ಪಕ್ಷೇತರ ಅಭ್ಯರ್ಥಿಯಾಗಿ ಶ್ರೀನಿವಾಸ್ ನಾಮಪತ್ರ ಸಲ್ಲಿಕೆ; ಬಿಜೆಪಿ ಅಭ್ಯರ್ಥಿಗೆ ಸೋಲಿನ ಭೀತಿ
ಚಿತ್ರದುರ್ಗ, ಅಕ್ಟೋಬರ್ 7: ಚಿತ್ರದುರ್ಗ, ತುಮಕೂರು, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ 38 ತಾಲೂಕುಗಳನ್ನೊಳಗೊಂಡ ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಇದೇ ತಿಂಗಳ 28ರಂದು ನಡೆಯಲಿದ್ದು, ಬಿಜೆಪಿಗೆ ಸಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಹಿರಿಯೂರು ಕ್ಷೇತ್ರದ ಶಾಸಕಿ ಕೆ ಪೂರ್ಣಿಮಾ ಅವರ ಪತಿ ಡಿಟಿ ಶ್ರೀನಿವಾಸ್ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ಇದರ ಜೊತೆಗೆ ಡಾ. ಹಾಲನೂರು ಎಸ್. ಲೇಪಾಕ್ಷಿ ಕೂಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡ ಅವರಿಗೆ ಸೋಲಿನ ಭೀತಿ ಎದುರಾಗಿದೆ.
ಶಾಸಕಿ ಕೆ. ಪೂರ್ಣಿಮಾ ಪತಿ ಶ್ರೀನಿವಾಸ್ ಬಿಜೆಪಿಯ ಟಿಕೆಟ್ ಪಡೆಯಲು ಪ್ರಬಲ ಆಕಾಂಕ್ಷಿಯಾಗಿದ್ದರು. ಟಿಕೆಟ್ ತಪ್ಪಿದಾಗಿಂದಲೂ ಅವರು ಪಕ್ಷಕ್ಕೆ ಸಡ್ಡು ಹೊಡೆಯುವ ಸೂಚನೆ ನೀಡಿದ್ದರು. ಅಂತಿಮವಾಗಿ ಇಂದು ನಾಮಪತ್ರ ಸಲ್ಲಿಸಿ ಅಖಾಡಕ್ಕೆ ಇಳಿದಿದ್ದಾರೆ. ಇವರ ಜೊತೆಗೆ ಡಾ. ಹಲನೂರು ಎಸ್, ಲೇಪಾಕ್ಷಿ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಇಬ್ಬರು ಪಕ್ಷೇತರ ಅಭ್ಯರ್ಥಿಗಳ ಸ್ಪರ್ಧೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಂ. ಚಿದಾನಂದ ಗೌಡಗೆ ಬಹುತೇಕ ಸೋಲಿನ ಭೀತಿ ಎದುರಾಗಿದೆ.

ಗೊಲ್ಲ ಮತ್ತು ಲಿಂಗಾಯತ ಮತಗಳು ನಿರ್ಣಾಯಕ: ವಿಧಾನಪರಿಷತ್ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಗೊಲ್ಲ ಮತ್ತು ಲಿಂಗಾಯತ ಮತಗಳೇ ನಿರ್ಣಾಯಕ ಪಾತ್ರ ವಹಿಸುತ್ತದೆ. ಗೊಲ್ಲ ಸಮುದಾಯಕ್ಕೆ ಸೇರಿದ ಡಿ.ಟಿ. ಶ್ರೀನಿವಾಸ್ ಹಾಗೂ ಲಿಂಗಾಯತ ಸಮುದಾಯಕ್ಕೆ ಸೇರಿದ ಡಾ. ಹಾಲನೂರು ಎಸ್ ಲೇಪಾಕ್ಷಿ ತಮ್ಮ ಸಮುದಾಯದ ಮತಗಳನ್ನು ಸೆಳೆಯಲಿದ್ದಾರೆ.
ಐದು ಜಿಲ್ಲೆಗಳಲ್ಲಿ ಡಿ.ಟಿ. ಶ್ರೀನಿವಾಸ್ ಜನರಿಗೆ ಚಿರಪರಿಚಿತರಾಗಿದ್ದು ಹೆಚ್ಚಿನ ಮತಗಳು ಲಭಿಸುವ ನಿರೀಕ್ಷೆಯಿದೆ. ಬಿಜೆಪಿ ನೆಚ್ಚಿಕೊಂಡಿರುವ ಲಿಂಗಾಯತ ಮತಗಳು ಎಸ್ ಲೇಪಾಕ್ಷಿ ಪಾಲಾಗಿ ಬಿಜೆಪಿ ಅಭ್ಯರ್ಥಿ ಠೇವಣಿ ಕಳೆದುಕೊಂಡರು ಅಚ್ಚರಿ ಪಡುವಂತಿಲ್ಲ.

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಪೈಪೋಟಿ: ಆಗ್ನೇಯ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿರುವುದು ಬಹುತೇಕ ಕಡಿಮೆ. ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳೇ ಪ್ರತಿ ಬಾರಿ ಗೆಲುವು ಸಾಧಿಸಿಕೊಂಡು ಬಂದಿದ್ದಾರೆ. ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವ ರಮೇಶ್ ಬಾಬು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿಯಾಗಿ ಎಂ. ಚಿದಾನಂದ ಗೌಡ, ಜೆಡಿಎಸ್ ಅಭ್ಯರ್ಥಿಯಾಗಿ ಚೌಡರೆಡ್ಡಿ ತೂಪಲ್ಲಿ ಅಖಾಡಕ್ಕೆ ಇಳಿದಿದ್ದಾರೆ.
ಒಟ್ಟಾರೆ ಜೆಡಿಎಸ್ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ಮತ್ತು ಹಿರಿಯೂರು ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಪತಿ ಡಿ.ಟಿ. ಶ್ರೀನಿವಾಸ್ ಮಧ್ಯೆ ನೇರ ಪೈಪೋಟಿ ನಡೆಯುತ್ತಿದ್ದು, ಇವರಿಬ್ಬರಲ್ಲಿ ಗೆಲುವು ಸಾಧಿಸುವವರು ಯಾರು ಎಂದು ಕಾದು ನೋಡಬೇಕಿದೆ.
Recommended Video
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications