ನಾನು ಕುರುಬ ಎಂದು ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ: ಈಶ್ವರಾನಂದಪುರಿ ಶ್ರೀ
ಚಿತ್ರದುರ್ಗ, ಫೆಬ್ರವರಿ 03: ನಾನು ಕುರುಬ ಸಮುದಾಯದ ಸ್ವಾಮೀಜಿ ಎನ್ನುವ ಕಾರಣಕ್ಕೆ ನನ್ನನ್ನು ಚನ್ನಕೇಶವ ದೇವಸ್ಥಾನದ ಗರ್ಭಗುಡಿ ಒಳಗೆ ಬಿಡಲಿಲ್ಲ. ದೇವಸ್ಥಾನಕ್ಕೆ ಹೋಗಿದ್ದಕ್ಕೆ ದೇವಾಲಯವನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಕನಕ ಗುರು ಪೀಠದ ಈಶ್ವರನಂದಪುರಿ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೆಹಳ್ಳಿಯಲ್ಲಿ ನಡೆದ ಪರಿವರ್ತನೆ ಹಾದಿಯಲ್ಲಿ ಮಠಗಳು ಗೋಷ್ಠಿಯಲ್ಲಿ ಮಾತನಾಡಿದ ಈಶ್ವರನಂದಪುರಿ ಸ್ವಾಮೀಜಿ, ಇತ್ತೀಚಿಗಷ್ಟೇ ಹೊಸದುರ್ಗ ತಾಲೂಕಿನ ಬಾಗೂರು ಗ್ರಾಮದಲ್ಲಿರುವ ಚೆನ್ನಕೇಶವ ದೇವಸ್ಥಾನಕ್ಕೆ ಹೋಗಿದ್ದೆವು. ಆದರೆ ಗರ್ಭಗುಡಿ ಒಳಗೆ ನಮ್ಮನ್ನು ಬಿಡಲಿಲ್ಲ ನಾವು ದೇವಸ್ಥಾನಕ್ಕೆ ಹೋದ ಕಾರಣಕ್ಕೆ ದೇವಸ್ಥಾನವನ್ನು ಸ್ವಚ್ಛಗೊಳಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಗ್ರಾಮದಲ್ಲಿ ವೈಕುಂಠ ಏಕಾದಶಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ದೇವಾಲಯ ದೇವಸ್ಥಾನಕ್ಕೆ ಹೋಗಿದ್ದಾಗ ಪೂಜಾರಿ ನಮಗೆ ನರಕ ತೋರಿಸಿಬಿಟ್ಟರು. ಹೆಣ್ಣುಮಕ್ಕಳಿಗೆಲ್ಲಾ ಗರ್ಭಗುಡಿ ಪ್ರವೇಶಿಸಲು ಬಿಟ್ಟಿದ್ದರು. ಆದರೆ ಮಠಾಧೀಶರದ ನಮಗೆ ಚನ್ನಕೇಶವ ದೇಗುಲದ ಗರ್ಭಗುಡಿಗೆ ಹೋಗಲು ಬಿಡಲಿಲ್ಲ. ಮುಜರಾಯಿ ಇಲಾಖೆ ದೇವಾಲಯ ಎಂದು ಗೊತ್ತಿದ್ದರೆ ನಾವು ಅಲ್ಲಿಯೇ ಪ್ರತಿಭಟಿಸುತ್ತಿದ್ದೆವು ಎಂದರು.
ಉಡುಪಿಯಲ್ಲಿ ಕನಕದಾಸರು ಪ್ರತಿಭಟಿಸಿದಂತೆ ನಾವು ಕೂಡ ಪ್ರತಿಭಟನೆ ಮಾಡುತ್ತಿದ್ದೇವು. ಆದರೆ ದೇವಾಲಯ ಮುಜರಾಯಿ ಇಲಾಖೆ ದೇಗುಲ ಎಂಬುದು ನಮಗೆ ತಿಳಿದಿರಲಿಲ್ಲ. ದೇವಸ್ಥಾನದ ಒಳಗೆ ಕುರುಬ ಸಮುದಾಯದ ಸ್ವಾಮೀಜಿ ಬಂದಿದ್ದಾರೆ ಎಂಬ ಕಾರಣಕ್ಕೆ ದೇವಸ್ಥಾನವನ್ನು ಸ್ವಚ್ಛಗೊಳಿಸಿದ್ದಾರೆ. ಇನ್ನು ಮುಂದೆ ಎಂದೆಂದಿಗೂ ಬಾಗೂರು ಗ್ರಾಮದ ಚನ್ನಕೇಶವ ದೇವಸ್ಥಾನಕ್ಕೆ ನಾವು ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾದರ ಚೆನ್ನಯ್ಯ ಸ್ವಾಮೀಜಿ, ಸಾಣೆಹಳ್ಳಿ ತರಬಾಳು ಮಠದ ಶ್ರೀ ಪಂಡಿತಾರಾಧ್ಯಶ್ರೀ ಸ್ವಾಮೀಜಿ, ಕುಂಚಟಿಗ ಮಠದ ಶಾಂತವೀರ ಸ್ವಾಮೀಜಿ, ಭಗೀರಥ ಮಠದ ಪುರುಷೋತ್ತಮನದ ಪುರಿ ಸ್ವಾಮೀಜಿ ಉಪಸ್ಥಿತರಿದ್ದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications