ನಾಳೆ ಚಿತ್ರದುರ್ಗದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ; ರಸ್ತೆ ಮಾರ್ಗಸೂಚಿ ಬದಲಾವಣೆ
ಚಿತ್ರದುರ್ಗ, ಸೆಪ್ಟೆಂಬರ್ 11: ಕೋಟೆನಾಡು ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯ ಎಂ.ಎಂ ಪ್ರೌಢಶಾಲೆ ಆವರಣದ ವೇದಿಕೆಯಲ್ಲಿ ಪ್ರತಿಷ್ಠಾಪಿಸಿರುವ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಯು ನಾಳೆ ವಿಸರ್ಜನೆ ಕಾರ್ಯಕ್ರಮ ನಡೆಯಲಿದೆ.
ಹಿಂದೂ ಮಹಾಗಣಪತಿ ವಿಸರ್ಜನೆಯಿಂದ ರಸ್ತೆ ಸಾರಿಗೆ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಆದೇಶಿಸಿದ್ದಾರೆ. ಮಹಾಗಣಪತಿ ಮೆರವಣಿಗೆ ಹಾದು ಹೋಗುವ ನಗರದ ಪ್ರಮುಖ ಬಿ.ಡಿ ರಸ್ತೆಯ ಮೂಲಕ ಸಾಗಿ ಹೊಳಲ್ಕೆರೆ ರಸ್ತೆ ಕಡೆಗೆ ಹೋಗಲಿದೆ.
ಗಣೇಶನ ಮೆರವಣೆಗೆಯಲ್ಲಿ ಅತಿ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದ್ದು, ಮೆರವಣಿಗೆ ಸಮಯದಲ್ಲಿ ನಗರದಲ್ಲಿನ ರಸ್ತೆಗಳಲ್ಲಿ ಸಂಚರಿಸುತ್ತಿರುವ ವಾಹನಗಳು ನಗರದ ಮುಖ್ಯರಸ್ತೆ ಹಾಗೂ ಇತರೆ ರಸ್ತೆಗಳಲ್ಲಿ ಸಂಚರಿಸಲು ಸಾಧ್ಯವಾಗದ ಕಾರಣ ನಾಳೆ ನಗರದಲ್ಲಿ ಸಂಚರಿಸುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶ ಹೊರಡಿಸಲಾಗಿದೆ.

ಬೆಂಗಳೂರು ಮತ್ತು ಚಳ್ಳಕೆರೆ ಮಾರ್ಗವಾಗಿ ಬರುವ ವಾಹನಗಳು ಎನ್.ಹೆಚ್-4 ಬೈಪಾಸ್ ರಸ್ತೆ ಮುಖಾಂತರ ಬಂದು ಮೆದೆಹಳ್ಳಿ ರಸ್ತೆ ಮತ್ತು ಎಪಿಎಂಸಿ ಮಾರುಕಟ್ಟೆ ಮೂಲಕ ಬಸ್ ನಿಲ್ದಾಣಕ್ಕೆ ಬಂದು ಪುನಃ ವಾಪಸ್ ಅದೇ ಮಾರ್ಗದಲ್ಲಿ ಸಂಚರಿಸುವುದು.
ದಾವಣಗೆರೆ ಮಾರ್ಗದಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದು ಪುನಃ ಅದೇ ಮಾರ್ಗದಲ್ಲಿ ಸಂಚರಿಸುವುದು. ಶಿವಮೊಗ್ಗ, ಹೊಳಲ್ಕೆರೆ, ಭೀಮಸಮುದ್ರದ ಮಾರ್ಗದಿಂದ ಬರುವ ವಾಹನಗಳು ಎನ್.ಎಚ್-13 ಬೈಪಾಸ್ ನಲ್ಲಿ ಮುರುಘಾ ಮಠದವರೆಗೆ ಹೋಗಿ ನಂತರ ಎನ್.ಎಚ್-4 ಬೈಪಾಸ್ ರಸ್ತೆ ಮುಖಾಂತರ ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ನಿಲ್ದಾಣಕ್ಕೆ ಬಂದು ಪುನಃ ವಾಪಸು ಅದೇ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.

ಸೆಪ್ಟೆಂಬರ್ 12 ರಂದು ಹಿಂದೂ ಮಹಾಗಣಪತಿ ವಿಗ್ರಹ ವಿಸರ್ಜನಾ ಮೆರವಣಿಗೆ ಪ್ರಯುಕ್ತ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಸಲುವಾಗಿ ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ಗಂಟೆಯಿಂದ ಸೆಪ್ಟೆಂಬರ್ 13ರ ಬೆಳಿಗ್ಗೆ 6 ಗಂಟೆಯವರೆಗೆ ಚಿತ್ರದುರ್ಗ ತಾಲ್ಲೂಕಿನಾದ್ಯಂತ ಬರುವ ಎಲ್ಲಾ ಬಗೆಯ ಮದ್ಯ ಮಾರಾಟದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣೆಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ಸಂಭವ ಇರುವುದರಿಂದ, ಜಿಲ್ಲೆಯಾದ್ಯಂತ ಕೋವಿಡ್-19 ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಗಳಂತೆ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಚಿತ್ರದುರ್ಗ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಆದೇಶಿಸಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications