ನೀಡಿದ ವಚನಗಳನ್ನು ಪಾಲಿಸುವ ದೇಶದ ಏಕೈಕ ಪಕ್ಷ ಕಾಂಗ್ರೆಸ್: ಮಾಜಿ ಸಚಿವ ಎಚ್.ಆಂಜನೇಯ
ಚಿತ್ರದುರ್ಗ, ಆಗಸ್ಟ್ 30: ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ್ದ ವಚನಗಳನ್ನು ಪಾಲಿಸುತ್ತಿರುವ ದೇಶದ ಏಕೈಕ ಪಕ್ಷ ಕಾಂಗ್ರೆಸ್ ಎಂದು ಮಾಜಿ ಸಚಿವ ಎಚ್.ಆಂಜನೇಯ ಕಾಂಗ್ರೆಸ್ ಸರ್ಕಾರವನ್ನು ಹೊಗಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು ಆರೋಪ ಮಾಡಿ, ಜನರ ಮನಸ್ಸಿನಲ್ಲಿ ಸುಳ್ಳಿನ ಗೋಪುರ ಕಟ್ಟಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಜನವಿರೋಧಿ ಆಡಳಿತದಲ್ಲಿ ತೊಡಗಿದೆ ಎಂದು ದೂರಿದರು.

ಕಬ್ಬಿಣ, ಸೀಮೆಂಟ್, ಇಂಧನ ಸೇರಿ ಅಗತ್ಯ ವಸ್ತುಗಳು ಕಾಂಗ್ರೆಸ್ ಆಡಳಿತದಲ್ಲಿ ಗಗನಕ್ಕೆ ಏರಿವೆ. ನಿರುದ್ಯೋಗ ಹೆಚ್ಚಾಗಿದೆ. ನಮಗೆ ಅಧಿಕಾರ ಕೊಟ್ಟರೆ ಎಲ್ಲ ವಸ್ತುಗಳ ಬೆಲೆ ಇಳಿಕೆ ಮಾಡುತ್ತೇವೆ, ಪ್ರತಿ ವ್ಯಕ್ತಿ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೆವೆ. ಪೆಟ್ರೋಲ್, ಡಿಸೇಲ್ ಜನ ಸಾಮಾನ್ಯರ ಕೈಗೆಟುಕುವ ರೀತಿ ಬೆಲೆ ಇಳಿಸುತ್ತೇವೆ.
ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, ಎಂಟು ವರ್ಷದಲ್ಲಿ ತಾನು ಹೇಳಿದ್ದ ಭರವಸೆಗಳಲ್ಲಿ ಒಂದನ್ನು ಈಡೇರಿಸಿಲ್ಲ. ಬದಲಿಗೆ ಸರ್ಕಾರಿ ಸಂಸ್ಥೆಗಳನ್ನು ಮಾರಾಟ ಮಾಡಲಾಗಿದೆ, ಸಣ್ಣ-ಮಧ್ಯಮ ಕೈಗಾರಿಕೆಗಳನ್ನು ಮುಚ್ಚಲಾಗಿದೆ. ಈ ಮೂಲಕ ದೇಶದಲ್ಲಿ ನಿರುದ್ಯೋಗ ಹೆಚ್ಚಳ ಮಾಡಿರುವುದೇ ಬಿಜೆಪಿ ಸಾಧನೆಯಾಗಿದೆ ಎಂದು ಹೇಳಿದರು.
ಇನ್ನೂ ಅಗತ್ಯ ವಸ್ತುಗಳ ಬೆಲೆ ಮೂರು ಪಟ್ಟು ಹೆಚ್ಚಿಸಲಾಗಿದೆ. 400 ರೂಪಾಯಿ ಇದ್ದ ಸಿಲಿಂಡರನ್ನು ಒಂದು ಸಾವಿರಕ್ಕಿಂತಲೂ ಹೆಚ್ಚು ಹೆಚ್ಚಿಸಿ, ಮಧ್ಯಮ ವರ್ಗದ ಜನರ ಬದುಕನ್ನು ಸಂಕಷ್ಟಕ್ಕೆ ದೂಡಿರುವುದೇ ಬಿಜೆಪಿ ಮತ್ತು ಮೋದಿ ಸಾಧನೆ ಎಂದು ವ್ಯಂಗ್ಯವಾಡಿದರು.

ಪೆಟ್ರೋಲ್, ಡಿಸೇಲ್ ಬೆಲೆ ಗಗನಕ್ಕೆ ಏರಿಸಿ ಎಲ್ಲ ಕ್ಷೇತ್ರಕ್ಕೆ ಆರ್ಥಿಕ ಪೆಟ್ಟು ನೀಡುವ ಮೂಲಕ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ. ದುಡಿಯಲು ಕೆಲಸ ಮತ್ತು ಕೈಯಲ್ಲಿ ದುಡ್ಡಿಲ್ಲದೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಜನರ ನೆರವಿಗಾಗಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅನೇಕ ಜನಪರ ಯೋಜನೆಗಳ ಜೊತೆಗೆ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಕ್ಕೆ ಅನ್ನಭಾಗ್ಯ ಅಕ್ಕಿ ಜೊತೆಗೆ ಹಣ ಸಂದಾಯ, ರಾಜ್ಯದ ಬಹುತೇಕ ಎಲ್ಲರ ಮನೆಗಳಿಗೆ ಉಚಿತ ವಿದ್ಯುತ್ ನೀಡಿದೆ ಎಂದರು.
ಜೊತೆಗೆ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳನ್ನು ಖರೀದಿಸಲು, ಮಕ್ಕಳ ಶಿಕ್ಷಣಕ್ಕೆ ಅನುಕೂಲಕ್ಕಾಗಿ ಪ್ರತಿ ಕುಟುಂಬದ ಮನೆ ಯಜಮಾನಿ ಖಾತೆಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಯಾಗಿದೆ. ಬಿಜೆಪಿ ದುರಾಡಳಿತದಿಂದ ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆ ವರದಾನ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಆಗಸ್ಟ್ 30ರಂದು ರಾಷ್ಟ್ರ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಿದ್ದು, ಆ ತಕ್ಷಣವೇ ರಾಜ್ಯದ ಎಲ್ಲ ಫಲಾನುಭವಿಗಳಾದ ಮಹಿಳೆಯರ ಬ್ಯಾಂಕ್ ಖಾತೆಗೆ ತಲಾ ಎರಡು ಸಾವಿರ ರೂಪಾಯಿ ನೇರ ಜಮಾ ಆಗಲಿದೆ.
ದೇಶದ ಇತಿಹಾಸದ ಪುಟಗಳಲ್ಲಿ ಬರೆದಿಡುವಂತಹ ಮಹತ್ವಾಕಾಂಕ್ಷೆ ಗೃಹಲಕ್ಷ್ಮಿ ಯೋಜನೆ ಜಾರಿ ಕಾರ್ಯಕ್ರಮದ ನೇರ ಪ್ರಸಾರವನ್ನು ಗ್ರಾಮ ಪಂಚಾಯತಿ ಹಾಗೂ ನಗರ, ಪಟ್ಟಣ ಕೇಂದ್ರದಲ್ಲಿ ವ್ಯವಸ್ಥೆ ಮಾಡಿದ್ದು, ಫಲಾನುಭವಿ ಮಹಿಳೆಯರು ಕಾರ್ಯಕ್ರಮವನ್ನು ವೀಕ್ಷಿಸುವ ಮೂಲಕ ಹಾಗೂ ತಮ್ಮ ಖಾತೆಗೆ ಎರಡು ಸಾವಿರ ರೂಪಾಯಿ ಜಮಾ ಆಗುವ ಸಂದರ್ಭ ಸಂಭ್ರಮಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಇನ್ನೂ ಹೆಚ್ಚು ಸಂಖ್ಯೆಯಲ್ಲಿ ಜನಪರ ಯೋಜನೆಗಳನ್ನು ಜಾರಿಗೊಳಿಸಲು ಉತ್ಸಾಹ ತುಂಬುವ ಜೊತೆಗೆ ಬೆಂಬಲವಾಗಿ ನಿಲ್ಲಬೇಕು ಎಂದು ಆಂಜನೇಯ ಕರೆ ನೀಡಿದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications