'ಬಿ.ಕೆ ಹರಿಪ್ರಸಾದ್ ದೊಡ್ಡ ನಾಯಕ, ಆದ್ರೆ ಇಷ್ಟೊಂದು ಹೊಟ್ಟೆ ಕಿಚ್ಚು ಇರಬಾರದು'
ಚಿತ್ರದುರ್ಗ, ಸೆಪ್ಟೆಂಬರ್ 12: ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಒಬ್ಬ ದೊಡ್ಡ ನಾಯಕ, ಅವರಿಗೆ ಇಷ್ಟೊಂದು ಹೊಟ್ಟೆ ಕಿಚ್ಚು ಇರಬಾರದು ಎಂದು ಕುರುಬ ಸಮುದಾಯದ ಈಶ್ವರನಂದಪುರಿ ಶ್ರೀಗಳು ಆಕ್ರೋಶ ಹೊರ ಹಾಕಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದ ಧಾರ್ಮಿಕ ಸಭೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಒಬ್ಬ ದೊಡ್ಡ ನಾಯಕ ಅವರಿಗೆ ಇಷ್ಟು ಹೊಟ್ಟೆ ಕಿಚ್ವು ಇರಬಾರದು. ಎರಡನೇ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆದರು. ಅವರು ಒಂದು ಸಮುದಾಯವನ್ನು ಬೆಳೆಸಿದರು. ಕುರುಬರನ್ನು ಬೆಳೆಸಿದ್ದರು ಅಂತ ಹೇಳುತ್ತಿದ್ದಾರೆ. ಈ ರೀತಿ ಹೇಳಬಾರದು, ಹರಿಪ್ರಸಾದ್ ಒಬ್ಬ ಪ್ರಬುದ್ಧ ರಾಜಕಾರಣಿ ಅವರು ಹಾಗೆ ಮಾತಾನಾಡಬಾರದಿತ್ತು ಎಂದರು.

ಇತ್ತೀಚಿಗಷ್ಟೇ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಹರಿಪ್ರಸಾದ್, ಪಂಚೆ, ವಾಚ್ ಕಟ್ಟಿಕೊಂಡು ಸಿಎಂ ಆಗಿದ್ದಾರೆ ಎಂದು ಹೆಸರು ಹೇಳದೇ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ದಲಿತರನ್ನು ಸಿಎಂ ಮಾಡಬಹುದಿತ್ತು ಎಂದಿದ್ದರು. ಈ ಹೇಳಿಕೆಯನ್ನು ಶ್ರೀಗಳು ಖಂಡಿಸಿದ್ದಾರೆ. 2013ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಸಚಿವ ಸಂಪುಟದಲ್ಲಿ ಎಷ್ಟು ಜನ ಕುರುಬರು ಇದ್ದರು ಎಂದು ಪ್ರಶ್ನೆ ಮಾಡಿದ್ದಾರೆ.
ಸಿದ್ದರಾಮಯ್ಯ ಎಲ್ಲಾ ಸಮುದಾಯದ ನಾಯಕ. ಜಾತಿ ರಾಜಕಾರಣ ಯಾವತ್ತು ಮಾಡಲಿಲ್ಲ. ಅವರು ಬಡವರು, ಹಿಂದುಳಿದ, ಮಹಿಳೆಯರ, ದಲಿತರ ಪರವಾಗಿ ಧ್ವನಿ ಎತ್ತರುವ ಜನ ನಾಯಕರು. ಇಂತಹ ನಾಯಕನ ಬಗ್ಗೆ ಜನತೆಗೆ ಹರಿಪ್ರಸಾದ್ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದನ್ನು ನಾನು ಯಾಕೆ ಪ್ರಸ್ತಾಪ ಮಾಡಿದೆ ಎಂದರೆ ಯಾರು ಕೇಳದೇ ಹೋದರೆ, ಮಾತಾನಾಡದೇ ಹೋದರೆ ಜನರಿಗೆ ತಪ್ಪು ಸಂದೇಶ ಹೋಗುತ್ತದೆ ಎಂದರು.
ಜಾತಿ ವರ್ಕ್ ಔಟ್ ಮಾಡಿದರೆ ಕುರುಬರು 10-12 ಜನ ಮಂತ್ರಿಗಳು ಇರುತ್ತಿದ್ದರು. ಸಿದ್ದರಾಮಯ್ಯ ಹಾಗೆ ಮಾಡಲ್ಲಿಲ್ಲ. ಸಿದ್ದರಾಮಯ್ಯ ಅಧಿಕಾರಕ್ಕಾಗಿ ರಾಜಕೀಯ ಮಾಡಲಿಲ್ಲ ಜನರಿಗೊಸ್ಕೊರ ರಾಜಕೀಯ ಮಾಡಿದರು. ಇದನ್ನು ಬಿ.ಕೆ ಹರಿಪ್ರಸಾದ್ ಅರ್ಥ ಮಾಡಿಕೊಳ್ಳಬೇಕು. ಹಿಂದುಳಿದ ಸಮಾಜಗಳು ಒಂದಾಗಬೇಕು ಎಂದು ಸಂದೇಶವನ್ನು ಶ್ರೀಗಳು ನೀಡಿದ್ದಾರೆ.

ಕುರುಬರು ಎಲ್ಲಾ ಸಮುದಾಯದ ಪರವಾಗಿ ಇದ್ದಾರೆ ಎಂದು ಸಂದೇಶ ಕೊಟ್ಟಂತಹ ವ್ಯಕ್ತಿ ಯಾರಾದರೂ ಇದ್ದರೇ ಅದೇ ಸಿದ್ದರಾಮಯ್ಯ .ಅವಕಾಶಗಳನ್ನು ಹಂಚಿಕೊಳ್ಳಲು ಎಲ್ಲರೂ ಬರುತ್ತಾರೆ ಆದರೆ ಉಪಕಾರ ಮಾಡಿದವರನ್ನು ಎಲ್ಲರೂ ಬೇಗ ಮರೆಯುತ್ತಾರೆ. ಹೈಕಮಾಂಡ್ ಒಪ್ಪಿಗೆ ಹಾಗೂ 136 ಶಾಸಕರಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾರೆ ಎಂದು ಈಶ್ವರನಂದ ಶ್ರೀಗಳು ತಿಳಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications