ಹಿರಿಯೂರು: ಕರ್ತವ್ಯ ಲೋಪ, ಇಬ್ಬರು ಗ್ರಾ.ಪಂ. ಪಿಡಿಓಗಳ ಅಮಾನತು-ಇವರು ಮಾಡಿದ ಘನಂದಾರಿ ಕೆಲ್ಸ ಏನು ಗೊತ್ತಾ?
ಹಿರಿಯೂರು, ಮಾರ್ಚ್, 04: ತಾಲ್ಲೂಕಿನ ಕರಿಯಾಲ ಹಾಗೂ ಯರಬಳ್ಳಿ ಗ್ರಾಮ ಪಂಚಾಯಿತಿ ಪಿಡಿಒಗಳು ಕರ್ತವ್ಯ ಲೋಪ ಎಸಗಿದ್ದರೆಂಬ ಆರೋಪದ ಮೇಲೆ ಇಬ್ಬರು ಗ್ರಾಮ ಪಂಚಾಯತಿ ಪಿಡಿಓಗಳನ್ನು ಅಮಾನತು ಮಾಡಿ, ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೊರಡಿಸಿದ್ದಾರೆ.
ಕರಿಯಾಲ ಗ್ರಾಮ ಪಂಚಾಯಿತಿ ಪಿಡಿಒ ಚಂದ್ರಕಲಾ ಹಾಗೂ ಯರಬಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಎಸ್.ಬಸವರಾಜ್ ಅಮಾನತುಗೊಂಡಿದ್ದಾರೆ.

ಯರಬಳ್ಳಿ ಗ್ರಾಮ ಪಂಚಾಯಿತಿಯ ಗೊಲ್ಲಹಳ್ಳಿ ಗ್ರಾಮದ ಸರ್ವೆ ನಂಬರ್ 58/1ರಲ್ಲಿ 2.15 ಗುಂಟೆಗೆ ಸ್ವತ್ತಿಗೆ ಸಂಬಂಧಿಸಿದಂತೆ ಜಾಗೃತಿ ಎಜುಕೇಶನ್ ಟ್ರಸ್ಟ್ ಗೊಲ್ಲಹಳ್ಳಿ ಚಂದ್ರಶೇಖರ್ ಬೆಳಗೆರೆ ಬಿನ್ ಹೆಚ್.ಶಂಕರಪ್ಪ ಇವರ ಹೆಸರಿಗೆ ನಿವೇಶನವನ್ನು ಯರಬಳ್ಳಿ ಗ್ರಾಮ ಪಂಚಾಯಿತಿ ಸಂ:151000302700200251, ಸದರಿ ಸ್ವತ್ತಿನ ಸಂಖ್ಯೆ 239ಅಂತ ಇದ್ದ ದಾಖಲೆಯನ್ನು ಪಿಡಿಓ ಎಸ್ ಬಸವರಾಜ್ ಇವರು 151000302700200251, ಸದರಿ ಸ್ವತ್ತಿನ ಸಂಖ್ಯೆ 230 ಗ್ರಾಮ ಪಂಚಾಯತಿ ನಿರ್ಣಯದ ಸಂಖ್ಯೆ-7 ದಿನಾಂಕ 15/4/2020 ಈ ಸ್ವತ್ತು ದಾಖಲೆಯನ್ನು ನೀಡಲಾಗಿದೆ.
ಸದರಿ ಈ ಸ್ವತ್ತು ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ಅಕ್ರಮ ಮತ್ತು ಕಾನೂನುಬಾಹಿರವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಸರ್ಕಾರಕ್ಕೆ ಮತ್ತು ಗ್ರಾಮ ಪಂಚಾಯಿತಿಗೆ ಆರ್ಥಿಕ ನಷ್ಟ ಉಂಟು ಮಾಡಿರುತ್ತಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಪಿಡಿಓ ಎಸ್.ಬಸವರಾಜು ಅವರನ್ನು ಅಮಾನತು ಮಾಡಲಾಗಿದೆ.
ಅಲ್ಲದೆ ಜವನಗೊಂಡನಹಳ್ಳಿ ಹೋಬಳಿಯ ಕರಿಯಾಲ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಚಂದ್ರಕಲಾ ಅವರು ಸಾರ್ವಜನಿಕರಿಗೆ ಮತ್ತು ಜನಪ್ರತಿನಿಧಿಗಳೊಂದಿಗೆ ಸೌಜನ್ಯವಾಗಿ ವರ್ತಿಸದೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತೀವ್ರ ನಿರ್ಲಕ್ಷ ವಹಿಸುತ್ತಿದ್ದು, ಗ್ರಾಮ ಪಂಚಾಯತಿ ಕರ್ತವ್ಯಕ್ಕೂ ಸರಿಯಾಗಿ ಹಾಜರಾಗದೆ ತೀವ್ರ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ.
2023- 24ನೇ ಸಾಲಿನ ಚಾಲ್ತಿ ವರ್ಷದ ಒಟ್ಟು ಕಂದಾಯ ಬೇಡಿಕೆ 9,31,801 ರೂಪಾಯಿಗಳಿದ್ದು, ಇದರಲ್ಲಿ ಕೇವಲ 1,51,901 ರೂಪಾಯಿಗಳು ಮಾತ್ರ ವಸೂಲಿ ಮಾಡಿ, ಶೇಕಡಾ 16.30ರಷ್ಟು ಮಾತ್ರ ಪ್ರಗತಿ ಸಾಧಿಸಿರುತ್ತಾರೆ. ಈ ಬಗ್ಗೆ ಸಾಕಷ್ಟು ಬಾರಿ ಈ ಕಚೇರಿಯಿಂದ ಪ್ರಗತಿ ಸಾಧಿಸಲು ಸೂಚಿಸಿದ್ದರೂ, ಪ್ರಗತಿ ಸಾಧಿಸದೆ ಮೇಲಾಧಿಕಾರಿಗಳ ಸೂಚನೆಯನ್ನು ಉಲ್ಲಂಘಿಸುತ್ತಾರೆ ಎಂಬ ಆರೋಪದ ಮೇಲೆ ಅಮಾನತು ಮಾಡಲಾಗಿದೆ.
-
ವೆಸ್ಟ್ ಇಂಡೀಸ್ ವಿರುದ್ಧ ಭಾರತ ಗೆಲುವು: ಎರಡು ಬೌಂಡರಿಗಳ ಬಗ್ಗೆ ಯಾರೂ ಮಾತನಾಡಲಿಲ್ಲ ಎಂದು ಬೂಮ್ರಾ ಬೇಸರ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
High Speed Rail: ಬೆಂಗಳೂರು-ಹೈದರಾಬಾದ್ ತಲುಪಲು 2 ಗಂಟೆ ಸಾಕು, 3 ಕಡೆ ಎಂಟ್ರಿ, ಮಹತ್ವದ ಅಪ್ಡೇಟ್ -
Sanju Samson: ವೆಸ್ಟ್ ಇಂಡೀಸ್ ವಿರುದ್ಧ ಅಬ್ಬರ: ತೆಗಳಿದ ಬಾಯಲ್ಲೇ ಸಂಜು ಸ್ಯಾಮ್ಸನ್ಗೆ ಗೌತಮ್ ಗಂಭೀರ್ ಶಹಭಾಸ್ಗಿರಿ -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
ಒಂದೇ ವರ್ಷದಲ್ಲಿ 800 ಕೋಟಿ ರೂ ಮೌಲ್ಯದ ಕಂಪನಿ ಕಟ್ಟಿದ 23ರ ಹರೆಯದ ಅಂಜಲಿ ಸರ್ದಾನಾ -
Lunar Eclipse 2026:ನಾಳೆ ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ದರ್ಶನದ ಸಮಯ ಬದಲು, ಗ್ರಹಣ ಶಾಂತಿ ಹೋಮ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
ಹೊಸ ಮನೆಯಲ್ಲಿ ರಶ್ಮಿಕಾ-ವಿಜಯ್ ಸತ್ಯನಾರಾಯಣ ಪೂಜೆ: ಹುಟ್ಟೂರಿಗೆ ಬಂದ ನವದಂಪತಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ












Click it and Unblock the Notifications