ಕೆ.ಪೂರ್ಣಿಮಾಗೆ ಸಚಿವ ಸ್ಥಾನ ನೀಡುವಂತೆ ಗೊಲ್ಲ ಸಮುದಾಯ ಒತ್ತಾಯ
ಚಿತ್ರದುರ್ಗ, ಜುಲೈ 26: ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ಸ್ವೀಕರಿಸಲಿದ್ದು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಸಜ್ಜಾಗುತ್ತಿದೆ. ಈ ಸಂದರ್ಭದಲ್ಲಿ, ಗೊಲ್ಲ ಸಮಾಜಕ್ಕೂ ಒಂದು ಸಚಿವ ಸ್ಥಾನ ನೀಡಬೇಕು ಎಂದು ಚಿತ್ರದುರ್ಗದಲ್ಲಿ ಗೊಲ್ಲ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.
"ಸಚಿವ ಸಂಪುಟದಲ್ಲಿ ಗೊಲ್ಲ ಸಮಾಜಕ್ಕೆ ಒಂದು ಸಚಿವ ಸ್ಥಾನ ನೀಡಬೇಕು. ರಾಜ್ಯದಲ್ಲಿ ಗೊಲ್ಲ ಸಮುದಾಯದ ಸುಮಾರು 35 ಲಕ್ಷ ಜನಸಂಖ್ಯೆ ಇದ್ದು ರಾಜ್ಯದ ಏಕೈಕ ಶಾಸಕಿ ಕೆ.ಪೂರ್ಣಿಮಾಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿ, ಗೊಲ್ಲ ಸಮಾಜದ ಅಭಿವೃದ್ಧಿಗೆ ಸರ್ಕಾರ ಶ್ರಮಿಸಬೇಕು" ಎಂದು ಗೊಲ್ಲ ಸಮುದಾಯ ಮುಖಂಡರು ಆಗ್ರಹಿಸಿದ್ದಾರೆ.

ಚಿತ್ರದುರ್ಗದ ಹಿರಿಯೂರು ಕ್ಷೇತ್ರದ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಮಹಿಳಾ ಕೋಟದಲ್ಲಿ ಸಚಿವ ಸ್ಥಾನ ನೀಡಬೇಕು. ಕೇಂದ್ರ ಬಿಜೆಪಿ ವರಿಷ್ಠರು ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ನೀಡುವತ್ತ ಆಲೋಚಿಸಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.
More From
-
Annamalai: ಅಣ್ಣಾಮಲೈ ಮತ್ತು ರಾಜಕೀಯ ಉನ್ಮಾದ: ಶಿವಕುಮಾರ್ ಮೆಣಸಿನಕಾಯಿ ಬರಹ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications