ಚಳ್ಳಕೆರೆಯಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಮನೆಗಳು ಜಲಾವೃತ
ಚಿತ್ರದುರ್ಗ, ಜುಲೈ 20: ಕೊರೊನಾ ವೈರಸ್ ಮಧ್ಯೆಯೂ ಭಾನುವಾರ ರಾತ್ರಿ ಸುರಿದ ಭಾರಿ ಮಳೆಗೆ ಮನೆಗಳು ಜಲಾವೃತವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದ ಅಭಿಷೇಕ್ ನಗರದಲ್ಲಿ ನಡೆದಿದೆ.
Recommended Video
ರಾತ್ರಿ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವಾರು ಮನೆಗಳು ಜಲಾವೃತವಾಗಿ, ಗೃಹೋಪಯೋಗಿ ವಸ್ತುಗಳು ನೀರಿನಲ್ಲಿ ತೇಲಾಡಿವೆ.
ಚಿತ್ರದುರ್ಗದಲ್ಲೀಗ ಸೋಂಕಿಗೆ ಪೊಲೀಸರ ಸರದಿ; ಠಾಣೆಗಳು ಸೀಲ್ ಡೌನ್
ವಿಷಯ ತಿಳಿದ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ತಹಶೀಲ್ದಾರ್, ನಗರಸಭೆ ಆಯುಕ್ತರು ಸೇರಿದಂತೆ ಮತ್ತಿತರರು ತಕ್ಷಣ ರಾತ್ರೋರಾತ್ರಿ ಸ್ಥಳಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು. ಜಲಾವೃತವಾದ ಮನೆಗಳಲ್ಲಿದ್ದ ಜನರನ್ನು ಸಮುದಾಯ ಭವನಕ್ಕೆ ಅಧಿಕಾರಿಗಳು ಸ್ಥಳಾಂತರಿಸಿದ್ದು, ಸಂತ್ರಸ್ತರಿಗೆ ತಾತ್ಕಾಲಿಕ ನೆರವು ನೀಡಿ, ಪುನರ್ವಸತಿ ವ್ಯವಸ್ಥೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ANF ಸಿಬ್ಬಂದಿಗೆ ಕೊರೊನಾ ಸೋಂಕು
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂಬತ್ತು ಮಂದಿ ANF ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. ಕೆರೆಕಟ್ಟೆ ಕ್ಯಾಂಪ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳಿಗೆ ಮಾಹಾಮಾರಿ ರೋಗ ವಕ್ಕರಿಸಿದೆ.
ಚಿತ್ರದುರ್ಗದಲ್ಲಿ ಕೊರೊನಾ ವೈರಸ್ ಮಹಾಮಾರಿಗೆ ನಾಲ್ಕನೇ ಬಲಿ
ಶೃಂಗೇರಿ ತಾಲೂಕಿನ ಕೆರೆಕಟ್ಟೆ ನಕ್ಸಲ್ ಕ್ಯಾಂಪ್ ಕಾಡಿನಲ್ಲಿ ನಕ್ಸಲರಿಗಾಗಿ ANF ಸಿಬ್ಬಂದಿಗಳು ಹುಡುಕಾಟದಲ್ಲಿದ್ದರು. ಭಾನುವಾರ ಚಿಕ್ಕಮಗಳೂರಲ್ಲಿ 41 ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.