ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ; ಶ್ರೀನಿವಾಸ್ ಬಿರುಸಿನ ಪ್ರಚಾರ
ಚಿತ್ರದುರ್ಗ, ಅಕ್ಟೋಬರ್ 16: ಒಂದೆಡೆ ಶಿರಾ ಮತ್ತು ಆರ್.ಆರ್. ನಗರ ಕ್ಷೇತ್ರಗಳ ಉಪಚುನಾವಣೆ ರಂಗೇರುತ್ತಿದ್ದರೆ, ಇತ್ತ ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಅಭ್ಯರ್ಥಿಗಳೂ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.
5 ಜಿಲ್ಲೆಗಳ 38 ತಾಲೂಕುಗಳನ್ನೊಳಗೊಂಡ ವಿಧಾನ ಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾನ ಇದೇ ತಿಂಗಳ 28ರಂದು ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾದ ಡಿ.ಟಿ. ಶ್ರೀನಿವಾಸ್ ಮತಯಾಚನೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಾಬು, ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ, ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡ ಈ ಮೂರು ಪಕ್ಷದ ಅಭ್ಯರ್ಥಿಗಳ ವಿರುದ್ಧ ಕಣಕ್ಕೆ ಇಳಿದಿದ್ದಾರೆ.

ಹೆಚ್ಚು ಮತಗಳ ಸೇರ್ಪಡೆ ಮಾಡಿಸಿದ್ದ ಶ್ರೀನಿವಾಸ್
ಹಿರಿಯೂರು ಕ್ಷೇತ್ರದ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಡಿ.ಟಿ. ಶ್ರೀನಿವಾಸ್ ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಪಕ್ಷದಿಂದ ಟಿಕೆಟ್ ಬಯಸಿದ್ದರು. ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಚಿತ್ರದುರ್ಗ, ತುಮಕೂರು, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ (ಹರಿಹರದಿಂದ ಚಿಕ್ಕಬಳ್ಳಾಪುರದವರೆಗೆ) ಒಂದು ವರ್ಷ ಮತದಾರರ ಪಟ್ಟಿಯಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ಹೆಸರು ಸೇರ್ಪಡೆ ಮಾಡಿಸುವಲ್ಲಿ ಸಾಕಷ್ಟು ಶ್ರಮ ಪಟ್ಟಿದ್ದರು. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಸುಮಾರು 85 ಸಾವಿರ ಮತಗಳು ಇದ್ದಿದ್ದು, ಈಗ 1 ಲಕ್ಷ 30 ಮತಗಳು ನೋಂದಣಿಯಾಗಿವೆ.

ಚುನಾವಣೆ ಘೋಷಣೆಗೆ ಮುನ್ನವೇ ತಯಾರಿ
ಹಿರಿಯೂರಿನಲ್ಲಿ 1688 ಮತಗಳಿದ್ದಿದ್ದು ಸುಮಾರು 4000 ಸಾವಿರಕ್ಕೂ ಹೆಚ್ಚು ಮತದಾರರ ಹೆಸರು ಸೇರ್ಪಡೆಯಾಗಿವೆ. ಚಳ್ಳಕೆರೆ, ಶಿರಾ, ಪಾವಗಡ, ಜಗಳೂರು ಸೇರಿದಂತೆ ಮತ್ತಿತರ ಕಡೆಗಳಲ್ಲಿ ಕಡಿಮೆ ಇದ್ದ ಮತಗಳು ಹೆಚ್ಚಿನದಾಗಿ ನೋಂದಣಿ ಮಾಡಿಸಲು ಶ್ರೀನಿವಾಸ್ ಶ್ರಮಪಟ್ಟಿದ್ದಾರೆ. ಚುನಾವಣೆ ಘೋಷಣೆ ಆಗುವ ಮೊದಲೇ ಆಗ್ನೇಯ ಕ್ಷೇತ್ರಕ್ಕೆ ಒಳಪಡುವ ಜಿಲ್ಲೆಯ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ಒಮ್ಮೆ ಭೇಟಿ ಮಾಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಸಭೆಗಳನ್ನು ನಡೆಸಿ, ಚುನಾವಣೆಗೆ ತಯಾರಿ ಮಾಡಿಕೊಂಡಿದ್ದರು. ಹಿಂದಿನ ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ಈ ಚುನಾವಣೆ ಕೊರೊನಾ ಹಿನ್ನೆಲೆಯಲ್ಲಿ ಮುಂದೂಡುತ್ತಾ ಬಂದಿತ್ತು.

ನಾಮಪತ್ರ ಹಿಂಪಡೆಯುವಂತೆ ಒತ್ತಡ
ಪಕ್ಷೇತರ ಅಭ್ಯರ್ಥಿಯಾಗಿ ಡಿ.ಟಿ. ಶ್ರೀನಿವಾಸ್ ಸ್ಪರ್ಧಿಸಿದ್ದು, ಇವರ ಸ್ಪರ್ಧೆಯಿಂದ ಬಿಜೆಪಿ ಅಭ್ಯರ್ಥಿ ಎಂ. ಚಿದಾನಂದ ಗೌಡ ಅವರಿಗೆ ಹಿನ್ನಡೆಯಾಗುವ ಸಾಧ್ಯತೆಯಿದ್ದು, ಪಕ್ಷಕ್ಕೆ ಮುಜುಗರ ಉಂಟಾಗುವ ದೃಷ್ಟಿಯಿಂದ ನಾಮಪತ್ರ ಹಿಂಪಡೆಯುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿ.ಟಿ. ರವಿ, ಡಿಸಿಎಂ ಡಾ. ಅಶ್ವಥ್ ನಾರಾಯಣ್ ನವರು ಶ್ರೀನಿವಾಸ್ ಜೊತೆ ಮಾತುಕತೆ ನಡೆಸಿ ನಾಮಪತ್ರ ಹಿಂಪಡೆಯುವಂತೆ ಸಭೆ ನಡೆಸಿದ್ದರು.
Recommended Video

ಪಟ್ಟು ಸಡಿಲಿಸದ ಶ್ರೀನಿವಾಸ್
ಆದರೆ ಈ ಒತ್ತಡಕ್ಕೆ ಪಟ್ಟು ಸಡಿಲಿಸದ ಶ್ರೀನಿವಾಸ್, ಯಾವುದೇ ಕಾರಣಕ್ಕೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ, ನನಗೆ ಟಿಕೆಟ್ ತಪ್ಪಿಸಿದ್ದು ಏಕೆ? ಒಂದು ವರ್ಷದಿಂದ ಮತದಾರರ ಹೆಸರು ಸೇರ್ಪಡೆಗೆ ಶ್ರಮಿಸಿದ್ದೇನೆ. ನಾಮಪತ್ರ ವಾಪಸ್ ಹಿಂಪಡೆಯುವುದಿಲ್ಲ. ಬದಲಾಗಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸುತ್ತೆನೆಂದು ಸಂಧಾನಕ್ಕೆ ಬಂದಿದ್ದ ನಾಯಕರಿಗೆ ಶ್ರೀನಿವಾಸ್ ಉತ್ತರ ನೀಡಿದ್ದಾರೆ. ಅದರಂತೆ ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಗಳಲ್ಲಿ ಬಿರುಸಿನ ಮತ ಪ್ರಚಾರ ನಡೆಸುತ್ತಿದ್ದಾರೆ. ಇವರಿಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications