'ವರ್ಷಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅವನು ಮುರುಘಾ ಅಲ್ಲ ಮೃಗ'
ಚಿತ್ರದುರ್ಗ ಸೆಪ್ಟೆಂಬರ್ 1: 'ಹಲವು ವರ್ಷಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅವನು ಮುರುಘಾ ಅಲ್ಲ ಮೃಗ' ಎಂದು ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶು ಆಕ್ರೋಶ ಹೊರಹಾಕಿದ್ದಾರೆ.
ಫೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದ್ದು ಅಜ್ಞಾತ ಸ್ಥಳದಲ್ಲಿ ಇರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಅತ್ಯಾಚಾರದ ಆರೋಪದ ಮೇಲೆ ಒಟ್ಟು ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈಗಾಗಲೇ ಇಬ್ಬರ ಬಂಧನವಾಗಿದೆ. ಮೊದಲನೇ ಆರೋಪಿ ಮಠದ ಮಹಿಳಾ ವಾರ್ಡನ್ ಆಗಿದ್ದು ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ. ನಂತರ ಶ್ರೀಗಳನ್ನು ಇಂದು ಬಂಧಿಸಲಾಗಿದ್ದು ಇನ್ನೂ ಮೂವರ ಬಂಧನವಾಗಬೇಕಿದೆ. ಮೂರನೇ ಆರೋಪಿ ಮಠದ ಉತ್ತರಾಧಿಕಾರಿ ಬಸವಾದಿತ್ಯ, ನಾಲ್ಕನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ, ಇನ್ನೂ ಐದನೇ ಆರೋಪಿ ವಕೀಲ ಗಂಗಾಧರಯ್ಯ ಅವರ ಬಂಧನವಾಗಬೇಕಿದೆ. ಪ್ರಕರಣದ ಬೆಳವಣಿಗೆ ಬಗ್ಗೆ ಒಡನಾಡಿ ಸಂಸ್ಥೆಯ ಪರಶು ಮುಖ್ಯಸ್ಥ ಪ್ರತಿಕ್ರಿಯೆ ನೀಡಿದ್ದಾರೆ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆಯ ಮೂಲಕ ಆಗಸ್ಟ್ 26ರಂದು ಮೈಸೂರಿನ ನಜರ್ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಒಡನಾಡಿ ಸಂಸ್ಥೆ ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸುವ ಸಂಸ್ಥೆಯಾಗಿದೆ. ಬಳಿಕ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾಯಿಸಲಾಗಿದೆ. ಶ್ರೀಗಳ ಬಂಧನಕ್ಕೆ ಒತ್ತಡ ಹೆಚ್ಚಾದ ಬೆನ್ನಲ್ಲೆ ಪ್ರಕರಣ ದಾಖಲಾಗಿ ಆರು ದಿನಗಳ ಬಳಿಕ ಅವರನ್ನು ಬಂಧಿಸಲಾಗಿದೆ.

ಮೈಸೂರು ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶು ಮಾತನಾಡಿ, 'ಶಿವಮೂರ್ತಿ ಶ್ರೀ ಕಾವಿ ಹಾಕಿರುವ ಬೆಕ್ಕು. ಮುರುಘಾ ಅಲ್ಲ ಅವರೊಂದು ಮೃಗ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತರಲ್ಲಿ ದಲಿತ ಮಕ್ಕಳಿದ್ದಾರೆ. ಮಠದಲ್ಲಿ ಇಂತಹ ಹೀನಾಯ ಸ್ಥಿತಿಯನ್ನು ಬಹಳಷ್ಟು ಮಕ್ಕಳು ಅನುಭವಿಸಿದ್ದಾರೆ. ಈ ಕಿರಾತಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮಕ್ಕಳ ಮೇಲೆ ಹತ್ತು ಹದಿನೈದು ವರ್ಷದಿಂದ ದೌರ್ಜನ್ಯ ನಡೆದಿದೆ. ಅದೆಲ್ಲವೂ ಹೊರಬರಬೇಕು. ಅಲ್ಲಿವರೆಗೂ ನಮಗೆ ಸಮಾಧಾನವಿಲ್ಲ' ಎಂದು ಹೇಳಿದ್ದಾರೆ.
'ಕಾನೂನಾತ್ಮಕವಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮಕ್ಕಳಿಗೆ ನ್ಯಾಯ ಸಿಗಬೇಕು. ಬಂಧನ ಮಾತ್ರವಲ್ಲ. ಆ ಜಾಗದಲ್ಲಿ ಅದೆಷ್ಟು ಮಕ್ಕಳು ದೌರ್ಜನ್ಯಕ್ಕೆ ಒಳಗಾಗಿದ್ದಾರೋ ಗೊತ್ತಿಲ್ಲ. ಅವರ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳಬೇಕು. ಈ ವಿಕೃತ ಮನುಷ್ಯ ಅಳಿದು ಹೋಗಬೇಕು. ಸಾಕಷ್ಟು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಪೈಶಾಚಿಕ ಘಟನೆ ಸ್ಪಷ್ಟವಾಗಿದೆ. ಜನಸಾಮಾನ್ಯರು ಬಡಮಕ್ಕಳು, ಅನಾಥರು, ದಲಿತ ಮಕ್ಕಳ ಪರವಾಗಿದ್ದಾರೆ' ಎಂದು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications