ಚಿತ್ರದುರ್ಗ ಜಿಲ್ಲೆಯ ಈ ಪ್ರಮುಖ ರೈಲ್ವೆ ನಿಲ್ದಾಣದಲ್ಲಿ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆ- ಯಾವಾಗಿನಿಂದ?-ಇಲ್ಲಿದೆ ಮಾಹಿತಿ
ಚಿತ್ರದುರ್ಗ, ಮಾರ್ಚ್, 06: ಈಗಾಗಲೇ ರಾಜ್ಯದ ಹಲವೆಡೆ ಎಕ್ಸ್ಪ್ರೆಸ್ ರೈಲುಗಳನ್ನು ಬಿಡಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಇನ್ನುಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಪ್ರಮುಖ ವಹಿವಾಟು ಕೇಂದ್ರ ಆಗಿರುವ ಚಿಕ್ಕಜಾಜೂರು ಜಂಕ್ಷನ್ ರೈಲ್ವೆ ನಿಲ್ದಾಣವನ್ನು ಈಗಾಗಲೇ ಅಭಿವೃದ್ದಿ ಪಡಿಸಲಾಗಿದ್ದು, ಇಲ್ಲಿ ಹಲವು ರೈಲುಗಳ ನಿಲುಗಡೆಗೆ ಅವಕಾಶ ನೀಡಲಾಗಿದೆ. ಇದು ಇಂದು (ಮಾರ್ಚ್ 06) ಜಾರಿಗೆ ಬರಲಿದೆ. ಹಾಗಾದರೆ ಸಂಪೂರ್ಣ ಮಾಹಿತಿ ಇಲ್ಲಿದೆ ಗಮನಿಸಿ.
ಚಿಕ್ಕಜಾಜೂರು ಜಂಕ್ಷನ್ ರೈಲ್ವೆ ನಿಲ್ದಾಣ ಚಿತ್ರದುರ್ಗ, ಹೊಳಲ್ಕೆರೆ, ಚನ್ನಗಿರಿಗೆ ಪ್ರಯಾಣ ಬೆಳೆಸುವ ಪ್ರಯಾಣಿಕರಗೆ ಸಂಪರ್ಕ ಕಲ್ಪಿಸಲಿದೆ. ಆದ್ದರಿಂದ ಕೆಳಗಿನ ರೈಲುಗಳಿಗೆ ಚಿಕ್ಕಜಾಜೂರು ನಿಲ್ದಾಣದಲ್ಲಿ ಪ್ರಾಯೋಗಿಕ ಅನ್ವಯದ ಆಧಾರದ ಮೇಲೆ ಒಂದು ನಿಮಿಷ ತಾತ್ಕಾಲಿಕ ನಿಲುಗಡೆಗೆ ಅವಕಾಶ ನೀಡಲಾಗುತ್ತದೆ. ಈ ರೈಲುಗಳ ಆರಂಭದ ದಿನಾಂಕದಿಂದ ಮುಂದಿನ ಆದೇಶ ಬರುವವರೆಗೂ ಜಾರಿಯಲ್ಲಿರಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಂಜುನಾಥ ಕನಮಡಿ ಮಾಹಿತಿ ನೀಡಿದ್ದಾರೆ.

ಎಕ್ಸ್ಪ್ರೆಸ್ ರೈಲು ನಿಲುಗಡೆ ವಿವರ
* ಮಾರ್ಚ್ 5, 2024ರಿಂದ ರೈಲು ಸಂಖ್ಯೆ 11006 ಪುದುಚೇರಿ-ದಾದರ್ ಚಾಲುಕ್ಯ ಟ್ರೈ ವೀಕ್ಲಿ ಎಕ್ಸ್ಪ್ರೆಸ್ ರೈಲು ಚಿಕ್ಕಜಾಜೂರು ನಿಲ್ದಾಣಕ್ಕೆ ಬೆಳಗ್ಗೆ 10:39/10:40 ಗಂಟೆಗೆ ಆಗಮಿಸಿ/ ನಿರ್ಗಮಿಸಲಿದೆ.
* ಮಾರ್ಚ್ 8, 2024 ರಿಂದ ರೈಲು ಸಂಖ್ಯೆ 11005 ದಾದರ್-ಪುದುಚೇರಿ ಚಾಲುಕ್ಯ ಟ್ರೈ ವೀಕ್ಲಿ ಎಕ್ಸ್ ಪ್ರೆಸ್ ರೈಲು ಚಿಕ್ಕಜಾಜೂರು ನಿಲ್ದಾಣಕ್ಕೆ ಸಂಜೆ 04:04/04:05 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ.
* ಮಾರ್ಚ್ 7, 2024ರಿಂದ ರೈಲು ಸಂಖ್ಯೆ 11022 ತಿರುನೆಲ್ವೇಲಿ-ದಾದರ್ ಟ್ರೈ ವೀಕ್ಲಿ ಎಕ್ಸ್ಪ್ರೆಸ್ ರೈಲು ಚಿಕ್ಕಜಾಜೂರು ನಿಲ್ದಾಣಕ್ಕೆ ಬೆಳಗ್ಗೆ 10:39/10:40 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ.
* ಮಾರ್ಚ್ 5ರಿಂದ ರೈಲು ಸಂಖ್ಯೆ 11021 ದಾದರ್-ತಿರುನೆಲ್ವೇಲಿ ಟ್ರೈ ವೀಕ್ಲಿ ಎಕ್ಸ್ಪ್ರೆಸ್ ರೈಲು ಚಿಕ್ಕಜಾಜೂರು ನಿಲ್ದಾಣಕ್ಕೆ ಸಂಜೆ 04:04/04:05 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ.
* ಮಾರ್ಚ್ 10ರಿಂದ ರೈಲು ಸಂಖ್ಯೆ 11036 ಮೈಸೂರು-ದಾದರ್ ಶರಾವತಿ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಚಿಕ್ಕಜಾಜೂರು ನಿಲ್ದಾಣಕ್ಕೆ ಬೆಳಗ್ಗೆ 10:39/10:40 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ.
* ಮಾರ್ಚ್ 7, 2024 ರಿಂದ ರೈಲು ಸಂಖ್ಯೆ 11035 ದಾದರ್-ಮೈಸೂರು ಶರಾವತಿ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಚಿಕ್ಕಜಾಜೂರು ನಿಲ್ದಾಣಕ್ಕೆ ಸಂಜೆ 04:04/04:05 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ.
7. ಮಾರ್ಚ್ 6, 2024 ರಿಂದ ರೈಲು ಸಂಖ್ಯೆ 17309 ಯಶವಂತಪುರ-ವಾಸ್ಕೋ ಡ ಗಾಮಾ ಡೈಲಿ ಎಕ್ಸ್ ಪ್ರೆಸ್ ರೈಲು ಚಿಕ್ಕಜಾಜೂರು ನಿಲ್ದಾಣಕ್ಕೆ ಸಂಜೆ 06:33/06:34 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ.
8. ಮಾರ್ಚ್ 6, 2024 ರಿಂದ ರೈಲು ಸಂಖ್ಯೆ 17310 ವಾಸ್ಕೋ ಡ ಗಾಮಾ-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ ರೈಲು ಚಿಕ್ಕಜಾಜೂರು ನಿಲ್ದಾಣಕ್ಕೆ ಬೆಳಿಗ್ಗೆ 08:02/08:03 ಗಂಟೆಗೆ ಆಗಮಿಸಿ/ನಿರ್ಗಮಿಸಲಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications