ಹಿರಿಯೂರು ತಾಲ್ಲೂಕಿನಾದ್ಯಂತ ಗುಡುಗು ಸಹಿತ ಮಳೆರಾಯನ ಆರ್ಭಟ
ಹಿರಿಯೂರು, ಮೇ, 07: ಇಷ್ಟು ದಿನ ಮಳೆಯಿಲ್ಲದೆ ಬಿಸಿಲಿನ ಬೇಗೆಯಿಂದ ಬೆಂದಿದ್ದ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಮಂಗಳವಾರ (ಮೇ 07) ಸುಮಾರು ಸಂಜೆ 6:15ರ ವೇಳಗೆ ಮಳೆರಾಯ ತಂಪೆರೆದಿದ್ದಾನೆ.
ಇಂದು ಸಂಜೆಯಾಗುತ್ತಿದ್ದಂತೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಾದ್ಯಂತ ಗುಡುಗು ಸಹಿತ ವರ್ಷದ ಮೊದಲ ಮಳೆರಾಯ ಆರ್ಭಟಿಸಿದ್ದಾರೆ. ಅರ್ಧ ಗಂಟೆಯಿಂದ ಮಳೆರಾಯ ಅಬ್ಬರಿಸಿದ್ದು, ಇದರಿಂದ ಇಲ್ಲಿನ ಜನರು, ರೈತರ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

ಕಳೆದ ಎರಡು ವರ್ಷಗಳಿಂದ ಮಳೆಯಿಲ್ಲದೆ ಕಂಗೆಟ್ಟು, ಮೋಡ ನೋಡುತ್ತಿದ್ದ ಜನತೆಗೆ ಮಂಗಳವಾರ ಸಂಜೆ ವರುಣ ದೇವ ಕಣ್ತೆರೆಯುವ ಮೂಲಕ ಪ್ರಸಕ್ತ ಸಾಲಿನಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇನ್ನು ಮಳೆ ಸುರಿದ ಹಿನ್ನೆಲೆ ಸುಡು ಬಿಸಿಲಿನ ತಾಪಕ್ಕೆ ಹಿರಿಯೂರಿನ ಜನತೆ ಕೊಂಚ ನಿರಾಳರಾಗಿದ್ದಾರೆ. ತಾಲೂಕಿನ ಜನರ ಮನದಲ್ಲಿ ಕೊನೆಗೂ ಮಳೆ ಬಂತಲ್ಲ ಎಂಬ ಆಶಾಭಾವನೆ ಮೂಡಿತು.
ತಾಲ್ಲೂಕಿನಲ್ಲಿ ನೀರಿನ ಸಮಸ್ಯೆ: ತಾಲ್ಲೂಕಿನಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ ಅಡಿಕೆ, ತೆಂಗು, ಬಾಳೆ ಸೇರಿದಂತೆ ಇನ್ನೀತರ ತೋಟಗಾರಿಕೆ ಬೆಳೆಗಳು ಒಣಗಿ ಹೋಗಿವೆ. ಅಡಿಕೆ ತೋಟ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ಮೊರೆ ಹೋಗಿದ್ದರು. ಅಡಿಕೆ ಗಿಡಗಳಿಗೆ ಟ್ಯಾಂಕರ್ ನೀರು ಬಿಡಿಸುವ ಮೂಲಕ ತೋಟ ಉಳಿಸಿಕೊಳ್ಳಲು ರೈತರು ಹರಸಾಹಸ ಪಡುತ್ತಿದ್ದಾರೆ. ಇದಲ್ಲದೆ ಜನ ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಗ್ರಾಮ ಪಂಚಾಯಿತಿಯಿಂದ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತದೆ. ಇನ್ನು ತೋಟಗಳಲ್ಲಿ ಬೋರ್ವೆಲ್ ಅಂತರಜಾಲ ಮಟ್ಟ ಕುಸಿದಿದೆ. ಸಾವಿರಾರು ಅಡಿಗಳಷ್ಟು ಬೋರ್ ಕೊರೆಸಿದರು ನೀರು ಸಿಗುತ್ತಿಲ್ಲ. ತಾಲೂಕಿನ ಗಾಯತ್ರಿ ಜಲಾಶಯದಲ್ಲಿ ನೀರು ಖಾಲಿಯಾಗಿದ್ದರಿಂದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬೋರನಕಣಿವೆ ಜಲಾಶಯದಿಂದ ನೀರು ಹರಿಸಿದ್ದರು.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications