ಗ್ರಾಮ ಪಂಚಾಯತಿ ಚುನಾವಣೆ: ಚಿತ್ರದುರ್ಗ ಜಿಲ್ಲೆಯಲ್ಲಿ 2 ಹಂತದ ಮತದಾನ
ಚಿತ್ರದುರ್ಗ, ನವೆಂಬರ್ 30: ಕರ್ನಾಟಕದ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಅಧಿಸೂಚನೆ ಪ್ರಕಟಿಸಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಎರಡು ಹಂತದ ಚುನಾವಣೆ ನಡೆಯಲಿದೆ.
ಮೊದಲ ಹಂತದ ಮತದಾನ ಡಿ.22 ರಂದು ಚಿತ್ರದುರ್ಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳಲ್ಲಿ ನಡೆಯಲಿದ್ದು, ಎರಡನೇ ಹಂತದ ಮತದಾನ ಡಿ.27 ರಂದು ಹಿರಿಯೂರು, ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ನಡೆಯಲಿದೆ.
ಮತ ಎಣಿಕೆಯು ಒಂದೇ ದಿನ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಡಿ.30 ರಂದು ನಡೆಯಲಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಡಿ.7 ರಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಡಿ.11 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಡಿ.12 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಾಸ್ ಪಡೆಯಲು ಡಿ.14 ಕೊನೆಯ ದಿನವಾಗಿದೆ. ಮರು ಮತದಾನಕ್ಕೆ ಅಗತ್ಯವಿದ್ದರೆ ಡಿ.24 ರಂದು ಅವಕಾಶ ಕಲ್ಪಿಸಲಾಗುವುದು.

ಎರಡನೇ ಹಂತದ ಮತದಾನಕ್ಕೆ ಡಿ.11 ರಿಂದ ನಾಮಪತ್ರ ಸಲ್ಲಿಸಬಹುದಾಗಿದ್ದು, ಡಿ.16 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಡಿ.17 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಾಸ್ ಪಡೆಯಲು 19 ರಂದು ಕೊನೆಯ ದಿನವಾಗಿದೆ. ಮರು ಮತದಾನಕ್ಕೆ ಅಗತ್ಯವಿದ್ದರೆ ಡಿ.29ರಂದು ಅವಕಾಶ ಕಲ್ಪಿಸಲಾಗುವುದು.
ಚಿತ್ರದುರ್ಗ ಜಿಲ್ಲೆಯ ಆರು ತಾಲ್ಲೂಕುಗಳಿಂದ ಒಟ್ಟು 189 ಗ್ರಾಮ ಪಂಚಾಯಿತಿಗಳಿವೆ. ಮೊದಲ ಹಂತದ ಮತದಾನವು ಚಿತ್ರದುರ್ಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕುಗಳಲ್ಲಿ ಚುನಾವಣೆ ನಡೆಯಲಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 38 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 727 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಹೊಸದುರ್ಗ ತಾಲ್ಲೂಕಿನಲ್ಲಿ 33 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 493 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 29 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 533 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಎರಡನೇ ಹಂತದ ಮತದಾನವು ಹಿರಿಯೂರು, ಮೊಳಕಾಲ್ಮುರು ಹಾಗೂ ಚಳ್ಳಕೆರೆ ತಾಲ್ಲೂಕುಗಳಲ್ಲಿ ಚುನಾವಣೆ ನಡೆಯಲಿದೆ. ಹಿರಿಯೂರು ತಾಲ್ಲೂಕಿನಲ್ಲಿ 33 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 590 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಮೊಳಕಾಲ್ಮುರು ತಾಲ್ಲೂಕಿನಲ್ಲಿ 16 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 323 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 40 ಗ್ರಾಮ ಪಂಚಾಯಿತಿಗಳಿದ್ದು, ಒಟ್ಟು 755 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications