ಬಿಜೆಪಿ ನಾಯಕರು ಒಂದು ಮಾಸ್ಕ್ ಖರೀದಿ ಮಾಡಿದ್ದು 2,500ಕ್ಕೆ ನಾವು ಕೇವಲ 10-20 ರೂಪಾಯಿಗಷ್ಟೇ: ಡಿ.ಸುಧಾಕರ್
ಚಿತ್ರದುರ್ಗ, ನವೆಂಬರ್, 11: ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರ ಸವಾಲಿನ ಹೇಳಿಕೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡುವಂತಹ ಕೆಲಸಗಳನ್ನು ಮಾಡಿದ್ದಾರೆ. ಇನ್ನೂ ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿದ ಸಚಿವ ಡಿ.ಸುಧಾಕರ್ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಹೊರ ರಾಜ್ಯ ಚುನಾವಣೆ, ಬೈ ಎಲೆಕ್ಷನ್ಗೆ ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಹಣ ಬಳಕೆ ವಿಚಾರವಾಗಿ ಪ್ರಧಾನಿ ಮೋದಿ ಸವಾಲಿನ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಸ್ಟವಾಗಿ ಉತ್ತರ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರ ನಿಲುವೇ ನನ್ನ ನಿಲುವು ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೂ ಅಬಕಾರಿ ಇಲಾಖೆಯಲ್ಲಿ ಕೆಲಸ ಮಾಡಿದವನಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯ ಈ ವಿಚಾರ ಸತ್ಯಕ್ಕೆ ದೂರವಾದುದು. ಈ ವಿಚಾರವಾಗಿ ಸಿಎಂ ಸವಾಲ್ ಹಾಕಿದ್ದು, ಅವರ ನಿಲುವು ಸರಿ ಇದೆ. ಅಷ್ಟೊಂದು ಭ್ರಷ್ಟಾಚಾರ ಮಾಡುವುದಕ್ಕೆ ಆ ಇಲಾಖೆ ಭಾರೀ ಅಲ್ಲ ಎಂದರು.
ಕೊರೊನಾ ಸಮಯದಲ್ಲಿ ಬಿ.ಎಸ್.ಯಡಿಯೂರಪ್ಪ, ಶ್ರೀ ರಾಮುಲು ಭ್ರಷ್ಟಾಚಾರ ಮಾಡಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೊರೊನಾ ಸಮಯದಲ್ಲಿ 2,500 ರೂಪಾಯಿಗೆ ಒಂದು ಮಾಸ್ಕ್ ಖರೀದಿ ಮಾಡಿದ್ದಾರೆ. ನಾವು 10-20 ರೂಪಾಯಿ ಮಾಸ್ಕ್ ಖರೀದಿ ಮಾಡುತ್ತಿದ್ದೆವು. ಆದರೆ ಎರಡೂವರೆ ಸಾವಿರ ರೂಪಾಯಿಯ 3 ಲಕ್ಷ ಮಾಸ್ಟ್ ಖರೀದಿ ಮಾಡಿದ್ದಾರೆ. ಇದರಲ್ಲಿ ಹೊಸ ಸತ್ಯಾಂಶ ಇದೆಯೋ ಇಲ್ಲವೋ ನಿಮ್ಮ ಊಹೆಗೇ ಬಿಡುತ್ತೇನೆ. ಈ ವಿಚಾರವಾಗಿ ಉಪ್ಪು ತಿಂದವರು ನೀರು ಕುಡಿತಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕಾರಾವಧಿ ಡಿಸೆಂಬರ್ವರೆಗೆ ಮಾತ್ರ ಎಂಬ ಕೇಂದ್ರ ಸಚಿವ ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸುಧಾಕರ್ ಅವರು, ಜನಪರ ವಿಚಾರಗಳನ್ನು ಯಾವುದನ್ನೂ ಅವರು ಚರ್ಚೆ ಮಾಡಲ್ಲ. ನಾವು ಕೊಟ್ಟ ಗ್ಯಾರಂಟಿ ಎಷ್ಟು ಅನುಕೂಲ ಆಗಿದೆ ಅಂತಾ ಉಪ ಚುನಾವಣೆಯಲ್ಲಿ ಉತ್ತರ ಸಿಗಲಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಇದೀಗ ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಕ್ಕ ಉತ್ತರವನ್ನು ಈಗಾಗಲೇ ನೀಡಿದ್ದಾರೆ ಅಂತಾ ಸಚಿವ ಡಿ.ಸುಧಾಕರ್ ಅವರು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಕೊರೊನಾ ಸಮಯದಲ್ಲಿ ಬಿಜೆಪಿ ಮಾಡಿದ ಭ್ರಷ್ಟಚಾರಗಳನ್ನು ಎತ್ತಿಹಿಡಿಯುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ












Click it and Unblock the Notifications