ಸಿದ್ದರಾಮಯ್ಯ ಡಕೋಟಾ ರಾಜಕಾರಣಿ: ಸಚಿವ ಈಶ್ವರಪ್ಪ ವಾಗ್ದಾಳಿ
ಚಿತ್ರದುರ್ಗ, ಫೆಬ್ರವರಿ 12: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ಡಕೋಟಾ ರಾಜಕಾರಣಿ ಆಗಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಜನಪರ ಅನ್ನುವುದಕ್ಕೆ ಲೋಕಸಭಾ ಚುನಾವಣೆಯಲ್ಲಿ ನಾವು 25 ಸ್ಥಾನ ಗೆದ್ದು ತೋರಿಸಿದ್ದೇವೆ. ನಮ್ಮ ಸರ್ಕಾರ ಡಕೋಟಾ ಎಕ್ಸಪ್ರೆಸ್ ಅಲ್ಲ, ಪಾಸ್ಟ್ ಎಕ್ಸಪ್ರೆಸ್ ಎಂದು ಸಿದ್ದರಾಮಯ್ಯಗೆ ಲೇವಡಿ ಮಾಡಿದರು.
ನಾವು ಸಾಮಾನ್ಯರ ಪರವಾಗಿ ಕೆಲಸ, ಫಾಸ್ಟ್ ಆಗಿ ಮಾಡುವ ಫಾಸ್ಟ್ ಎಕ್ಸಪ್ರೆಸ್ ಸರ್ಕಾರ ನಮ್ಮದಾಗಿದೆ. ಸಿದ್ದರಾಮಯ್ಯ ಡಕೋಟ ರಾಜಕಾರಣಿ ಆಗಿದ್ದಾರೆ. ಈ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ತೆಗೆದರು, ಸಿಎಂ ಸ್ಥಾನದಿಂದ ಕೆಳಗಿಳಿದರು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ. ಡಕೋಟಾ ರಾಜಕಾರಣಿಗೆ ಒಳ್ಳೆಯ ಕೆಲಸ ಕಾಣಲ್ಲ ಎಂದು ಮಾತಿನ ಉದ್ದಕ್ಕೂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು.

ಬಿಜೆಪಿಗೆ ಜನಾಶೀರ್ವಾದ ಇದೆ, ಮುಂದೆ ಯಾವುದೇ ಚುನಾವಣೆ ನಡೆದರೂ ನಾವೇ ಗೆಲ್ಲುತ್ತೇವೆ ಎಂದು ಹೇಳಿದ ಸಚಿವ ಕೆ.ಎಸ್ ಈಶ್ವರಪ್ಪ, ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರವನ್ನು ಡಕೋಟಾ ಎಂದು ಕರೆಯುತ್ತಾರೆ. ನಾನೇ ಸಿಎಂ ಎಂದು ಹೇಳುತ್ತಿದ್ದು, ಈಗ ಹೇಳಿಕೆ ವ್ಯತ್ಯಾಸವಾಗಿದೆ. ಅವರ ಹೇಳಿಕೆಯೇ ಡಕೋಟಾ ಹೇಳಿಕೆಯಾಗಿದೆ ಎಂದು ಕಿಡಿಕಾರಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಾಯಲ್ಲಿ ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಹೇಳಿಸಲಿ ನೋಡೋಣ ಎಂದು ಸವಾಲು ಹಾಕಿದರು. ಡಕೋಟಾ ಸರ್ಕಾರ ಎಂದು ಇಷ್ಟು ಒಳ್ಳೆಯ ಸರ್ಕಾರವನ್ನು ಕರೆಯುತ್ತಿರುವುದು ರಾಜ್ಯದ ಜನರಿಗೆ ನೋವಾಗಿದೆ. ಯಾರ ಸರ್ಟಿಫಿಕೇಟ್ ಯಾರಿಗೂ ಕೂಡಾ ಬೇಕಿಲ್ಲ. ಹಿಂದುಳಿದ-ದಲಿತ ನಾಯಕ ನಾನೇ ಎಂಬ ಅಹಂಕಾರದಲ್ಲಿ ಇದ್ದಾರೆ ಎಂದರು.
ನಮ್ಮ ಸರ್ಕಾರ ಹಿಂದುಳಿದ ಹಾಗೂ ದಲಿತ ಮಠಗಳಿಗೆ ಕೋಟ್ಯಾಂತರ ಹಣ ನೀಡಿದೆ. ಸಿದ್ದರಾಮಯ್ಯ ಏನು ಮಾಡಿದ್ದಾರೆಂದು ಹೇಳಲಿ ಎಂದು ತಿಳಿಸಿದರು. ಜಾತಿಯ ವಿಷ ಬೀಜ ಬಿತ್ತಿ ಕುರುಬರ ಮತ ಪಡೆದು, ಏನು ಮಾಡಿದ್ದಾರೆ. ನೀವು ಮಾಡಿ ಬೆಂಬಲ ಇದೆ ಎಂದು ಸ್ವಾಮೀಜಿಗಳಿಗೆ ಹೇಳಿ ದಿನಾಲೂ ಒಂದು ಹೇಳಿಕೆ ಕೊಟ್ಟರು. ಕುರುಬ ಸಮಾವೇಶ ಆರ್.ಎಸ್.ಎಸ್ ದುಡ್ಡಿನಲ್ಲಿ ಆಯ್ತು ಎಂದಿದ್ದು ರಾಜ್ಯದ ಜನಕ್ಕೆ ತಿಳಿದಿದೆ ಎಂದು ಹೇಳಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications