ನಕಲಿ ಜಾತಿ ಪ್ರಮಾಣಪತ್ರ ಸೃಷ್ಟಿ: 3 ತಿಂಗಳಿಗೇ ವಾಣಿವಿಲಾಸಪುರ ಗ್ರಾ.ಪಂ ಸದಸ್ಯತ್ವ ರದ್ದು
ಚಿತ್ರದುರ್ಗ, ಏಪ್ರಿಲ್ 9: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಸೃಷ್ಟಿಸಿ, ಮೀಸಲು ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದು, ಕೇವಲ ಮೂರೇ ತಿಂಗಳಿಗೆ ಮಹಿಳೆಯೊಬ್ಬರು ಗ್ರಾ.ಪಂ ಸದಸ್ಯತ್ವ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸಪುರ ಗ್ರಾಮದ ಮಹಿಳೆ ನೀಲಮ್ಮ ಸದಸ್ಯತ್ವ ಕಳೆದುಕೊಳ್ಳುವ ಮಹಿಳೆಯಾಗಿದ್ದಾರೆ ಎಂದು ತಿಳಿದುಬಂದಿದೆ. 2020ರ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದಿತ್ತು. ನೀಲಮ್ಮ ವಾಣಿವಿಲಾಸ ಪುರ-1 ಕ್ಷೇತ್ರದ ಪರಿಶಿಷ್ಟ ಪಂಗಡ ಮಹಿಳಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡಿದ್ದರು.
ನೀಲಮ್ಮ ಜಾತಿ ಪ್ರಮಾಣ ಪತ್ರವನ್ನು ಪ್ರಶ್ನಿಸಿದ ಭ್ರಷ್ಟಾಚಾರ ವಿರೋಧಿ ವೇದಿಕೆ ರಾಜ್ಯಾಧ್ಯಕ್ಷ ಉಮೇಶ್ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿ, ಸತ್ಯ ಸಂಗತಿಯನ್ನು ಬಯಲು ಮಾಡಿದ್ದಾರೆ.

ಪ್ರಕರಣ ಹಿನ್ನೆಲೆ
ಹಿರಿಯೂರು ತಾಲ್ಲೂಕಿನ ವಾಣಿವಿಲಾಸಪುರ ಗ್ರಾಮ ಪಂಚಾಯಿತಿಯಲ್ಲಿ ನೀಲಮ್ಮ ಕೋಂ.ಕೆ.ಕೃಷ್ಣಪ್ಪ ಎಂಬ ಎಸ್ಟಿ ಮಹಿಳಾ ಮೀಸಲು ಕ್ಷೇತ್ರದ ಅಭ್ಯರ್ಥಿಯೊಬ್ಬರು ತಹಶೀಲ್ದಾರ ಅವರಿಂದ ಪಡೆದ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ದಿನಾಂಕ 30-12-2020 ರಂದು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಿ ಸದಸ್ಯರಾಗಿ ಆಯ್ಕೆಯಾಗಿದ್ದರು.
ಆಯ್ಕೆಯಾದ ದಿನದಿಂದ ಎ.ಉಮೇಶ್ ಅವರು ತಹಶೀಲ್ದಾರ, ಅಸಿಸ್ಟೆಂಟ್ ಕಮಿಷನರ್, ಜಿಲ್ಲಾಧಿಕಾರಿ ಮತ್ತು ಚುನಾವಣಾ ಆಯೋಗಗಳಿಗೆ ಪತ್ರ ವ್ಯವಹಾರಗಳ ಮೂಲಕ ದೂರು ನೀಡಿ ಹೋರಾಟ ನಡೆಸಿ ಕೊನೆಗೆ ಅಸಿಸ್ಟೆಂಟ್ ಕಮಿಷನರ್ ಚಿತ್ರದುರ್ಗ ನ್ಯಾಯಾಲಯದಲ್ಲಿ ಜಾತಿ ಪ್ರಮಾಣ ಪತ್ರವನ್ನು ರದ್ದು ಪಡಿಸುವಂತೆ ಮೇಲ್ಮನವಿ ಅರ್ಜಿ ಮೂಲಕ ದಾವೆ ಹೂಡಿ, ನ್ಯಾಯಾಲಯದಲ್ಲಿ ಎ.ಉಮೇಶ್ ಅವರೇ ವಾದ ಮಂಡಿಸಿ ಜಯ ಪಡೆದಿದ್ದಾರೆ.

ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಚಿತ್ರದುರ್ಗ ಮತ್ತು ಹಿರಿಯೂರು ತಹಶೀಲ್ದಾರ ಇವರುಗಳ ಜಂಟಿ ಸ್ಧಳ ತನಿಖಾ ವರದಿಯ ಆಧಾರದ ಮೇರೆಗೆ ವಿ.ವಿ ಪುರ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ನೀಲಮ್ಮ ಎಂಬ ಮಹಿಳಾ ಸದಸ್ಯೆಗೆ ತಹಶೀಲ್ದಾರ ಅವರು ನೀಡಿದ ಜಾತಿ ಪ್ರಮಾಣ ಪತ್ರವು ಸುಳ್ಳು ಜಾತಿ ಪ್ರಮಾಣ ಪತ್ರವೆಂದು ಕಂಡು ಬಂದ ಹಿನ್ನೆಲೆಯಿಂದಾಗಿ ಉಮೇಶ್ ಸಲ್ಲಿಸಿರುವ ಮೇಲ್ಮನವಿಯ ಅರ್ಜಿಯನ್ನು ನ್ಯಾಯಾಲಯ ಅಂಗೀಕಸಿದೆ.
ನಾಯಕ (ಎಸ್ಟಿ) ಜಾತಿಯ ಪ್ರಮಾಣ ಪತ್ರವನ್ನು ರದ್ದು ಪಡಿಸಲಾಗಿದೆ ಎಂದು ಚಿತ್ರದುರ್ಗ ಉಪ ವಿಭಾಗ, ಚಿತ್ರದುರ್ಗ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಸನ್ನ.ವಿ ಅವರು ದಿನಾಂಕ 08-04-2021ರಂದು ತೀರ್ಪು ನೀಡಿ, ಪರಿಶಿಷ್ಟ ಪಂಗಡ (ನಾಯಕ/ಎಸ್ಟಿ)ದ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ರದ್ದುಪಡಿಸಿ ಆದೇಶ ನೀಡಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications