ಫೆ.27 ನನ್ನ ಅಂತಿಮ ದಿನ; ಚಿತ್ರದುರ್ಗದ ಸ್ಪೈಡರ್ ಮ್ಯಾನ್ ಮಾತಲ್ಲೇನಿದೆ?
Recommended Video
ಚಿತ್ರದುರ್ಗ, ನವೆಂಬರ್ 21: ಜ್ಯೋತಿರಾಜ್ ಅಥವಾ ಮಂಕಿಮ್ಯಾನ್ ಎಂದರೆ ಯಾರಿಗೆ ಗೊತ್ತಿಲ್ಲ? ಚಿತ್ರದುರ್ಗದ ಏಳು ಸುತ್ತಿನ ಕಲ್ಲಿನ ಕೋಟೆಯನ್ನು ಪಟಪಟನೆ ಹತ್ತಿ ಸಾಹಸ ಮೆರೆಯುವ ಜ್ಯೋತಿರಾಜ್ "ಚಿತ್ರದುರ್ಗದ ಸ್ಪೈಡರ್ ಮ್ಯಾನ್" ಎಂದೇ ಕನ್ನಡಿಗರಿಗೆ ಚಿರಪರಿಚಿತ. ಈ ಸಾಹಸಿ ಜ್ಯೋತಿರಾಜ್ ಈಗ ಹೊಸ ದುಸ್ಸಾಹಸಕ್ಕೆ ಕೈ ಹಾಕುತ್ತಿದ್ದಾರೆ.
ಅಪಾಯಕಾರಿ ಬಂಡೆಗಳನ್ನು ಸುಲಭವಾಗಿ ಏರಿ ರಾಜ್ಯದ ಜನರ ಮನೆಮಾತಾಗಿರುವ ಕೋತಿರಾಜ್, 2020 ಫೆ.27 ನನ್ನ ಕೊನೆಯ ದಿನವಾಗಲಿದೆ ಎಂದು ಹೇಳಿದ್ದಾರೆ. ಈ ಹೇಳಿಕೆ ಹಿಂದಿನ ಅರ್ಥವೇನು? ಇಲ್ಲಿದೆ ಅದರ ವಿವರ...

ಫೆಬ್ರುವರಿ 27 ಕೊನೆಯ ದಿನ ಎಂದಿದ್ದೇಕೆ?
ಇತ್ತಿಚೀಗಷ್ಟೇ ಬೆಂಗಳೂರು ಹೊರವಲಯದ ನೆಲಮಂಗಲದ ಖಾಸಗಿ ಶಾಲೆಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜ್ಯೋತಿರಾಜ್, ಮುಂದಿನ ವರ್ಷ ಫೆಬ್ರುವರಿ 26-27 ನನ್ನ ಕೊನೆಯ ದಿನ ಎಂದು ಹೇಳುವ ಮೂಲಕ ಭಾವುಕರಾಗಿದ್ದಾರೆ. ನನ್ನ ಮುಂದಿನ ಸಾಹಸಕ್ಕೆ ಈ ದಿನವನ್ನು ಮೀಸಲಿಟ್ಟಿದ್ದು, ಅದು ಬಹುಶಃ ನನ್ನ ಕೊನೆಯ ದಿನವೂ ಆಗುತ್ತದೆ ಎಂದು ಹೇಳಿಕೊಂಡಿದ್ದಾರೆ.

ಚಿತ್ರದುರ್ಗದ ಅಭಿವೃದ್ಧಿಗೆ ಈ ಸಾಹಸ
ಚಿತ್ರದುರ್ಗದ ಕೋಟೆ ಐತಿಹಾಸಿಕ ಸ್ಥಳ. ವಿಶ್ವ ಪರಂಪರಿಕ ಪಟ್ಟಿಗೆ ಸೇರುವ ಎಲ್ಲ ಲಕ್ಷಣಗಳನ್ನು ಹೊಂದಿದೆ. ಆದರೆ ಚಿತ್ರದುರ್ಗದ ಕೋಟೆ ಅಭಿವೃದ್ಧಿಗೆ ಸರ್ಕಾರದಿಂದ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ನಾನು ಈ ದುಸ್ಸಾಹಸಕ್ಕೆ ಕೈ ಹಾಕಿದ್ದೇನೆ.ಇದು ನನ್ನ ಪ್ರಾಣಕ್ಕೆ ಕುತ್ತು ತರುವಂತಹ ಸಾಹಸ. ಆದರೆ ಇದನ್ನು ಮಾಡುತ್ತಿರುವುದು ಚಿತ್ರದುರ್ಗ ಕೋಟೆಯ ಅಭಿವೃದ್ಧಿಗೆ ಹಣ ಸಂಗ್ರಹಿಸಲು" ಎಂದು ಹೇಳಿಕೊಂಡಿದ್ದಾರೆ.

ಫೆಬ್ರುವರಿ 27ರಂದು ಏನು ಮಾಡಲಿದ್ದಾರೆ?
"ನಾನು 2020ರ ಫೆಬ್ರವರಿ 26 ಮತ್ತು 27 ರಂದು 3,221 ಅಡಿ, ವಿಶ್ವದ ಅತಿ ಎತ್ತರದಲ್ಲಿರುವ ಅಮೆರಿಕದ ಏಂಜಲ್ ಫಾಲ್ಸ್ ಏರುತ್ತಿದ್ದು, ಅದರಲ್ಲಿ ಬರುವ ಹಣವನ್ನು ಕೋಟೆಯ ಅಭಿವೃದ್ಧಿಗೆ ಹಾಗೂ ನನ್ನ ಶಿಷ್ಯರ ಜೀವನಕ್ಕಾಗಿ ಬಳಕೆ ಮಾಡುತ್ತೇನೆ" ಎಂದು ಹೇಳಿದ್ದಾರೆ. ಅಂದೇ ನನ್ನ ಬದುಕಿನ ಕೊನೆಯ ದಿನವಾಗಬಹುದು ಎಂದೂ ಸಹ ಹೇಳಿದ್ದಾರೆ. ಒಂದು ವೇಳೆ ನಾನು ಸತ್ತರೆ, ಕನ್ನಡಿಗರೆಲ್ಲ ಒಂದು ಹಿಡಿ ಮಣ್ಣು ಹಾಕಿ, ನಾನು ಕನ್ನಡಿಗರ ಪ್ರೀತಿ ಬಿಟ್ಟರೆ ಬೇರೆ ಏನನ್ನೂ ಸಂಪಾದಿಸಿಲ್ಲ. ಹಾಗಾಗಿ ಕನ್ನಡ ನಾಡಿಗಾಗಿ ನನ್ನ ಸಾಧನೆ ಮಾಡಲು ಸಿದ್ಧನಾಗಿದ್ದೇನೆ" ಎಂದಿದ್ದಾರೆ.

ಇನ್ನಾದರೂ ಅಭಿವೃದ್ಧಿಗೆ ಮುಂದಾಗುತ್ತದಾ ಸರ್ಕಾರ?
ಈ ಸಾಹಸಕ್ಕೆ ಪ್ರತಿಯೊಬ್ಬರೂ ಆಶೀರ್ವದಿಸಿ ಎಂದು ಭಾವುಕರಾಗಿ ಕೋತಿರಾಜ್ ತಮ್ಮ ಮನದಾಳ ಮಾತನ್ನು ಹಂಚಿಕೊಂಡಿದ್ದಾರೆ. ನೆಲಮಂಗಲದ ಖಾಸಗಿ ಶಾಲೆಯ ಪುಟಾಣಿ ಮಕ್ಕಳೊಂದಿಗೆ ಭಾವುಕರಾಗಿ ತಮ್ಮ ಅನುಭವವನ್ನು ಜ್ಯೋತಿರಾಜ್ ಹಂಚಿಕೊಂಡಿದ್ದಾರೆ. ಇನ್ನಾದರೂ ಜ್ಯೋತಿರಾಜ್ ನ ಈ ಮಾತುಗಳನ್ನು ಕೇಳಿ ಕೋಟೆಯ ಅಭಿವೃದ್ಧಿಗೆ ಸರ್ಕಾರ ಮುಂದಾಗುತ್ತದಾ ಕಾದು ನೋಡಬೇಕಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications