ಚಿತ್ರದುರ್ಗ: ಅಯ್ಯಯ್ಯೋ ಬೆಲೆ ಹೆಚ್ಚಿದ ಬೆನ್ನಲ್ಲೇ ₹6,000,00 ಮೌಲ್ಯದ ಬೆಳ್ಳುಳ್ಳಿ ಕದ್ಬಿಟ್ರಪ್ಪೋ.. ಕದ್ಬಿಟ್ರು..
ಚಿತ್ರದುರ್ಗ, ಡಿಸೆಂಬರ್, 13: ದೇಶದಲ್ಲಿ ಕೆಲವು ದಿನಗಳ ಹಿಂದೆಯಷ್ಟೇ "ಕೆಂಪುರಾಣಿ" ಟೊಮೆಟೋ ಬೆಲೆ ಗಗನಕ್ಕೇರಿತ್ತು. ನಂತರ ಇದೀಗ ಈರುಳ್ಳಿ ದರ ಏರಿಕೆಯಾಗಿದ್ದು, ತಜ್ಞರ ಪ್ರಕಾರ ಜನವರಿ ವೇಳೆಗೆ ಇಳಿಕೆಯಾಗಲಿದೆ. ಹಾಗೆಯೇ ಇದೀಗ ಕೆ.ಜಿ.ಬೆಳ್ಳುಳ್ಳಿ ದರ 300-ರಿಂದ 400ಕ್ಕೆ ಏರಿಕೆಯಾಗಿದ್ದು, ಇಂತಹ ಸಮಯದಲ್ಲಿ ಚಿತ್ರದುರ್ಗ ಜಿಲ್ಲೆಯ ದಂಡಿಕುರುಬನಹಟ್ಟಿಯ ಗೋದಾಮಿನಲ್ಲಿ ಉದ್ಯಮಿಯೊಬ್ಬರು ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ 150 ಚೀಲ ಬೆಳ್ಳಳ್ಳಿಯನ್ನು ಕಳುವು ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಲೆ ಗಗನಕ್ಕೇರಿದ ಸಮಯದಲ್ಲೇ ರಾಜಲಕ್ಷ್ಮಿ ಕಂಪನಿಯ ಜಿ.ಎಂ.ಬಸವಕಿರಣ್ ಎಂಬುವವರಿಗೆ ಸೇರಿದ ಬೆಳ್ಳುಳ್ಳಿಯನ್ನು ಕದ್ದಿದ್ದಾರೆ. ಗೋದಾಮಿನ ಷಟರ್ ಮುರಿದು ಈ ಕೃತ್ಯ ಎಸಗಲಾಗಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ. ಬೆಳ್ಳುಳ್ಳಿ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಈ ಕಳ್ಳತನ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಉದ್ಯಮಿ ಬಸವಕಿರಣ್ ಅವರು 50 ಕೆ.ಜಿ. ತೂಕದ 1,100 ಚೀಲ ಬೆಳ್ಳುಳ್ಳಿಯನ್ನು ಮಧ್ಯಪ್ರದೇಶದಲ್ಲಿ ಖರೀದಿಸಿ ಚಿತ್ರದುರ್ಗಕ್ಕೆ ತಂದಿದ್ದರು. ದಂಡಿನಕುರುಬರಹಟ್ಟಿಯ ಜಯಶೀಲರೆಡ್ಡಿ ಎಂಬುವರ ಗೋದಾಮಿನಲ್ಲಿ 5 ತಿಂಗಳಿನಿಂದ ಸಂಗ್ರಹಿಸಿಟ್ಟಿದ್ದರು. ಗೋದಾಮಿಗೆ ಭೇಟಿ ನೀಡಿದಾಗ ಷಟರ್ ಮುರಿದಿದ್ದು ಗೊತ್ತಾಗಿದೆ. ಬಳಿಕ ಚೀಲಗಳನ್ನು ಪರಿಶೀಲಿಸಿ ದೂರು ನೀಡಿದ್ದಾರೆ ಎಂದು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಟೊಮೆಟೋ, ಆಲೂಗಡ್ಡೆ, ಈರುಳ್ಳಿ ಮುಂತಾದ ನಿತ್ಯೋಪಯೋಗಿ ಆಹಾರ ವಸ್ತುಗಳ ಬೆಲೆ ಗಗನಕ್ಕೇರಿ ಇಳಿದ ಬೆನ್ನಿಗೆ ಈಗ ಬೆಳ್ಳುಳ್ಳಿ ದರ ಗಗನಕ್ಕೆ ಏರಿದೆ. ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ನಾಟಿ ಬೆಳ್ಳುಳ್ಳಿಯ ದರ ಒಂದು ಕೆ.ಜಿಗೆ 400 ರೂಪಾಯಿಗೆ ತಲುಪಿದ್ದು, ಹೈಬ್ರಿಡ್ ಬೆಳ್ಳುಳ್ಳಿಯ ದರ ಒಂದು 300 ರೂಪಾಯಿಗೆ ತಲುಪಿದೆ ಎಂದು ತಿಳಿದುಬಂದಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications