ಚಿತ್ರದುರ್ಗ ಕೇಸರಿಮಯ: ಹಿಂದೂ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಆರಂಭ
ಚಿತ್ರದುರ್ಗ, ಸೆಪ್ಟೆಂಬರ್ 17 : ಗಣೇಶನ ಹಬ್ಬ ಬಂತು ಎಂದರೆ ಎಲ್ಲರಿಗೂ ನೆನಪಾಗುವುದು ಕೋಟೆ ನಾಡು. ಹೌದು ರಾಜ್ಯದಲ್ಲೇ ಗಣಪತಿ ಹಬ್ಬವನ್ನು ತೋರಿಸಿದ್ದೇ ಈ ಜಿಲ್ಲೆ. ಅಂದಹಾಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ 21 ದಿನಗಳ ಕಾಲ ಪ್ರತಿಷ್ಠಾಪಿಸಲಾಗಿದ್ದ ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಲಕ್ಷಾಂತರ ಮಂದಿ ಸಮ್ಮುಖದಲ್ಲಿ ಆರಂಭಗೊಂಡಿದೆ .
ಕೋವಿಡ್ 19 ಕಾರಣದಿಂದ ಕಳೆದ ಎರಡು ವರ್ಷ ಸರಳವಾಗಿ ನಡೆದಿದ್ದ ಶೋಭಾಯಾತ್ರೆ ಎಲ್ಲಾ ಆತಂಕ ದೂರವಾದ ಕಾರಣ ಈ ಬಾರಿ ನಿರೀಕ್ಷೆಗೂ ಮೀರಿದ ಉತ್ಸಾಹ, ಸಂಭ್ರಮ ವ್ಯಕ್ತವಾಗುತ್ತಿದೆ. ಮೆರವಣಿಗೆ ಸಾಗುವ ನಾಲ್ಕೂವರೆ ಕಿ.ಮೀ ಮಾರ್ಗ ಸಂಪೂರ್ಣ ಕೇಸರಿಮಯವಾಗಿದೆ.
ಶನಿವಾರ ಬೆಳಿಗ್ಗೆ ಜೈನ್ಧಾಮದ ಆವರಣದಲ್ಲಿ ಶೋಭಾಯಾತ್ರೆಗೆ ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಸಹ ಕಾರ್ಯದರ್ಶಿ ಅಂಬರೀಶ್ ಸಿಂಗ್ ವಿಧ್ಯುಕ್ತ ಚಾಲನೆ ನೀಡಿದ್ದಾರೆ. ಈ ಸಂಭ್ರಮದ ಕ್ಷಣಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾಗಿದ್ದಾರೆ. ಈ ಶೋಭಯಾತ್ರೆಗೆ ಲಕ್ಷಾಂತರ ಜನರು ಸಾಗರೋಪಾದಿಯಲ್ಲಿ ಕಿಕ್ಕಿರಿದು ಮೆರವಣಿಗೆಯಲ್ಲಿ ಸೇರುವುದು ಖಚಿತವಾಗಿದೆ. ಎತ್ತ ತಿರುಗಿದರು ಸಹ ಜನವೋ, ಜನ. ಗಣಪತಿ ಮೆರವಣಿಗೆಗೆ ನಿರೀಕ್ಷೆಗೂ ಮೀರಿ ಜನರು ಸೇರುತ್ತಿದ್ದಾರೆ.
ಶನಿವಾರ ಬೆಳಗ್ಗೆ 12ರ ಸುಮಾರಿಗೆ ವಿಜ್ಞಾನ ಕಾಲೇಜು ಮುಂಭಾಗದಿಂದ ಶುರುವಾದ ಗಣಪತಿ ವಿಸರ್ಜನಾ ಶೋಭಾಯಾತ್ರೆ ಮೂರು ಕಿಲೋಮೀಟರ್ ಸಾಗಿ, ಚಂದ್ರವಳ್ಳಿ ಕೆರೆಯಲ್ಲಿ ವಿಸರ್ಜನೆ ಗೊಳ್ಳಲಿದೆ. ಈ ಮೆರವಣಿಗೆಗೆ ನಿರೀಕ್ಷೆಗೂ ಮೀರಿ ಜನರು ಸೇರಲಿದ್ದಾರೆ. ಪ್ರತಿಷ್ಠಾಪನ ಸ್ಥಳದಿಂದ ಗಣಪತಿ ಮೆರವಣಿಗೆ ಹೊರಟು ಮದಕರಿನಾಯಕನ ವೃತ್ತ, ಅಂಬೇಡ್ಕರ್ ವೃತ್ತ, ಗಾಂಧಿ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತ ಹಾಗೂ ಕನಕ ವೃತ್ತದದ ಮೂಲಕ ಶೋಭಾಯಾತ್ರೆ ಸಾಗಲಿದೆ.

ಪೊಲೀಸರ ಸರ್ಪಗಾವಲು
ಯುವಕ, ಯುವತಿಯರು, ಮಕ್ಕಳು, ಹಿರಿಯರು ಹೀಗೆ ಎಲ್ಲರೂ ಭವ್ಯ ಮೆರವಣಿಗೆಗೆ ಸಾಕ್ಷಿಯಾಗಲಿದ್ದಾರೆ. ಇನ್ನು ರಸ್ತೆಯುದ್ದಕ್ಕೂ ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದಾರೆ. ಭದ್ರತೆಗಾಗಿ 8 ಕೆಎಸ್ಆರ್ಪಿ ತುಕಡಿಗಳು, 8 ಡಿಎಆರ್ ತುಕಡಿಗಳು ಸೇರಿದಂತೆ ಪೋಲಿಸರ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮೆರವಣಿಗೆಯಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಜೊತೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ನೇತೃತ್ವದ ತಂಡ ಸಹ ಎಲ್ಲಿಯೂ ಸಮಸ್ಯೆ ಆಗದಂತೆ ಎಚ್ಚರವಹಿಸಿದ್ದಾರೆ. ಇನ್ನು ಒಳ ಬರುವ ಪ್ರಮುಖ ರಸ್ತೆಗಳನ್ನು ತಾತ್ಕಾಲಿಕವಾಗಿ ಬಂಬೂಗಳಿಂದ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ವಾಚಿಂಗ್ ಟವರ್ ನಿರ್ಮಾಣ ಮಾಡಲಾಗಿದೆ.

ಎತ್ತನೋಡಿದರೂ ಕೇಸರಿ ಬಾವುಟಕ್ಕೆ ಹಾರಾಟ
ಗಣೇಶನ ಬೃಹತ್ ಶೋಭಾಯಾತ್ರೆಗೆ ಚಿತ್ರದುರ್ಗ ನಗರ ಕೇಸರಿ ಬಣ್ಣದ ಮಾಯಾವಾಗಿದೆ. ಎಲ್ಲಿ ಎತ್ತಾ ನೋಡಿದ್ರೂ ಕೇಸರಿ ಬಾವುಟ ಹಾರಾಟ ಕಾಣುತ್ತಿವೆ. ನಗರದ ವೃತ್ತಗಳಿಗೆ ಬಣ್ಣ ಬಣ್ಣದ ಅಲಂಕಾರ ಮಾಡಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ಮದಕರಿನಾಯಕ ವೃತ್ತ, ಗಾಂಧಿ ವೃತ್ತ, ಸಂಗೊಳ್ಳಿ ರಾಯಣ್ಣ, ಕನಕ ಸರ್ಕಲ್ ಸೇರಿದಂತೆ ಮತ್ತಿತರರ ವೃತ್ತಗಳಿಗೆ ಭಾರಿ ಅಲಂಕಾರ ಮಾಡಲಾಗಿದೆ.

ಅಲಂಕಾರ ರಹಿತವಾಹಿ ಕಂಡ ಅಂಬೇಡ್ಕರ್ ಪ್ರತಿಮೆ
ಗಣೇಶನ ಮೆರವಣಿಗೆ ಹಿನ್ನಲೆಯಲ್ಲಿ ನಗರದ ಎಲ್ಲಾ ವೃತ್ತಗಳಿಗೆ ಅಲಂಕಾರ ಮಾಡಿದ ಹಿನ್ನೆಲೆಯಲ್ಲಿ ಝಗಮಗಿಸುತ್ತಿದ್ದವು. ಆದರೆ ಅಂಬೇಡ್ಕರ್ ಪ್ರತಿಮೆ ಹಾಗೂ ವೃತ್ತಕ್ಕೆ ಅಲಂಕಾರ ಮಾಡಿರದ ಕಾರಣ ಖಾಲಿ ಖಾಲಿಯಾಗಿ ಕಾಣುತ್ತಿತ್ತು. ಕಾರಣ ಅಂಬೇಡ್ಕರ್ ಫಾಲೋವರ್ಸ್ ನಡುವೆ ಶೀತಲ ಸಮರ. ಅಂಬೇಡ್ಕರ್ಗೂ ಹಾಗೂ ಹಿಂದೂ ಮಹಾಗಣಪತಿ ಏನು ಸಂಬಂಧ ಇದೆ ಎಂಬ ಪ್ರಶ್ನೆ ಅಂಬೇಡ್ಕರ್ ವಾದಿಗಳದ್ದು. ಹೀಗಾಗಿ ರಾಷ್ಟ್ರೀಯ ಮಹಾನಾಯಕನ ಪ್ರತಿಮೆ ಯಾವುದೇ ಅಲಂಕಾರ ಕಾರ್ಯ ನಡೆದಿಲ್ಲ.

ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ
ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೇತೃತ್ವದಲ್ಲಿ ನಡೆಯುತ್ತಿರುವ ಹಿಂದೂ ಮಹಾಗಣಪತಿ ವಿಸರ್ಜನೆಯ ಬೃಹತ್ ಶೋಭಾಯಾತ್ರೆ ನಗರದೆಲ್ಲೆಡೆ ವಿಜೃಂಭಣೆಯಿಂದ ನಡೆಯುವ ಹಿನ್ನೆಲೆಯಲ್ಲಿ ನಗರದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಡಿಡಿಪಿಐ ರವಿಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications