ಕೇಂದ್ರದ ಕಡೆ ಬೆರಳು ತೋರಿಸುವುದು ಕಾಂಗ್ರೆಸ್ ಬೇಜವಾಬ್ದಾರಿಯ ಪರಮಾವಧಿ - ಕಾಗೇರಿ
ಚಿತ್ರದುರ್ಗ, ನವೆಂಬರ್ 07: ಕೆಲಸ ಮಾಡದೇ ಕೇಂದ್ರ ಸರ್ಕಾರದ ಕಡೆ ಬೆರಳು ಮಾಡುವ ಕಾಂಗ್ರೆಸ್ ಸರ್ಕಾರದ ಕೆಲಸ ಬೇಜವಾಬ್ದಾರಿತನದ ಪರಮಾವಧಿ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಚಿತ್ರದುರ್ಗ ಜಿಲ್ಲೆಗೆ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ಅವರ ನೇತೃತ್ವದ ಬರ ಅಧ್ಯಯನ ತಂಡ ಆಗಮಿಸಿದ್ದು, ಜಿಲ್ಲೆಯ ಕೊಳಾಳ್ ಗ್ರಾಮದಿಂದ ಬರ ಅಧ್ಯಯನ ಪ್ರಾರಂಭಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದಿಂದ ಬರ ಪರಿಹಾರಕ್ಕೆ ಪರಿಹಾರ ನೀಡಲಿ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯೆಗೆ ಉತ್ತರಿಸಿದ ಅವರು ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಜನಪರ ಕಾಳಜಿ ಇದೆ. ಕೇಂದ್ರ ತಂಡ ಬಂದು ಈಗಾಗಲೇ ಬರ ಬಗ್ಗೆ ಅಧ್ಯಯನ ನಡೆಸಿ, ಕೇಂದ್ರ ಸರ್ಕಾರಕ್ಕೆ ವರದಿ ನೀಡಿದೆ ಎಂದರು.

ರಾಜ್ಯದಲ್ಲಿ ಜನ ಆರಿಸಿರುವುದು ಕಾಂಗ್ರೆಸ್ ಸರ್ಕಾರವನ್ನು, ಈ ಸರ್ಕಾರ ತಾನೇನು ಮಾಡುತ್ತಿದೆ ಎನ್ನುವುದನ್ನು ಹೇಳಲಿ. ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರಕಾರ ಅಂತಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಕಾವೇರಿ ವಿಚಾರ ಅಂದರೆ ಕೇಂದ್ರ ಸರ್ಕಾರ ಅಂತಾರೆ. ಕಾಂಗ್ರೆಸ್ 5 ಕೆಜಿ ಅಕ್ಕಿ ಕೊಡ್ತೀನಿ ಎಂದು ಹೇಳಿದ್ದರು. ಈಗ ಕೇಂದ್ರ ಸರ್ಕಾರ ಕೊಡ್ತಿಲ್ಲಾ ಎನ್ನುತ್ತಿದ್ದಾರೆ. ಕಾಲಕಾಲಕ್ಕೆ ಬಿಡುಗಡೆ ಮಾಡಬೇಕಾದ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರದಿಂದ ಕರ್ನಾಟಕಕ್ಕೆ ಆರ್ಥಿಕವಾಗಿ ತುಂಬಾ ಅನುಕೂಲ ಮಾಡಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ತಮ್ಮ ದೌರ್ಬಲ್ಯ ಮುಚ್ಚಿಟ್ಟು, ಕೇಂದ್ರ ಸರ್ಕಾರದ ಕಡೆ ಬೆರಳು ಮಾಡಿ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದರು.
ಕಾಂಗ್ರೆಸ್ನವರು ಇಲ್ಲಿ ಏನು ಮಾಡಬೇಕೋ ಅದನ್ನು ಮಾಡಬೇಕು. ನಾವು ಕರ್ನಾಟಕಕ್ಕೆ ಕೊಡಬೇಕಾದ್ದನ್ನು ಕೊಟ್ಟೇ ಕೊಡುತ್ತೇವೆ. ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅನ್ಯಾಯ ಮಾಡಲ್ಲ. ರಾಜ್ಯದಲ್ಲಿ ಕೆಲಸ ಮಾಡದೇ ಕೇಂದ್ರ ಸರ್ಕಾರದ ಕಡೆ ಬೆರಳು ಮಾಡುವ ಕಾಂಗ್ರೆಸ್ ಸರ್ಕಾರದ ಕಾರ್ಯ ಬೇಜವಾಬ್ದಾರಿತನದ ಪರಮಾವಧಿಯಾಗಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿ ವಾಗ್ದಾಳಿ ನಡೆಸಿದರು.

ಇನ್ನು ಸಿದ್ದರಾಮಯ್ಯ ಈ ರೀತಿ ಆಡಳಿತ ಮಾಡಿದರೆ ರಾಜ್ಯದ ಜನ ಸಹಿಸಲ್ಲ. ಬರುವ ದಿನಗಳಲ್ಲಿ ರಾಜ್ಯದ ಜನ ಸೂಕ್ತ ಪಾಠ ಕಲಿಸುತ್ತಾರೆ. ಸರ್ಕಾರಕ್ಕೆ ಜನರ ಕಷ್ಟಕ್ಕೆ ಸ್ಪಂದಿಸುವ ಮಾನವೀಯ ಹೃದಯ ಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಉಚಿತಗಳನ್ನು ಕೊಡೋದಕ್ಕೆ ಹಣವಿದೆ. ರೈತರ ಕಷ್ಟಕ್ಕೆ ಹಣ ಕೊಡಿ ಅಂದರೆ ಕೇಂದ್ರ ಸರ್ಕಾರವನ್ನು ತೋರಸ್ತೀರಾ? ಎಂದು ಪ್ರಶ್ನಿಸಿದರು. ಅಲ್ಲದೇ ರೈತರ ಕಷ್ಟದಲ್ಲಿ ನಿಮ್ಮ ಮುಖವಾಡ ತೆಗೆದಿಟ್ಟು ಸಹಾಯಕ್ಕೆ ಬನ್ನಿ ಎಂದು ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications