರಿವುದು ತೀವ್ರ ಕುತೂಹಕ್ಕೆ ಕಾರಣವಾಗಿದೆ.
ಈ ಪ್ರತಿಮೆಗಳ ನಿರ್ಮಾಣದ ಹಿಂದಿನ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಈ ಬಗ್ಗೆ ಸ್ವತಃ ಕರವೇ ಕಾರ್ಯಕರ್ತರೇ ಸ್ಪಷ್ಟನೆ ನೀಡಬೇಕಿದೆ.ಆದರೆ ಬೆಳ್ಳಂಬೆಳಗ್ಗೆಯೇ ನಗರದಲ್ಲಿ ಪುನಿತ್ ರಾಜ್ ಕುಮಾರ್ ಹಾಗೂ ಕುವೆಂಪು ಅವರ ಪ್ರತಿಮೆಗಳನ್ನು ಕಂಡ ಸ್ಥಳೀಯರು ಖುಷಿಪಟ್ಟಿದ್ದು, ಪ್ರತಿಮೆ ನಿರ್ಮಾಣ ಬಗ್ಗೆ ಕನ್ನಡ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications