ಎಲ್ಲಾ ಯೋಜನೆ ಪೂರ್ಣಗೊಳ್ಳಲು 1 ಲಕ್ಷ ಕೋಟಿ ಬೇಕು: ಎಂಬಿ ಪಾಟೀಲ್
Recommended Video

ಚಿತ್ರದುರ್ಗ, ಸೆ. 11: ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣ ಗೊಳಿಸಲು ಸರ್ಕಾರಕ್ಕೆ ಕನಿಷ್ಠ 1 ಲಕ್ಷ ಕೋಟಿ ರು ಬೇಕಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಹೇಳಿದರು.
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, ಈ ವರ್ಷಾಂತ್ಯಕ್ಕೆ ಅಜ್ಜಂಪುರ ಬಳಿ ಕಾಲುವೆ ನಿರ್ಮಾಣ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಕೆಲ ತಾಂತ್ರಿಕ ಸಮಸ್ಯೆಯಿಂದ ಯೋಜನೆ ಕಾಮಗಾರಿಯ ಪ್ರಗತಿ ಕುಂಠಿತವಾಗಿದೆ ಎಂದರು.

ಮುಂದಿನ ಖಾರಿಫ್ ಬೆಳೆ ಋತುವಿಗೆ ಕಾಮಗಾರಿ ಅಂತ್ಯಗೊಳ್ಳಲಿದೆ. ಐದು ವರ್ಷಗಳ ಅವಧಿಗೆ 50,000 ಕೋಟಿ ರು ವೆಚ್ಚದಲ್ಲಿ ನೀರಾವರಿ ಯೋಜನೆಗಳು ಸಿದ್ಧಪಡಿಸಲಾಗಿತ್ತು. ಈ ಪೈಕಿ 42 ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಮಿಕ್ಕ ಮೊತ್ತವನ್ನು ಬಳಸಿ ಮುಂದಿನ ಮಾರ್ಚ್ ಒಳಗೆ ನೀರಾವರಿ ಕಾಮಗಾರಿಗಳನ್ನು ಪೂರೈಸಲಾಗುವುದು ಎಂದರು.
ಚಿತ್ರದುರ್ಗ ತಾಲೂಕಿನ ಬ್ರಹ್ಮಸಾಗರ, ಯಮ್ಮಿಹಟ್ಟಿ ಕೆರೆಗಳಿಗೆ ಏತ ನೀರಾವರಿ ಮೂಲಕ 14 ಕೋಟಿ ರು ವೆಚ್ಚದಲ್ಲಿ ನೀರು ಒದಗಿಸಲಾಗುವುದು. ಇದೇ ರೀತಿ ಜಿಲ್ಲೆಯ ಎಲ್ಲಾ ಕೆರೆಗಳಿಗೂ ನೀರು ಒದಗಿಸುವ ಯೋಜನೆಗೆ ಸದ್ಯದಲ್ಲೇ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದರು.
ಚಿತ್ರದುರ್ಗದಲ್ಲಿ ಮಳೆ: ಹಿರಿಯೂರಿನ ಜವನಗೊಂಡನಹಳ್ಳಿ ಹೊರತುಪಡಿಸಿದರೆ ಉಳಿದ ಎಲ್ಲೆಡೆ ಕೆರೆಗಳು ತುಂಬಿ ಕೊಂಡಿವೆ. ಈಶ್ವರಗೆರೆ, ಯರಬಳ್ಳಿ, ಕಂದಿಕೆರೆ, ಗೂಡನೂರನಹಳ್ಳಿಯ ಕೆರೆಗಳು ತುಂಬಿವೆ. ಹೊಲಗದ್ದೆಗಳಲ್ಲಿನ ಒಡ್ಡುಗಳು, ಚೆಕ್ ಡ್ಯಾಂಗಳು ತುಂಬಿ ಹರಿದಿವೆ.
ಕಳೆದ ಎರಡು ದಿನಗಳಲ್ಲಿ ಹೊಸದುರ್ಗ, ಚಿಕ್ಕಜಾಜೂರು, ಹೊಳಲ್ಕೆರೆ ಭಾಗಗಳಲ್ಲಿ ಭಾರಿ ಮಳೆ ಬಿದ್ದಿದೆ. ತಾಳ್ಯ ಕರೆ ತುಂಬುತ್ತಿರುವುದು ರೈತರಿಗೆ ಜೀವ ತಂದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications