ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ವರ್ಗಾವಣೆ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜುಲೈ 28: ಚಿತ್ರದುರ್ಗ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Recommended Video

India and Nepal border dispute explained | Oneindia Kannada

ಚಿತ್ರದುರ್ಗ ಜಿಲ್ಲೆಗೆ ಕವಿತಾ ಎಸ್. ಮಣ್ಣಿಕೇರಿ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿದೆ. ಈ ಹಿಂದೆಯೂ ವಿನೋತ್ ಪ್ರಿಯಾ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ವರ್ಗಾವಣೆ ಪ್ರಶ್ನಿಸಿ ವಿನೋತ್ ಪ್ರಿಯಾ ಅವರು ಸಿಎಟಿ ಮೊರೆ ಹೋಗಿದ್ದರು. ಸಿಎಟಿ ಆದೇಶದನ್ವಯ ಅವರು ಚಿತ್ರದುರ್ಗ ಜಿಲ್ಲೆಯಲ್ಲೇ ಡಿಸಿಯಾಗಿ ಮುಂದುವರೆದಿದ್ದರು.

ತುರ್ತು ಕೆಲಸವಿದ್ದರೆ ಅಂತರ್ ಜಿಲ್ಲೆ, ರಾಜ್ಯ ಇ-ಪಾಸ್: ಚಿತ್ರದುರ್ಗ ಡಿಸಿತುರ್ತು ಕೆಲಸವಿದ್ದರೆ ಅಂತರ್ ಜಿಲ್ಲೆ, ರಾಜ್ಯ ಇ-ಪಾಸ್: ಚಿತ್ರದುರ್ಗ ಡಿಸಿ

Chitradurga DC Vinoth Priya Transfered To Bengaluru

ಇದೀಗ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಸಾಮಾನ್ಯ ವರ್ಗಾವಣೆಯಲ್ಲಿ ವಿನೋತ್ ಪ್ರಿಯಾ ಅವರನ್ನು ವರ್ಗಾವಣೆ ಮಾಡಿದೆ. ತಕ್ಷಣವೇ ವರ್ಗಾವಣೆ ಜಾರಿಯಾಗುವ ಆದೇಶ ಹೊರಡಿಸಿದ್ದು, ಮುಂದಿನ ಆದೇಶದವರೆಗೂ ಬೆಂಗಳೂರಿನ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ನಿರ್ದೇಶಕರಾಗಿ ನಿಯೋಜಿಸಿದೆ. ಕಳೆದ ಎರಡು ವರ್ಷಗಳಿಂದ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ವಿನೋತ್ ಪ್ರಿಯಾ ಅಧಿಕಾರ ನಡೆಸುತ್ತಿದ್ದರು.

English summary
The state government has ordered the transfer of Chitradurga DC Vinoth Priya. Kavitha S Mannikeri has been appointed as the new DC,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X