ಚಿತ್ರದುರ್ಗದಲ್ಲಿ ಮಾಜಿ ಸಿಎಂ ಮನೆ ಮಾರಾಟಕ್ಕಿದೆ.!
ಚಿತ್ರದುರ್ಗ, ನವೆಂಬರ್, 10: ಕರ್ನಾಟಕ ಏಕೀಕರಣದ ಮುಂಚೂಣಿ ನಾಯಕರು ಹಾಗೂ ನಾಲ್ಕು ಬಾರಿ ಸಿಎಂ ಆಗಿದ್ದ ಚಿತ್ರದುರ್ಗದ ದಿವಂಗತ ಎಸ್.ನಿಜಲಿಂಗಪ್ಪ ಅವರ ನಿವಾಸ ಮಾರಾಟಕ್ಕಿದೆ. ಹಾಗಾದರೆ ದರ ಎಷ್ಟು ಹಾಗೂ ಬಂಗಲೆಯ ಸುತ್ತಮುತ್ತ ಏನೆಲ್ಲ ಸೌಲಭ್ಯಗಳಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸೈಟ್ ಅಳತೆಯ ವಿವರ: ಕೋಟೆ ನಾಡು ಚಿತ್ರದುರ್ಗ ನಗರದ ವಾರ್ಡ್ ನಂಬರ್.32 ವಿ.ಪಿ ಬಡಾವಣೆಯಲ್ಲಿರುವ ಡಿ.ಸಿ ಬಂಗಲೆಯ ಸಮೀಪವಿರುವ 117 X 130 ಅಡಿ ಅಳತೆಯ ಸೈಟಿನಲ್ಲಿ ಇರುವ ನಿವಾಸವನ್ನು ಮಾರಾಟಕ್ಕೆ ಇಲಾಗಿದೆ.

ರಾಜ್ಯಕ್ಕೆ ಎಸ್.ನಿಜಲಿಂಗಪ್ಪ ಕೊಡುಗೆಗಳೇನು?: ಆಧುನಿಕ ಕರ್ನಾಟಕದ ಶಿಲ್ಪಿಗಳಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಕೂಡ ಒಬ್ಬರಾಗಿದ್ದಾರೆ. ನವ ಕರ್ನಾಟಕದ ನಿರ್ಮಾತೃ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅವರು ಬೃಹತ್ ನೀರಾವರಿ ಯೋಜನೆಗಳು, ಹಲವು ಕೈಗಾರಿಕೆಗಳು ಸೇರಿದಂತೆ ಕರ್ನಾಟಕವನ್ನು ಕಟ್ಟುವ ಮಹತ್ವ ಕಾರ್ಯಗಳ ಮೂಲಕ ರಾಜ್ಯದ ಅಭಿವೃದ್ಧಿ ಹಾಗೂ ಜನತೆಗೆ ದೊಡ್ಡ ಕೊಡುಗೆ ನೀಡಿದ್ದರು.
ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಲ್ಲದೆ, ಕರ್ನಾಟಕದ ಏಕೀಕರಣದ ಹೋರಾಟದ ಮುಂಚೂಣಿ ನಾಯಕರಾಗಿದ್ದರು. ನಾಡಿಗಾಗಿ ಬದುಕನ್ನೇ ಮುಡಿಪಾಗಿಟ್ಟ ಹಿರಿಯ ಮುತ್ಸದ್ದಿ ಬಾಳಿ ಬದುಕಿದ ಮನೆಯನ್ನು ಸ್ಮಾರಕ ಮಾಡಬೇಕೆಂಬ ಅವರ ಕುಟುಂಬ ಸದಸ್ಯರು ಹಾಗೂ ಹಿತೈಷಿಗಳು ಪ್ರಯತ್ನಗಳಿಗೆ ಸರ್ಕಾರದ ಕಡೆಯಿಂದ ಸರಿಯಾದ ಸ್ಪಂದನೆ ಸಿಕ್ಕಿರಲಿಲ್ಲ. ಇದೀಗ ಈ ಪ್ರಯತ್ನ ಫಲಿಸದೆ ಇರುವುದರಿಂದ ಕುಟುಂಬದ ಸದಸ್ಯರು ಮನೆಯನ್ನ ಮಾರಾಟಕ್ಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮನೆಯ ಮೌಲ್ಯದ ವಿವರ: ಮನೆಯ ಪೋಟೋ ಹಾಗೂ ಮಾರಾಟದ ಜಾಹೀರಾತು ಪೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಬಂಗಲೆ ಬಳಿ ಇರುವ ಪಾರಂಪರಿಕ ಕಟ್ಟಡವಾದ ಮಾಜಿ ಮುಖ್ಯಮಂತ್ರಿ ಹಾಗೂ ಎಐಸಿಐ ಅಧ್ಯಕ್ಷ ಲಿಂಗಪ್ಪನ ಅವರ ಮನೆ ಮಾರಾಟಕ್ಕಿದೆ. ಈ ಮನೆಯ ಮೌಲ್ಯ ಈಗ 10,00,00,000 ಕೋಟಿ ರೂಪಾಯಿ ಎಂಬ ಜಾಹೀರಾತು ಇದಾಗಿದೆ.
ಇನ್ನು ಈ ಮನೆಯನ್ನು ಕೊಂಡು ಅದನ್ನು ಸ್ಮಾರಕವನ್ನಾಗಿಸಲು ಸರ್ಕಾರ ಕೂಡ ಮೊದಲು ಮುಂದಾಗಿತ್ತು. ಅದಕ್ಕಾಗಿ ನಾಲ್ಕು ಸಭೆಗಳನ್ನು ನಡೆಸಲಾಗಿತ್ತು. ಆದರೆ, ಆ ಸಭೆಗಳ ನಂತರ ಸರ್ಕಾರ ಯಾಕೋ ಹಿಂದೇಟು ಹಾಕಿದಂತೆ ಕಂಡುಬಂದಿದೆ. ಆದ್ದರಿಂದ ನಿಜಲಿಂಗಪ್ಪನವರು ಬದುಕಿದ್ದಾಗ ಮಾಡಿರುವ ವಿಲ್ ಪತ್ರ ಇದಾಗಿದೆ ಎನ್ನಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications