ವಿಡಿಯೋ; ಚಿತ್ರದುರ್ಗದಲ್ಲಿ ಚಾಲಕ ರಹಿತ ಯುದ್ಧ ವಿಮಾನದ ಹಾರಾಟ
ಚಿತ್ರದುರ್ಗ, ಜುಲೈ 01; ಚಿತ್ರದುರ್ಗದ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಬಳಿ ಇರುವ ಡಿಆರ್ಡಿಒ ಅಟಾನಮಸ್ ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ಡೆಮಾನ್ಸ್ಟ್ರೇಟರ್ ಮೊಟ್ಟಮೊದಲ ಚಾಲಕ ರಹಿತ ವಿಮಾನದ ಯಶಸ್ವಿ ಹಾರಾಟ ನಡೆಸಿದೆ.
ಈ ಪರೀಕ್ಷಾ ಹಾರಾಟ ಶುಕ್ರವಾರ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ನಲ್ಲಿ ಯಶಸ್ವಿಯಾಗಿ ನಡೆಸಲಾಯಿತು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ತಿಳಿಸಿದೆ.
"ಸಂಪೂರ್ಣ ಸ್ವಾಯತ್ತ ಮೋಡ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಚಾಲಕ ರಹಿತ ವಿಮಾನವು ಟೇಕ್-ಆಫ್, ವೇ ಪಾಯಿಂಟ್ ನ್ಯಾವಿಗೇಷನ್ ಮತ್ತು ಸರಳವಾದ ಟಚ್ಡೌನ್ ಒಳಗೊಂಡಂತೆ ಪರಿಪೂರ್ಣ ಹಾರಾಟ ನಡೆಸಿದೆ " ಎಂದು ತಿಳಿಸಿದೆ.

ಡಿಆರ್ಡಿಒ ಅಡಿಯಲ್ಲಿನ ಪ್ರಮುಖ ಸಂಶೋಧನಾ ಪ್ರಯೋಗಾಲಯವಾದ ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಷ್ಮೆಂಟ್ ವಿನ್ಯಾಸಗೊಳಿಸಿದ ಮತ್ತು ಅಭಿವೃದ್ಧಿಪಡಿಸಿದ ಮಾನವರಹಿತ ಯುದ್ಧ ವಿಮಾನವು ಸಣ್ಣ, ಟರ್ಬೋಫ್ಯಾನ್ ಎಂಜಿನ್ನಿಂದ ಚಾಲಿತವಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ವಿಮಾನವು ಸ್ವಾವಲಂಬನೆಯ ಕಡೆಗೆ ತಂತ್ರಜ್ಞಾನಗಳನ್ನು ಸಾಬೀತುಪಡಿಸುವ ವಿಷಯದಲ್ಲಿ ಪ್ರಮುಖ ಮೈಲಿಗಲ್ಲಾಗಿದ್ದು, ಭವಿಷ್ಯದ ಮಾನವರಹಿತ ವಿಮಾನಗಳ ಅಭಿವೃದ್ಧಿಗೆ ನಿರ್ಣಾಯಕ ತಂತ್ರಜ್ಞಾನಗಳನ್ನು ಸಾಬೀತುಪಡಿಸುವ ವಿಷಯದಲ್ಲಿ ಈ ಹಾರಾಟವು ಪ್ರಮುಖ ಮೈಲಿಗಲ್ಲಾಗಿದೆ . ನಿರ್ಣಾಯಕ ಕಾರ್ಯತಂತ್ರದ ರಕ್ಷಣಾ ತಂತ್ರಜ್ಞಾನದಲ್ಲಿ ಮಾನವರಹಿತ ವೈಮಾನಿಕ ವಾಹನವನ್ನು ವಿನ್ಯಾಸಗೊಳಿಸಲಾಗಿದೆ ಎಂದು ಡಿಆರ್ ಡಿಒ ಹೇಳಿದೆ.
#WATCH | In a major success towards developing unmanned combat aircraft, the maiden flight of the Autonomous Flying Wing Technology Demonstrator was carried out successfully from the Aeronautical Test Range, Chitradurga, Karnataka today: DRDO officials pic.twitter.com/9PjX2dBkIr
— ANI (@ANI) July 1, 2022
ಕೇಂದ್ರ ರಕ್ಷಣಾ ಸಚಿವ ಅಭಿನಂದನೆ; ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ವಾಯತ್ತ ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ವಿಮಾನ ಯಶಸ್ವಿ ಹಾರಾಟ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.
"ಚಿತ್ರದುರ್ಗದ DRDOದಲ್ಲಿ ಚಾಲಕರಹಿತ ವಿಮಾನ ಹಾರಾಟ ನಡೆಸಿದೆ. DRDOದ ಏರೊನೆಟಿಕಲ್ ಟೆಸ್ಟ್ ರೇಂಜ್ ನಲ್ಲಿ ಯಶಸ್ವಿ ಚೊಚ್ಚಲ ಹಾರಾಟ ಹಾಗೂ ಸ್ವಾಯತ್ತ ವಿಮಾನಗಳ ಪ್ರಮುಖ ಸಾಧನೆಯಾಗಿದೆ. ಅಲ್ಲದೆ ಚಿತ್ರದುರ್ಗದ ಎಟಿಆರ್ನಿಂದ ಅಟಾನಮಸ್ ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ಡೆಮಾನ್ಸ್ಟ್ರೇಟರ್ನ ಯಶಸ್ವಿ ಚೊಚ್ಚಲ ಹಾರಾಟ ಸ್ವಾಯತ್ತ ವಿಮಾನಗಳ ಕಡೆಗೆ ಒಂದು ಪ್ರಮುಖ ಸಾಧನೆಯಾಗಿದೆ. ಇದು ನಿರ್ಣಾಯಕ ಮಿಲಿಟರಿ ವ್ಯವಸ್ಥೆಗಳ ವಿಷಯದಲ್ಲಿ ಆತ್ಮನಿರ್ಭರ್ ಭಾರತಕ್ಕೆ ದಾರಿ ಮಾಡಿಕೊಡುತ್ತದೆ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications