ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ: ಶಾಲಾ ಜೀಪ್ ಮರಕ್ಕೆ ಡಿಕ್ಕಿ, 15 ಮಂದಿಗೆ ಗಂಭೀರ ಗಾಯ

|
Google Oneindia Kannada News

ಚಿತ್ರದುರ್ಗ, ಜನವರಿ 03: ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದ ಶಾಲಾ ವಾಹನ ಮರಕ್ಕೆ ಡಿಕ್ಕಿ ಹೊಡೆದು ಶಿಕ್ಷಕರು ವಿದ್ಯಾರ್ಥಿಗಳು ಸೇರಿ 15 ಕ್ಕೂ ಹೆಚ್ಚುಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

ಬೆಂಗಳೂರು: ಕಾರು, ಲಾರಿ ಡಿಕ್ಕಿ, ಇಬ್ಬರು ಟೆಕ್ಕಿಗಳು ಸಾವುಬೆಂಗಳೂರು: ಕಾರು, ಲಾರಿ ಡಿಕ್ಕಿ, ಇಬ್ಬರು ಟೆಕ್ಕಿಗಳು ಸಾವು

ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದಾಗ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ಕ್ರೂಸರ್ ಜೀಪ್ ಮರಕ್ಕೆ ಡಿಕ್ಕಿಹೊಡೆದು, ಶಿಕ್ಷಕರು, ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹುಳಿಯಾರು ರಸ್ತೆಯಲ್ಲಿ ನಡೆದಿದೆ.

Cruiser Jeep collision: 15 injured

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದಗಣಿ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರವಾಸ ಮುಗಿಸಿ ಮಡಿಕೇರಿಯಿಂದ ಹಿಂದಿರುಗುವಾಗ ಹಿರಿಯೂರು ಬಳಿ ಘಟನೆ ನಡೆದಿದೆ. ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದ್ದು, ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

13 ಜೀವಗಳನ್ನು ಬಲಿತೆಗೆದುಕೊಂಡ ರಾಜಸ್ಥಾನದ ರಸ್ತೆ ಅಪಘಾತ13 ಜೀವಗಳನ್ನು ಬಲಿತೆಗೆದುಕೊಂಡ ರಾಜಸ್ಥಾನದ ರಸ್ತೆ ಅಪಘಾತ

ಗಾಯಾಳುಗಳನ್ನು ಹಿರಿಯೂರು ತಾಲೂಕು ಆಸ್ಪತ್ರೆ, ಚಿತ್ರದುರ್ಗ ಮತ್ತು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

English summary
A Cruiser jeep collided with tree and more than 15 were injured near Huliyaru of Hiriyur taluk in Chitradurga district. School students were from Hatti gold mine of Raichur district who were on education tour.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X