ಸಿಎಂ ಪರಿಹಾರ ನಿಧಿಗೆ ಒಂದು ತಿಂಗಳ ವೇತನ ಒಪ್ಪಿಸಿದ ಚಿತ್ರದುರ್ಗದ ಸರ್ಕಾರಿ ನೌಕರ

ಚಿತ್ರದುರ್ಗ, ಮಾರ್ಚ್ 26: ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಹರಡುವಿಕೆ ದಿನೇ ದಿನೇ ಹೆಚ್ಚಾಗಿದ್ದು, ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿವೆ. ಇದೇ ವೇಳೆ ಕೋವಿಡ್ 19 ಪರಿಹಾರ ನಿಧಿಗೆ ದಾನಿಗಳು ಹಣ ನೀಡುವಂತೆ ಸಿಎಂ ಕೋರಿದ್ದಾರೆ.

ಈ ಮನವಿಗೆ ಸ್ಪಂದಿಸಿರುವ ಚಿತ್ರದುರ್ಗದ ಸರ್ಕಾರಿ ನೌಕರ ಒಂದು ತಿಂಗಳ ವೇತನವನ್ನು ಸರ್ಕಾರಕ್ಕೆ ನೀಡಿದ್ದಾರೆ. ನಿನ್ನೆ ರಾಜ್ಯದ ಮುಖ್ಯಮಂತ್ರಿಗಳು ಸಾರ್ವಜನಿಕರಲ್ಲಿ ಕೋವಿಡ್ 19 ಪರಿಹಾರ ನಿಧಿಗೆ ನೆರವಾಗುವಂತೆ ಮನವಿ ಮಾಡಿದ್ದರು.

ಕೋವಿಡ್ -19 ರಾಜ್ಯದಾದ್ಯಂತ ಹರಡಿದ್ದು ಈ ವೈರಾಣು ತಡೆಗಟ್ಟಲು ತಾವು ಸರ್ಕಾರದೊಂದಿಗೆ ಕೈಜೋಡಿಸಬೇಕೆಂದು ವಿನಂತಿಸಿದ್ದರು. ಅದರಂತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಸಹಾಯಕ ತೋಟಗಾರಿಕೆ ನಿರ್ದೇಶಕ ಟಿ. ಮಧು ಎಂಬುವರು ತಮ್ಮ ತಿಂಗಳ ವೇತನವನ್ನು ಯಾವುದೇ ವೈಯಕ್ತಿಕ ಕಡಿತ ಮಾಡದೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ವರ್ಗಾಯಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

Government Employee Donated His One Month Salary To Covid 19 Cm Relief Fund

ಚಿತ್ರದುರ್ಗದ ಜನತೆ ಸರ್ಕಾರಕ್ಕೆ ದೇಣಿಗೆ ಸಲ್ಲಿಸುವವರು ಆದಾಯ ತೆರಿಗೆ ಕಾಯ್ದೆ 80G (2) ರ ತೆರಿಗೆ ವಿನಾಯಿತಿ ಇದೆ. ಆದಾಯ ತೆರಿಗೆ ವಿನಾಯಿತಿ ಪಡೆಯಲು PAN NO. AAAGC1692P ಅಥವಾ GGGGG 0000G ಅನ್ನು ಬಳಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+