ಸಾಣೇಹಳ್ಳಿಯಲ್ಲಿ ಸಿಜಿಕೆ ನುಡಿಚಿತ್ರ ಟಂಕಸಾಲೆ ಉದ್ಘಾಟಿಸಿದ ಮಾಜಿ ಸಿಎಂ ಯಡಿಯೂರಪ್ಪ
ಚಿತ್ರದುರ್ಗ, ನವೆಂಬರ್ 3: "ಸುದೈವದಿಂದ ರಾಜ್ಯದ ಉದ್ದಗಲಕ್ಕೂ ಉತ್ತಮ ಮಳೆಯಾಗಿ, ಕೆರೆ- ಕೆಟ್ಟೆಗಳು ತುಂಬಿ ಒಳ್ಳೆಯ ಬೆಳೆ ಬರುವ ನಿರೀಕ್ಷೆಯಿದೆ," ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಮಂಗಳವಾರ ರಾತ್ರಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿ ಮಠದಲ್ಲಿ ಸಾಣೇಹಳ್ಳಿ ನಾಟಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೋವಿಡ್ ಕಾರಣಕ್ಕಾಗಿ ಇಂಥ ಭವ್ಯ ಕಾರ್ಯಕ್ರಮಗಳು ಆಗಿರಲಿಲ್ಲ. ಸುದೈವದಿಂದ ಇದೂ ಸಾಧ್ಯವಾಗಿದೆ ಎಂದರು.
ಸಾಣೇಹಳ್ಳಿಯಲ್ಲಿ ಸಾಂಸ್ಕೃತಿಕ ವಿಶ್ವವಿದ್ಯಾಲಯದ ಆರಂಭದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. "ನಾನು ಈಗ ಸಿಎಂ ಸ್ಥಾನದಲ್ಲಿದ್ದಿದ್ದರೆ ಇಲ್ಲಿಯೇ ಅನುಮತಿಯ ಆದೇಶವನ್ನು ನೀಡುತ್ತಿದ್ದೆ. ಬಸವರಾಜ ಬೊಮ್ಮಾಯಿಗೂ ಈ ಮಾತನ್ನು ಹೇಳುವೆ. ಅಧಿಕಾರ ಇರಲಿ, ಇಲ್ಲದಿರಲಿ ನಾನು ಸಾಣೇಹಳ್ಳಿಯ ನಾಟಕೋತ್ಸವಕ್ಕೆ ಬರುವುದು ಸಂಪ್ರದಾಯವೇ ಆಗಿದೆ," ಎಂದು ತಿಳಿಸಿದರು.

"ತರಳಬಾಳು ಮಠ ನಾಡಿನ ಅಧ್ಯಾತ್ಮಿಕ, ಸಾಂಸ್ಕಂತಿಕ, ಶೈಕ್ಷಣಿಕ ವಲಯದಲ್ಲಿ ವಿಶಿಷ್ಟವಾದ ಛಾಪನ್ನು ಮೂಡಿಸಿದೆ. ಸಾಣೇಹಳ್ಳಿಯ ಶಾಖಾಮಠವೂ ಮೂಲ ಮಠದ ಆಶಯಗಳಿಗೆ ತಕ್ಕಂತೆ ಕೆಲಸ ಮಾಡುತ್ತಿದೆ ಸಾಣೇಹಳ್ಳಿಯು ಕುಗ್ರಾಮ ಸಾಂಸ್ಕೃತಿಕ ಕೇಂದ್ರವಾಗಿರುವ ಹಿನ್ನೆಲೆಯಲ್ಲಿ ಪಂಡಿತಾತರಾಧ್ಯ ಶ್ರೀಗಳ ಶ್ರಮ ಮತ್ತು ಬದ್ಧತೆ ಇದೆ. ಪೂಜ್ಯರು ಸಾಮಾಜಿಕ ಬದಲಾವಣೆ ತರುವಲ್ಲಿ ನಾಟಕಗಳು ಸಮರ್ಥ ಮಾಧ್ಯಮವೆಂದರಿತು ನಾಟಕ ಚಳವಳಿಯನ್ನೇ ಆರಂಭಿಸಿದ್ದಾರೆ."
"ವಚನ ಸಾಹಿತ್ಯದ ಸಾರವನ್ನು ಸಾರುವ ಪ್ರಯತ್ನ ಮಾಡುತ್ತಿದ್ದಾರೆ. ನಾಟಕ, ಕಲೆ ನಶಿಸುವ ಈ ಸಂದರ್ಭದಲ್ಲಿ ಪೂಜ್ಯರ ವಿಶೇಷ ಪರಿಶ್ರಮದಿಂದ ಉಳಿದು ಬೆಳೆಯುತ್ತಿದೆ. ಶಿವಸಂಚಾರ ನಾಟಕ ತಂಡ ನಮ್ಮ ನಾಡಿನ ಸಂಸ್ಕೃತಿಯನ್ನು ಎಲ್ಲೆಡೆ ಪರಿಚಯಿಸುತ್ತಿದೆ. ಶರಣ ಸಂಸ್ಕೃತಿಯನ್ನು ಹೊಸ ಕಲ್ಪನೆಯನ್ನು ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದೆ."
"ನಾಟಕೋತ್ಸವ ಕೇವಲ ನಾಟಕಗಳ ಪ್ರದರ್ಶನವಷ್ಟೇ ಅಲ್ಲ. ವಿಚಾರ ಮಾಲಿಕೆ, ವಿಚಾರ ಸಂಕಿರಣ, ಧ್ಯಾನ, ಮೌನ, ಚಿಂತನೆ, ಪುಸ್ತಕ ಲೋಕಾರ್ಪಣೆ, ಪ್ರಶಸ್ತಿ ಪ್ರದಾನಗಳಂತಹ ಹತ್ತಾರು ಕಾರ್ಯಕ್ರಮಗಳ ಸಮ್ಮಿಲನ. ಕಲಾವಿದರಿಗೆ ರಂಗಸುಗ್ಗಿಯಾಗಿರುವಂತೆ ಸಾಹಿತಿಗಳಿಗೆ, ಚಿಂತಕರಿಗೆ, ವೈಚಾರಿಕರಿಗೆ, ಕೃಷಿಕರಿಗೆ, ಸಾಮಾನ್ಯ ಪ್ರೇಕ್ಷಕರಿಗೆ ನಾಡಹಬ್ಬವೇ ಆಗಿದೆ. ನಾನು ಅಧಿಕಾರದಲ್ಲಿರಲಿ, ಇಲ್ಲದಿರಲಿ ಕಳೆದ ಹತ್ತನ್ನೆರಡು ವರ್ಷಗಳಿಂದ ಈ ನಾಟಕೋತ್ಸವದಲ್ಲಿ ಭಾಗವಹಿಸುತ್ತಾ ಬಂದಿರುವುದು ನನ್ನ ಸೌಭಾಗ್ಯವೇ ಸರಿ," ಎಂದು ಮಾಜಿ ಸಿಎಂ ಯಡಿಯೂರಪ್ಪ ಸ್ಮರಿಸಿಕೊಂಡರು.

"ಈ ದಿನ ನಾನು ಉದ್ಘಾಟನೆ ಮಾಡಿರುವ ಸಿಜಿಕೆ ನುಡಿಚಿತ್ರ ಟಂಕಸಾಲೆ (ಸಿಜಿಕೆ ಡಿಜಿಟಲ್ ಆಡಿಯೋ, ವಿಡಿಯೋ ರೆಕಾರ್ಡಿಂಗ್ ಸ್ಟುಡಿಯೋ) ಭಾರತದ ಗ್ರಾಮೀಣ ಪ್ರದೇಶದಲ್ಲಿಯೇ ವಿನೂತನವಾದುದು. ಈ ಕೇಂದ್ರದ ಸಹಾಯದಿಂದ ಇಲ್ಲಿ ನಡೆಯುವ ಚಟುವಟಿಕೆಗಳು ಅದರಲ್ಲೂ ಶರಣರ ಬದುಕು-ಬರಹಗಳಿಗೆ ಸಂಬಂಧಿಸಿದ ಚಟುವಟಿಕೆಗಳು ಗುಣಮಟ್ಟದೊಂದಿಗೆ ವಿಶ್ವದಾದ್ಯಂತ ಅಂತರ್ಜಾಲದ ಮೂಲಕ ಪ್ರಸಾರವಾಗಲು ಅನುಕೂಲವಾಗಿರುವುದು ಪೂಜ್ಯರ ದೂರದೃಷ್ಟಿಗೆ ಹಿಡಿದ ಕನ್ನಡಿಯಂತಿದೆ."
"ಕಲೆಗಳು ಮನರಂಜನೆಯ ಜೊತೆ ನೆಮ್ಮದಿಯ ಬದುಕನ್ನು ನೀಡುವಲ್ಲಿ ಸಹಕಾರಿಯಾದುದು. ನೀರಾವರಿ ಯೋಜನೆಗಳನ್ನು ರೂಪಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಪೂಜ್ಯರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ, ಗೌರವಾದರಗಳಿಗೆ ನಾನು ಸದಾ ಋಣಿಯಾಗಿರುವೆ. ಪೂಜ್ಯರ ಮತ್ತು ನಿಮ್ಮೆಲ್ಲರ ಆಶೀರ್ವಾದ ಸದಾ ನನ್ನ ಮೇಲಿರಲಿ," ಎಂದರು.
ಕಾರ್ಯಕ್ರಮದ ನಂತರ ಉಪ ಚುನಾವಣೆ ಫಲಿತಾಂಶ ಕುರಿತು ಪ್ರತಿಕ್ರಿಯಿಸಿ, "ಹಾನಗಲ್ನಲ್ಲಿ ಸೋತಿರುವುದರ ಬಗ್ಗೆ ಕಾರ್ಯಕರ್ತರ ಜೊತೆ ಸಮಾಲೋಚನೆ ಮಾಡುತ್ತೇನೆ," ಎಂದು ಹೊಸದುರ್ಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
Recommended Video
ಈ ಕಾರ್ಯಕ್ರಮದಲ್ಲಿ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು, ಸಾಹಿತಿ ದೊಡ್ಡ ರಂಗೇಗೌಡ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಕರ್ನಾಟಕ ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications