ಚಿತ್ರದುರ್ಗ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಮುಂಬೈ ಡಿಜೆ ..!
ಚಿತ್ರದುರ್ಗ, ಸೆಪ್ಟೆಂಬರ್ 24 : ಅಕ್ಟೋಬರ್ 8 ರಂದು ನಡೆಯಲಿರುವ ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆಗೆ ಮುಂಬೈಯಿಂದ ಡಿಜೆ ಬರಲಿದೆ ಎಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ತಿಳಿಸಿದ್ದಾರೆ.
ದಾವಣಗೆರೆಯ ಕಾರ್ಯಮವೊಂದರಲ್ಲಿ ಮಾತನಾಡಿರುವ ಅವರು ಈ ಬಾರಿ ಚಿತ್ರದುರ್ಗದಲ್ಲಿ ನಡೆಯುಲಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಡಿಜೆ ಬರುತ್ತದೆ. 24 ಬಾಕ್ಸ್ ಗಳಿರುತ್ತವೆ. 12 ಸೌಂಡ್ ಗೆ, 12 ಬೇಸ್ ಗೆ ಇರುತ್ತದೆ. ನಾವೆಲ್ಲರೂ ಈ ಶೋಭಾಯಾತ್ರೆಯಲ್ಲಿ ಭಾಗವಹಿಸಿ ಎಂದು ಕರೆ ನೀಡಿದ್ದಾರೆ.

ಅಲ್ಲದೇ ಈ ಬೃಹತ್ ಶೋಭಾಯಾತ್ರೆಯಲ್ಲಿ ಸುಮಾರು 5 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಆದರೆ ಇದು 10 ಲಕ್ಷ ಆಗಬೇಕು. ನೀವೆಲ್ಲರೂ ಕಾರ್ಯಕ್ರಮಕ್ಕೆ ಬರಬೇಕು ಎಂದು ದಾವಣಗೆರೆ ಜನತೆಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಆಹ್ವಾನಿಸಿದ್ದಾರೆ.
ನಗರದ ಪಂಚಾಕ್ಷರಿ ಕಲ್ಯಾಣ ಮಂಟಪ ಬಳಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಬೃಹತ್ ಪೆಂಡಾಲ್ ನಿರ್ಮಾಣ ಮಾಡಿ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಈ ಗಣಪತಿ ಸುಮಾರು 14ಅಡಿ ಎತ್ತರ ಇದೆ. ಈಗಾಗಲೇ ಗಣಪತಿ ಪ್ರತಿಷ್ಠಾಪನೆ ಮುಂಭಾಗದಲ್ಲಿ ವಿವಿಧ ಕಾಮಗಾರಿಗಳು ನಡೆಯುತ್ತಿವೆ. ಲಕ್ಷಾಂತರ ಮಂದಿ ಭಕ್ತರು ಗಣಪನ ದರ್ಶನ ಪಡೆಯುತ್ತಿದ್ದಾರೆ. ಇತ್ತೀಚಿಗಷ್ಟೇ ನಟ ಅಭಿಷೇಕ್ ಅಂಬರೀಷ್ ಕೂಡ ಭೇಟಿ ಹಿಂದೂ ಮಹಾಗಣಪತಿ ದರ್ಶನ ಪಡೆದ್ದರು.
ಅಕ್ಟೋಬರ್ 8 ರಂದು ಬೆಳಿಗ್ಗೆ 11ಗಂಟೆಯ ಸುಮಾರಿಗೆ ವಿಜ್ಞಾನ ಕಾಲೇಜು ಮುಂಭಾಗದಿಂದ ಆರಂಭಗೊಂಡು ಗಣಪತಿ ವಿಸರ್ಜನಾ ಶೋಭಾಯಾತ್ರೆ ಮೂರು ಕಿಲೋಮೀಟರ್ ಸಾಗಿ, ಚಂದ್ರವಳ್ಳಿ ಕೆರೆಯಲ್ಲಿ ವಿಸರ್ಜನೆ ಗೊಳ್ಳಲಿದೆ. ಈ ಮೆರವಣಿಗೆಗೆ ನಿರೀಕ್ಷೆಗೂ ಮೀರಿ ಜನರು ಬರಲಿದ್ದಾರೆ. ಪ್ರತಿಷ್ಠಾಪನ ಸ್ಥಳದಿಂದ ಗಣಪತಿ ಮೆರವಣಿಗೆ ಆರಂಭಗೊಂಡು, ಮದಕರಿನಾಯಕನ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ ಹಾಗೂ ಕನಕ ವೃತ್ತದದ ಮೂಲಕ ಶೋಭಾಯಾತ್ರೆ ಸಾಗಲಿದೆ. ಈ ಮೆರವಣಿಗೆಯಲ್ಲಿ ವಾದ್ಯ ಗೋಷ್ಠಿ, ತಮಟೆ, ಡೋಲು, ಗೊಂಬೆ ಕುಣಿತ, ವೀರಗಾಸೆ ಈಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಮೆರುಗು ನೀಡಲಿವೆ.
ಕೇಸರಿಮಯವಾಗಲಿರುವ ಕೋಟೆನಾಡು
ಗಣೇಶನ ಬೃಹತ್ ಶೋಭಾಯಾತ್ರೆಗೆ ಚಿತ್ರದುರ್ಗ ನಗರ ಕೇಸರಿ ಬಣ್ಣದ ಮಾಯವಾಗಿರುತ್ತದೆ. ಎಲ್ಲಿ ಎತ್ತಾ ನೋಡಿ ಕಣ್ಣಾಡಿಸಿದರೂ ಕೇಸರಿ ಬಾವುಟ ಹಾರಾಟ ಕಾಣಲಿವೆ. ನಗರದ ವೃತ್ತಗಳಿಗೆ ಬಣ್ಣ, ಬಣ್ಣದ ಅಲಂಕಾರ ಮಾಡಲಾಗುತ್ತದೆ. ಪ್ರಮುಖವಾಗಿ ಮದಕರಿನಾಯಕ ವೃತ್ತ, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ, ಕನಕ ಸರ್ಕಲ್ ಸೇರಿದಂತೆ ಮತ್ತಿತರರ ವೃತ್ತಗಳಿಗೆ ಅಲಂಕಾರ ಮಾಡಲಾಗುತ್ತದೆ.
ಹೊರ ಜಿಲ್ಲೆಗಳಿಂದ ಭಕ್ತರ ಆಗಮನ
ರಾಜ್ಯದಲ್ಲಿಯೇ ಹೆಸರುವಾಸಿಯಾಗಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ದಾವಣಗೆರೆ, ಬಳ್ಳಾರಿ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ನಾನಾ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸಲಿದ್ದಾರೆ.
ಒಟ್ಟಾರೆಯಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಹಮ್ಮಿಕೊಂಡಿರುವ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ ಕಾರ್ಯಕ್ರಮ 21 ದಿನಗಳ ಕಾಲ ನಡೆಯುತ್ತಿದ್ದು, ಈ ಬೃಹತ್ ಶೋಭಾಯಾತ್ರೆ ಚಿತ್ರದುರ್ಗ ದೇಶದಲ್ಲೇ ಗಮನ ಸೆಳೆದಿದೆ ಎನ್ನಬಹುದು. ಈ ಅದ್ದೂರಿ ಗಣಪತಿ ಮೆರವಣಿಗೆ ಕೆಲವು ದಿನಗಳು ಬಾಕಿ ಇದ್ದು, ಮೆರವಣಿಗೆ ಕಣ್ತುಂಬಿಕೊಳ್ಳಲು ಗಣೇಶನ ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications