ಹೋರಿ ಕದ್ದವನಿಗೆ ಬೆತ್ತಲೆ ಮೆರವಣಿಗೆ ಪ್ರಕರಣ; 9 ಮಂದಿ ಮೇಲೆ FIR
ಚಿತ್ರದುರ್ಗ, ಆಗಸ್ಟ್ 22: ಹೋರಿಗಳನ್ನು ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ ವ್ಯಕ್ತಿಗೆ ಸರಸ್ವತಿಹಟ್ಟಿ ಮತ್ತು ಕೆರೆಮುಂದಲಹಟ್ಟಿ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿ, ಬೆತ್ತಲೆಗೊಳಿಸಿ ಕತ್ತೆ ಮೇಲೆ ಕೂರಿಸಿ ಮೆರವಣಿಗೆ ಮಾಡಿದ್ದ ಘಟನೆ ನಿನ್ನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸರಸ್ವತಿ ಹಟ್ಟಿಯಲ್ಲಿ ನಡೆದಿತ್ತು.
Recommended Video
ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಈಶ್ವರ್ ದೂರಿನ ಮೇರೆಗೆ ಒಂಬತ್ತು ಮಂದಿ ಮೇಲೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಈಶ್ವರ್, ಇದೇ ತಿಂಗಳ 20ರಂದು ಬಾಲಣ್ಣ ಎನ್ನುವವರ ಮನೆಯ ಮುಂದೆ ಕಟ್ಟಿ ಹಾಕಿದ್ದ ಹೋರಿಗಳನ್ನು ಕಳ್ಳತನ ಮಾಡಿದ್ದ. ಮಾರನೇ ದಿನ ಅವುಗಳನ್ನು ಮಾರಾಟ ಮಾಡಲು ಬೆಳಿಗ್ಗೆ ಶಿರಾ ತಾಲೂಕಿನ ಬುಕ್ಕಾಪಟ್ಟಣದಲ್ಲಿ ಹೋರಿಗಳನ್ನು ಹೊಡೆದುಕೊಂಡು ಹೋಗುತ್ತಿರುವಾಗ ಕೆರೆಮುಂದಲಹಟ್ಟಿಯ ಇಬ್ಬರು ಹೋರಿಗಳನ್ನು ಕಸಿದುಕೊಂಡು, ಈಶ್ವರ್ ನನ್ನು ಮೋಟಾರ್ ಬೈಕ್ ನಲ್ಲಿ ಗ್ರಾಮಕ್ಕೆ ಕರೆತಂದಿದ್ದರು. ಆನಂತರ ಊರಿನಲ್ಲಿ ಕತ್ತೆ ಮೇಲೆ ಕೂರಿಸಿ ಬೆತ್ತಲೆ ಮೆರವಣಿಗೆ ಮಾಡಿಸಿದ್ದರು.

ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆತ್ತಲೆಯಾಗಿಸಿ ಕತ್ತೆ ಮೇಲೆ ಕೂರಿಸಿ ಮೆರವಣಿಗೆ ಮಾಡಿ, ಪ್ರಾಣ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಆರೋಪಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಈ ಪ್ರಕರಣ ಕೈಗೊಂಡ ಪೊಲೀಸರು, ಒಂಬತ್ತು ಮಂದಿ ಮೇಲೆ ಎಫ್ ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications