ಮೆಕ್ಕೆಜೋಳ ಬಿತ್ತನೆಯಲ್ಲಿ ಬ್ಯುಸಿಯಾದ ಮಾಜಿ ಸಚಿವ ಆಂಜನೇಯ
ಚಿತ್ರದುರ್ಗ, ಜುಲೈ 17: ಕೊರೊನಾ ಸೋಂಕು ದಿನೇ ದಿನೇ ತಲ್ಲಣವನ್ನು ಹೆಚ್ಚಾಗಿಸುತ್ತಿದೆ. ಉದ್ಯೋಗ ಕಳೆದುಕೊಂಡ ಕೆಲವರು ತಮ್ಮ ತಮ್ಮ ಊರುಗಳಿಗೆ ಹಿಂತಿರುಗಿ ವ್ಯಾಪಾರ, ಸಾಕಾಣಿಕೆ, ಕೃಷಿ ಚಟುವಟಿಕೆ ಕಡೆ ಮುಖ ಮಾಡಿದ್ದಾರೆ. ರಾಜಕಾರಣಿಗಳು ಸಹ ಈ ವೇಳೆ ಕೃಷಿ ಕಡೆ ಆಸಕ್ತಿ ತೋರುತ್ತಿದ್ದಾರೆ. ಲಾಕ್ ಡೌನ್ ಆಗಿರುವ ಈ ಸಮಯದಲ್ಲಿ ತಮ್ಮನ್ನು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.
Recommended Video
ರಚಿತಾ
ರಾಮ್
ಚಾನ್ಸ್
ಮಿಸ್
ಮಾಡ್ಕೊಂಡ್ರು
ಹರಿಪ್ರಿಯಾ
ಕ್ಯಾಚ್
ಹಾಕೊಂಡ್ರು
|
Filmibeat
Kannada
ಚಿತ್ರದುರ್ಗದಲ್ಲೂ ಮಾಜಿ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರು ಸದ್ಯಕ್ಕೆ ಮೆಕ್ಕೆಜೋಳ ಬಿತ್ತನೆ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಚಿತ್ರದುರ್ಗದಲ್ಲಿ ಕೆಲ ದಿನಗಳಿಂದ ಒಂದಿಷ್ಟು ಮಳೆಯಾಗಿದ್ದು, ಬಿತ್ತನೆ ಕಾರ್ಯ ಶುರುವಾಗಿದೆ.
ಲಾಕ್ಡೌನ್: ಭತ್ತ ನಾಟಿ ಮಾಡಿದ ಕಾಂಗ್ರೆಸ್ ಮಾಜಿ ಶಾಸಕರು!
ಹೀಗಾಗಿ ಚಿತ್ರದುರ್ಗ ಜಿಲ್ಲೆಯ ಸೀಬಾರ ಸಮೀಪದಲ್ಲಿರುವ ತಮ್ಮ ಜಮೀನಿನಲ್ಲಿ ಆಂಜನೇಯ ಅವರು ಮೆಕ್ಕೆಜೋಳ ಬಿತ್ತನೆ ಮಾಡಿದ್ದಾರೆ. ತಮ್ಮ ಈ ಬಿಡುವಿನ ಸಮಯವನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
English summary
Former Social Welfare Minister H. Anjaneya engaged in agricultural activities and busy sowing maize