ಚಿತ್ರದುರ್ಗ: ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಮುಖ್ಯಶಿಕ್ಷಕ
ಚಿತ್ರದುರ್ಗ, ಅಕ್ಟೋಬರ್, 25: ಶೌಚಾಲಯವನ್ನು ಸರಿಯಾಗಿ ಸ್ವಚ್ಛಗೊಳಿಸಿಲ್ಲ ಎಂದು ಕೋಪಗೊಂಡ ಮುಖ್ಯಶಿಕ್ಷಕನೋರ್ವ ವಿದ್ಯಾರ್ಥಿನಿಯ ಮೇಲೆ ಆಸಿಡ್ ಎರಚಿರುವ ಬೆಚ್ಚಿಬೀಳಿಸುವ ಘಟನೆ ಚಿತ್ರದುರ್ಗ ಜಿಲ್ಲೆಯ ಜೋಡಿಚಿಕ್ಕೇನಹಳ್ಳಿಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಜೋಡಿಚಿಕ್ಕೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2ನೇ ತಹಗತಿಯ ಬಾಲಕಿಯೋರ್ವಳಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಮುಖ್ಯ ಶಿಕ್ಷಕ ರಂಗಸ್ವಾಮಿ ಎಂಬುವರು ಸೂಚಿಸಿದ್ದರು ಎನ್ನಲಾಗಿದೆ. ವಿದ್ಯಾರ್ಥಿನಿಯ ಸರಿಯಾಗಿ ಶೌಚಾಲಯ ಸ್ವಚ್ಛಗೊಳಿಸದ ಕಾರಣ ಕೋಪಗೊಂಡ ಮುಖ್ಯಶಿಕ್ಷಕ ರಂಗಸ್ವಾಮಿ ಎನ್ನುವವರು ಶೌಚಾಲಯ ಸ್ವಚ್ಛಗೊಳಿಸುವುದಕ್ಕೆ ತಂದಿದ್ದ ಆಸಿಡ್ ಅನ್ನೇ ವಿದ್ಯಾರ್ಥಿನಿಯ ಮೇರೆ ಎರಚಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಶೌಚಾಲಯ ಕ್ಲೀನ್ ಮಾಡುವುದಕ್ಕೆ ಬಳಸುವ ಆಯಸಿಡ್ ಅನ್ನು ಎರಚಿದ ಪರಿಣಾಮ, ವಿದ್ಯಾರ್ಥಿನಿಯ ಬೆನ್ನಿಗೆ ಗಂಭೀರವಾಗಿ ಗಾಯವಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಇಬ್ಬರು ಅಪರಾಧಿಗಳಿಗೆ ತಲಾ 20 ವರ್ಷ ಕಠಿಣ ಶಿಕ್ಷೆ
ಇತ್ತೀಚೆಗಷ್ಟೇ ಪ್ರತ್ಯೇಕ ಅತ್ಯಾಚಾರ ಪ್ರಕರಣಗಳಲ್ಲಿ ಚಾಮರಾಜನಗರ ಮಕ್ಕಳ ಸ್ನೇಹಿ ಹಾಗೂ 1ನೇ ಹೆಚ್ಚುವರಿ ನ್ಯಾಯಾಲಯವು ಇಬ್ಬರು ಅಪರಾಧಿಗಳಿಗೆ ತಲಾ 20 ವರ್ಷ ಕಠಿಣ ಶಿಕ್ಷೆ ವಿಧಿಸಿತ್ತು. ಇನ್ನು ಪ್ರಕರಣಗಳಲ್ಲಿ ಸಂತ್ರಸ್ತರಾದ ಅಪ್ರಾಪ್ತ ಬಾಲಕಿಯರಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರ ಹಣವನ್ನು 30 ದಿನದ ಒಳಗೆ ಕೊಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾ.ಎ.ಸಿ.ನಿಶಾರಾಣಿ ಆದೇಶ ನೀಡಿದ್ದರು.
ಪ್ರಕರಣ-1
5 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಕೊಳ್ಳೇಗಾಲ ತಾಲೂಕಿನ ಗ್ರಾಮವೊಂದರ ಬಸವರಾಜು (35) ಶಿಕ್ಷೆಗೊಳಗಾದ ಅಪರಾಧಿ. ಈತ 2019ರ ಡಿಸೆಂಬರ್ 2ರಂದು ಮನೆಯ ಮುಂಭಾಗ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಸಾಕ್ಷ್ಯಾಧಾರಗಳಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಸವರಾಜನಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಿಲಾಗಿತ್ತು.
ಪ್ರಕರಣ-2
12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪದ ಮೇಲೆ ಚಾಮರಾಜನಗರ ತಾಲೂಕಿನ ಗ್ರಾಮವೊಂದರ ನಾಗೇಶ್(23) ಶಿಕ್ಷೆಗೆ ಗುರಿಯಾದ ವ್ಯಕ್ತಿ. 2021ರ ಸೆಪ್ಟಂಬರ್ 13ರಂದು 12ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ತನ್ನ ಜೊತೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈತನ ವಿರುದ್ಧದ ಆರೋಪ ಸಾಕ್ಷಾಧಾರಗಳಿಂದ ಸಾಬೀತಾದ ಹಿನ್ನೆಲೆಯಲ್ಲಿ ಈತನಿಗೆ 20 ವರ್ಷ ಕಠಿಣ ಶಿಕ್ಷೆ, 20 ಸಾವಿರ ದಂಡ ವಿಧಿಸಲಾಗಿತ್ತು. ಈ ಎರಡು ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ಕೆ.ಯೋಗೇಶ್ ವಾದ ಮಂಡಿಸಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications