ಚಿತ್ರದುರ್ಗದಲ್ಲಿ ತಡ ರಾತ್ರಿ ಮಳೆ, ಮನೆಗೆ ನುಗ್ಗಿದ ನೀರು
ಚಿತ್ರದುರ್ಗ, ಜುಲೈ 18: ರಾಜ್ಯದ ಹಲವೆಡೆ ವರುಣನ ಆರ್ಭಟ ಮುಂದುವರೆದಿದ್ದು ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲೂ ಸಹ ವರುಣ ಅವಾಂತರ ಸೃಷ್ಟಿಸಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ನಿನ್ನೆ ರಾತ್ರಿ ಸುರಿದ ಮಳೆಗೆ ನೀರು ಮನೆಗಳಿಗೆ ನುಗ್ಗಿವೆ. ಇದರಿಂದ ಜನ ಜೀವನ ಅಸ್ತವ್ಯಸ್ತ ಗೊಂಡಿದೆ. ಬೆಳೆಗಳಿಗೆ ನೀರು ನುಗ್ಗಿದ ಪರಿಣಾಮವಾಗಿ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ.
ಚಿತ್ರದುರ್ಗ ನಗರದ ಗುಮಾಸ್ತ ಕಾಲೋನಿಯಲ್ಲಿ ಮಳೆ ನೀರು ನಿಂತು ರಸ್ತೆಗಳೆಲ್ಲವೂ ಜಲಾವೃತಗೊಂಡಿವೆ. ಸರಿಯಾದ ರಸ್ತೆ ಚರಂಡಿ ನಿರ್ಮಾಣ ಮಾಡಿಲ್ಲದಿದ್ದಕ್ಕೆ ನೀರು ಮನೆಯೊಳಗೆ ನುಗ್ಗಿದೆ. ಮನೆಯವರು ಮನೆಗೆ ನುಗ್ಗಿದ ನೀರನ್ನು ಹೊರ ಹಾಕಲು ಹರಸಾಹಸ ಪಡಬೇಕಾಯಿತು.
ಇನ್ನು ಸುರಿದ ಮಳೆಗೆ ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಐತಿಹಾಸಿಕ ಮಲ್ಲಾಪುರ ಕೆರೆ ತುಂಬಿ ಹರಿಯುತ್ತಿದೆ. ಇದಲ್ಲದೆ ಮೊಳಕಾಲ್ಮೂರು, ಹೊಳಲ್ಕೆರೆ, ಹೊಸದುರ್ಗ, ಸೇರಿದಂತೆ ಚಳ್ಳಕೆರೆ ತಾಲ್ಲೂಕಿನಲ್ಲೂ ಸಹ ಮಳೆಯಾಗಿದೆ.

ಹಿರಿಯೂರಿನಲ್ಲೂ ಮಳೆ: ತಾಲೂಕಿನ ಸುತ್ತ ಮುತ್ತ ಭಾಗದಲ್ಲಿ ತಡರಾತ್ರಿ 2 ಗಂಟೆಯಿಂದ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಕೃಷಿ ಚಟುವಟಿಕೆಗಳಿಗೆ ಸ್ವಲ್ಪ ಮಟ್ಟಿಗೆ ಅಡೆತಡೆ ಉಂಟಾಗಿದೆ ಎನ್ನಬಹುದು. ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಉತ್ತಮ ಮಳೆಯಾಗಿದೆ. ಮಳೆ ಸುರಿದ ಹಿನ್ನೆಲೆಯಲ್ಲಿ ತಾಲೂಕಿನ ನಂದಿಹಳ್ಳಿ ಗೊಲ್ಲರಹಟ್ಟಿಯ ರಸ್ತೆ ಕೆಸರು ಗದ್ದೆಯಂತಾಗಿದೆ.

Recommended Video
ಕೋಲಾಟದಹಟ್ಟಿ, ಮಸ್ಕಲ್ ಚಿತ್ರದೇವರಹಟ್ಟಿ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಇನ್ನು ನಗರದ ವಾಣಿ ಕಾಲೇಜು ಹಿಂಭಾಗದ ದೇವಗಿರಿ ನಗರದ ರಸ್ತೆಗಳು ಮಳೆ ಬಂದು ಕೆಸರು ತುಂಬಿದ್ದು, ಮಕ್ಕಳು ಜಾರಿ ಬೀಳುವ ಸ್ಥಿತಿಯಾಗಿದೆ. ಗಾಡಿಗಳು ಓಡಾಡಲು ಬರದಂತೆ ಆಗಿವೆ. ನಗರಸಭೆಯವರು ಮತ್ತು ಶಾಸಕರು ಇದರ ಕಡೆ ಗಮನ ಹರಿಸಬೇಕು ಎಂದು ದೇವಗಿರಿ ನಗರದ ನಿವಾಸಿಗಳು ಒತ್ತಾಯಿಸಿದ್ದಾರೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ












Click it and Unblock the Notifications