ನಾನೂ ಬಳ್ಳಾರಿ ದುರ್ಗಮ್ಮನ ಗುಡಿಗೆ ಬರ್ತಿನಿ, ನೀನು ಬಾ: ಸಚಿವ ಶ್ರೀರಾಮುಲುಗೆ ಸವಾಲು
ಚಿತ್ರದುರ್ಗ, ಆಗಸ್ಟ್ 02: ನಾನು ಒಬ್ಬನೇ ಬಳ್ಳಾರಿಯ ದುರ್ಗಮ್ಮನ ಗುಡಿಗೆ ಬರ್ತಿನಿ, ನೀನು ಬಂದು ದೇವಸ್ಥಾನದಲ್ಲಿ ಪ್ರಮಾಣ ಮಾಡು ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ತಿಪ್ಪೇಸ್ವಾಮಿ ಸವಾಲು ಹಾಕಿದ್ದಾರೆ.
ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರಕ್ಕೆ ಭದ್ರಾ ಮೇಲ್ದಂಡೆ ಯೋಜನೆ ತರಲು ನಾನು ಹೋರಾಟ ಮಾಡಿದ್ದೇನೆ ಹಾಗೂ ವಿವಿಧ ಸಂಘಟನೆಗಳು, ರೈತಪರ ಹೋರಾಟಗಾರರ ಶ್ರಮದಿಂದ ಯೋಜನೆ ಕ್ಷೇತ್ರಕ್ಕೆ ಬಂದಿದೆ. ಮೊಳಕಾಲ್ಮೂರು ಕ್ಷೇತ್ರಕ್ಕೆ ತುಂಗಭದ್ರಾ ಹಿನ್ನೀರು ತರಲು ನನ್ನ ಹೋರಾಟದ ಶ್ರಮವಿದೆ ಎಂದರು.
ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ನಾನು ಶಾಸಕನಾಗಿದ್ದಾಗ ಬಂದ ಯೋಜನೆಗಳನ್ನು ನಾನು ಮಾಡಿದ್ದೇನೆ ಎಂದು ಹೇಳಿಕೊಳ್ಳುತ್ತೀಯಾ ಅಂತ ಸಚಿವ ಶ್ರೀರಾಮುಲು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಚೇರಿಗೆ ಒಬ್ಬನಂತೆ ಪಿಎಗಳನ್ನು ಇಟ್ಟು ವಸೂಲಿ ಮಾಡಿಸುತ್ತಿದ್ದೀಯ? ನನ್ನ ಅವಧಿಯಲ್ಲಾದ ಅಭಿವೃದ್ಧಿ ಯೋಜನೆಗಳಿಗೆ ನಿನ್ನ ಹೆಸರು ಹೇಳಿಕೊಳ್ಳುತ್ತೀಯ, ಬಳ್ಳಾರಿ ಹಾಳು ಮಾಡಿ ಬಂದು ಈಗ ಚಿತ್ರದುರ್ಗ ಜಿಲ್ಲೆಯನ್ನು ಹಾಳು ಮಾಡುತ್ತಿದ್ದೀಯ ಎಂದು ಸಚಿವರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
ನಾನು ಮಂಜೂರು ಮಾಡಿಸಿದ್ದ ಅದೆಷ್ಟೋ ಕಾಮಗಾರಿಗಳು ನೆನೆಗುದಿಗೆ ಬಿದ್ದಿವೆ. ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಯಾಕೆ ಮಾಡಿಸುತ್ತಿಲ್ಲ? ಹೇಳಪ್ಪಾ ಬೋಯಾ ಶ್ರೀರಾಮುಲು, ವಾಮ ಮಾರ್ಗದಿಂದ ಅಧಿಕಾರ ಹಿಡಿದ ಬಿಜೆಪಿ ಸರ್ಕಾರ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಛೇಡಿಸಿದರು.
ಇದುವರೆಗೂ ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಸರಿಯಾದ ಪರಿಹಾರ ನೀಡಿಲ್ಲ, ಕೊರೊನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಕೈಯಲ್ಲಿ ಕೊರೊನಾ ಕಂಟ್ರೋಲ್ ಮಾಡಲು ಆಗುತ್ತಿಲ್ಲ, ಶ್ರೀರಾಮುಲು ಅವರೇ ನಿಮ್ಮ ಬುಡುಬುಡುಕೆ ಆಟ ನಡೆಯುವುದಿಲ್ಲ ಎಂದು ಕಿಡಿಕಾರಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications