Get Updates
Get notified of breaking news, exclusive insights, and must-see stories!

ಚಿತ್ರದುರ್ಗ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಮುಂಬೈ ಡಿಜೆ ..!

ಚಿತ್ರದುರ್ಗ, ಸೆಪ್ಟೆಂಬರ್‌ 24 : ಅಕ್ಟೋಬರ್ 8 ರಂದು ನಡೆಯಲಿರುವ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆಗೆ ಮುಂಬೈಯಿಂದ ಡಿಜೆ ಬರಲಿದೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ತಿಳಿಸಿದ್ದಾರೆ.

ದಾವಣಗೆರೆಯ ಕಾರ್ಯಮವೊಂದರಲ್ಲಿ ಮಾತನಾಡಿರುವ ಅವರು ಈ ಬಾರಿ ಚಿತ್ರದುರ್ಗದಲ್ಲಿ ನಡೆಯುಲಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಡಿಜೆ ಬರುತ್ತದೆ. 24 ಬಾಕ್ಸ್ ಗಳಿರುತ್ತವೆ. 12 ಸೌಂಡ್ ಗೆ, 12 ಬೇಸ್ ಗೆ ಇರುತ್ತದೆ. ನಾವೆಲ್ಲರೂ ಈ ಶೋಭಾಯಾತ್ರೆಯಲ್ಲಿ ಭಾಗವಹಿಸಿ ಎಂದು ಕರೆ ನೀಡಿದ್ದಾರೆ.

Ganesha Chaturthi 2023: Mumbai DJ For Mahaganapathi Shobha Yatra At Chitradurga

ಅಲ್ಲದೇ ಈ ಬೃಹತ್ ಶೋಭಾಯಾತ್ರೆಯಲ್ಲಿ ಸುಮಾರು 5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಆದರೆ ಇದು 10 ಲಕ್ಷ ಆಗಬೇಕು. ನೀವೆಲ್ಲರೂ ಕಾರ್ಯಕ್ರಮಕ್ಕೆ ಬರಬೇಕು ಎಂದು ದಾವಣಗೆರೆ ಜನತೆಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಆಹ್ವಾನಿಸಿದ್ದಾರೆ.

ನಗರದ ಪಂಚಾಕ್ಷರಿ ಕಲ್ಯಾಣ ಮಂಟಪ ಬಳಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಬೃಹತ್ ಪೆಂಡಾಲ್ ನಿರ್ಮಾಣ ಮಾಡಿ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಈ ಗಣಪತಿ ಸುಮಾರು 14ಅಡಿ ಎತ್ತರ ಇದೆ. ಈಗಾಗಲೇ ಗಣಪತಿ ಪ್ರತಿಷ್ಠಾಪನೆ ಮುಂಭಾಗದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಲಕ್ಷಾಂತರ ಮಂದಿ ಭಕ್ತರು ಗಣಪನ ದರ್ಶನ ಪಡೆಯುತ್ತಿದ್ದಾರೆ. ಇತ್ತೀಚಿಗಷ್ಟೇ ನಟ ಅಭಿಷೇಕ್ ಅಂಬರೀಷ್ ಕೂಡ ಭೇಟಿ ಹಿಂದೂ ಮಹಾಗಣಪತಿ ದರ್ಶನ ಪಡೆದ್ದರು.

ಅಕ್ಟೋಬರ್ 8 ರಂದು ಬೆಳಿಗ್ಗೆ 11ಗಂಟೆಯ ಸುಮಾರಿಗೆ ವಿಜ್ಞಾನ ಕಾಲೇಜು ಮುಂಭಾಗದಿಂದ ಆರಂಭಗೊಂಡು ಗಣಪತಿ ವಿಸರ್ಜನಾ ಶೋಭಾಯಾತ್ರೆ ಮೂರು ಕಿಲೋಮೀಟರ್ ಸಾಗಿ, ಚಂದ್ರವಳ್ಳಿ ಕೆರೆಯಲ್ಲಿ ವಿಸರ್ಜನೆ ಗೊಳ್ಳಲಿದೆ. ಈ ಮೆರವಣಿಗೆಗೆ ನಿರೀಕ್ಷೆಗೂ ಮೀರಿ ಜನರು ಬರಲಿದ್ದಾರೆ. ಪ್ರತಿಷ್ಠಾಪನ ಸ್ಥಳದಿಂದ ಗಣಪತಿ ಮೆರವಣಿಗೆ ಆರಂಭಗೊಂಡು, ಮದಕರಿನಾಯಕನ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ ಹಾಗೂ ಕನಕ ವೃತ್ತದದ ಮೂಲಕ ಶೋಭಾಯಾತ್ರೆ ಸಾಗಲಿದೆ. ಈ ಮೆರವಣಿಗೆಯಲ್ಲಿ ವಾದ್ಯ ಗೋಷ್ಠಿ, ತಮಟೆ, ಡೋಲು, ಗೊಂಬೆ ಕುಣಿತ, ವೀರಗಾಸೆ ಈಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಮೆರುಗು ನೀಡಲಿವೆ.

ಕೇಸರಿಮಯವಾಗಲಿರುವ ಕೋಟೆನಾಡು

ಗಣೇಶನ ಬೃಹತ್ ಶೋಭಾಯಾತ್ರೆಗೆ ಚಿತ್ರದುರ್ಗ ನಗರ ಕೇಸರಿ ಬಣ್ಣದ ಮಾಯವಾಗಿರುತ್ತದೆ. ಎಲ್ಲಿ ಎತ್ತಾ ನೋಡಿ ಕಣ್ಣಾಡಿಸಿದರೂ ಕೇಸರಿ ಬಾವುಟ ಹಾರಾಟ ಕಾಣಲಿವೆ. ನಗರದ ವೃತ್ತಗಳಿಗೆ ಬಣ್ಣ, ಬಣ್ಣದ ಅಲಂಕಾರ ಮಾಡಲಾಗುತ್ತದೆ. ಪ್ರಮುಖವಾಗಿ ಮದಕರಿನಾಯಕ ವೃತ್ತ, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ, ಕನಕ ಸರ್ಕಲ್ ಸೇರಿದಂತೆ ಮತ್ತಿತರರ ವೃತ್ತಗಳಿಗೆ ಅಲಂಕಾರ ಮಾಡಲಾಗುತ್ತದೆ.

ಹೊರ ಜಿಲ್ಲೆಗಳಿಂದ ಭಕ್ತರ ಆಗಮನ

ರಾಜ್ಯದಲ್ಲಿಯೇ ಹೆಸರುವಾಸಿಯಾಗಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ದಾವಣಗೆರೆ, ಬಳ್ಳಾರಿ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ನಾನಾ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸಲಿದ್ದಾರೆ.

ಒಟ್ಟಾರೆಯಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಹಮ್ಮಿಕೊಂಡಿರುವ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಕಾರ್ಯಕ್ರಮ 21 ದಿನಗಳ ಕಾಲ ನಡೆಯುತ್ತಿದ್ದು, ಈ ಬೃಹತ್ ಶೋಭಾಯಾತ್ರೆ ಚಿತ್ರದುರ್ಗ ದೇಶದಲ್ಲೇ ಗಮನ ಸೆಳೆದಿದೆ ಎನ್ನಬಹುದು. ಈ ಅದ್ದೂರಿ ಗಣಪತಿ ಮೆರವಣಿಗೆ ಕೆಲವು ದಿನಗಳು ಬಾಕಿ ಇದ್ದು, ಮೆರವಣಿಗೆ ಕಣ್ತುಂಬಿಕೊಳ್ಳಲು ಗಣೇಶನ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+