ಚಿತ್ರದುರ್ಗದಲ್ಲಿದೆ ಲೈಂಗಿಕ ಅಲ್ಪಸಂಖ್ಯಾತರ ಡಾಬಾ

ಪುನಾ-ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಆರಂಭಿಸಿರುವ ಸತಾರಾ ಡಾಬವಿದೆ. ಚಿತ್ರದುರ್ಗ ಜಿಲ್ಲೆಯ ತಿಪ್ಪಾರೆಡ್ಡಿ ಆಟೋ ನಗರ ಬಳಿ ಈ ಡಾಬಾವನ್ನು ಭಾವನಮ್ಮ ಎಂಬುವವರು ತೆರೆದಿದ್ದಾರೆ. ನಾಲ್ಕು ತಿಂಗಳ ಹಿಂದೆ ಆರಂಭವಾದ ಡಾಬಾದಲ್ಲಿ ಕೆಲಸಗಾರನ್ನಾಗಿ ಲೈಗಿಂಕ ಅಲ್ಪಸಂಖ್ಯಾತನ್ನೇ ನೇಮಿಸಿಕೊಳ್ಳಲಾಗಿದೆ.
ಭಾವನಮ್ಮ ಡಾಬಾ ಆರಂಭಿಸುವ ಮೂಲಕ ತಮ್ಮದೇ ಸಮುದಾಯದ ಲತಿಕಾ, ತಿಲಕಾ, ರಜಿಯಮ್ಮ ಮುಂತಾದವರಿಗೆ ಉದ್ಯೋಗ ನೀಡಿದ್ದಾರೆ. ಪ್ರತಿದಿನ ಡಾಬಾದಲ್ಲಿ 5000 ರೂ.ಗಳಿಂದ 10,000 ರೂ.ಗಳವರಗೆ ವ್ಯಾಪಾರವಾಗುತ್ತದೆ. ಪ್ರತಿ ಡಾಬಾಗಳಲ್ಲಿ ಸಿಗುವಂತೆ ರೊಟಿ, ಸಬ್ಜಿ ಮುಂತಾದ ತಿಂಡಿಗಳು ಇಲ್ಲಿ ದೊರೆಯುತ್ತದೆ.
ಸುಮಾರು ನಾಲ್ಕು ಲಕ್ಷ ರೂ.ಗಳಲ್ಲಿ ಈ ಡಾಬಾವನ್ನು ಆರಂಭಿಸಿದ್ದಾರೆ ಭಾವನಮ್ಮ, ಹೆದ್ದಾರಿಯಲ್ಲಿ ಸಾಗುವ ಲಾರಿ ಮತ್ತು ಇತರ ವಾಹನ ಚಾಲಕರು ಮೊದಮೊದಲು ಡಾಬಾಕ್ಕೆ ಬರಲು ಹಿಂದೇಟು ಹಾಕುತ್ತಿದ್ದರು. ಸದ್ಯ ಅವರು ಇತರ ಡಾಬಾಗಳಂತೆ ಸತಾರಾ ಡಾಬಾಕ್ಕೆ ಯಾವುದೇ ಮುಜುಗರವಿಲ್ಲದಂತೆ ಆಗಮಿಸುತ್ತಾರೆ.
ಮೊದಲಿನಿಂದಲೂ ಯಾವುದಾದದರೂ ಉದ್ಯೋಗ ಮಾಡಬೇಕು ಎನ್ನುವ ಛಲ ಹೊಂದಿದ್ದ ಭಾವನಮ್ಮ ತಮ್ಮ ಸಮುದಾಯದ ಕೆಲವರೊಂದಿಗೆ ಸೇರಿಕೊಂಡು ಈ ಡಾಬಾ ಆರಂಭಿಸಿದ್ದಾರೆ. ಸರ್ಕಾರ ನಮ್ಮ ಸಮುದಾಯದವರಿಗೆ ಇಂತಹ ಉದ್ಯೋಗ ಮಾಡಲು ಅಗತ್ಯ ಸೌಲಭ್ಯ ನೀಡಬೇಕು. ಬ್ಯಾಂಕ್ ಗಳು ಸಹ ಸಾಲ ಸೌಲಭ್ಯ ಒದಗಿಸಬೇಕು ಎಂದು ಭಾವನಮ್ಮ ಅಭಿಪ್ರಾಯಟ್ಟಿದ್ದಾರೆ.
ಜಿಲ್ಲಾಡಳಿತ ಲೈಂಗಿಕ ಅಲ್ಪಸಂಖ್ಯಾತರಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, ವೋಟರ್ ಕಾರ್ಡ್ ಗಳನ್ನು ನೀಡುತ್ತಿದೆ. ಇದರಿಂದ ನಮ್ಮ ಸಮುದಾಯದವರಿಗೆ ಸಹಾಯಕವಾಗುತ್ತಿದೆ. ಇದರೊಂದಿಗೆ ಸರ್ಕಾರ ನಮ್ಮ ಸಮುದಾಯದ ಎಲ್ಲರಿಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಭಾವನಮ್ಮ ಮನವಿ ಮಾಡಿದ್ದಾರೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications