ಗೂಳಿಹಟ್ಟಿ ಶೇಖರ್ ಗೆ ಸಿಗದ ಸಚಿವ ಸ್ಥಾನ; ಹೊಸದುರ್ಗದಲ್ಲಿ ಬೆಂಬಲಿಗರ ಪ್ರತಿಭಟನೆ
ಚಿತ್ರದುರ್ಗ, ಆಗಸ್ಟ್ 20: ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಗೂಳಿಹಟ್ಟಿ ಶೇಖರ್ ಬೆಂಬಲಿಗರು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಗೂಳಿಹಟ್ಟಿ ಶೇಖರ್ ಅವರು 2008ರಲ್ಲಿ ದಕ್ಷಿಣ ಭಾರತದಲ್ಲಿ, ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದೇ ಸರ್ಕಾರದಲ್ಲಿ ಜವಳಿ ಮತ್ತು ಕ್ರೀಡಾ ಸಚಿವರಾಗಿದ್ದರು. ಹೊಸದುರ್ಗ ಸಾಮಾನ್ಯ ಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಗೆಲುವು ಪಡೆದುಕೊಂಡಿದ್ದಾರು. ಹೀಗಾಗಿ ಶೇಖರ್ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು.

ಇತ್ತ ಸಚಿವ ಸ್ಥಾನ ತಪ್ಪಿದ್ದರಿಂದ ಗೂಳಿಹಟ್ಟಿ ಶೇಖರ್, "ನಾನು ಬಿಜೆಪಿ ಸೇರಿ ತಪ್ಪು ಮಾಡಿದೆ" ಎಂದು ಬಹಿರಂಗವಾಗಿ ಅಸಮಾಧಾನವನ್ನು ಹೊರಹಾಕಿದ್ದಾರೆ.












Click it and Unblock the Notifications