ಹಿರಿಯೂರು: ಕರ್ತವ್ಯ ಲೋಪ, ಇಬ್ಬರು ಗ್ರಾ.ಪಂ. ಪಿಡಿಓಗಳ ಅಮಾನತು-ಇವರು ಮಾಡಿದ ಘನಂದಾರಿ ಕೆಲ್ಸ ಏನು ಗೊತ್ತಾ?
ಹಿರಿಯೂರು, ಮಾರ್ಚ್, 04: ತಾಲ್ಲೂಕಿನ ಕರಿಯಾಲ ಹಾಗೂ ಯರಬಳ್ಳಿ ಗ್ರಾಮ ಪಂಚಾಯಿತಿ ಪಿಡಿಒಗಳು ಕರ್ತವ್ಯ ಲೋಪ ಎಸಗಿದ್ದರೆಂಬ ಆರೋಪದ ಮೇಲೆ ಇಬ್ಬರು ಗ್ರಾಮ ಪಂಚಾಯತಿ ಪಿಡಿಓಗಳನ್ನು ಅಮಾನತು ಮಾಡಿ, ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಹೊರಡಿಸಿದ್ದಾರೆ.
ಕರಿಯಾಲ ಗ್ರಾಮ ಪಂಚಾಯಿತಿ ಪಿಡಿಒ ಚಂದ್ರಕಲಾ ಹಾಗೂ ಯರಬಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಎಸ್.ಬಸವರಾಜ್ ಅಮಾನತುಗೊಂಡಿದ್ದಾರೆ.

ಯರಬಳ್ಳಿ ಗ್ರಾಮ ಪಂಚಾಯಿತಿಯ ಗೊಲ್ಲಹಳ್ಳಿ ಗ್ರಾಮದ ಸರ್ವೆ ನಂಬರ್ 58/1ರಲ್ಲಿ 2.15 ಗುಂಟೆಗೆ ಸ್ವತ್ತಿಗೆ ಸಂಬಂಧಿಸಿದಂತೆ ಜಾಗೃತಿ ಎಜುಕೇಶನ್ ಟ್ರಸ್ಟ್ ಗೊಲ್ಲಹಳ್ಳಿ ಚಂದ್ರಶೇಖರ್ ಬೆಳಗೆರೆ ಬಿನ್ ಹೆಚ್.ಶಂಕರಪ್ಪ ಇವರ ಹೆಸರಿಗೆ ನಿವೇಶನವನ್ನು ಯರಬಳ್ಳಿ ಗ್ರಾಮ ಪಂಚಾಯಿತಿ ಸಂ:151000302700200251, ಸದರಿ ಸ್ವತ್ತಿನ ಸಂಖ್ಯೆ 239ಅಂತ ಇದ್ದ ದಾಖಲೆಯನ್ನು ಪಿಡಿಓ ಎಸ್ ಬಸವರಾಜ್ ಇವರು 151000302700200251, ಸದರಿ ಸ್ವತ್ತಿನ ಸಂಖ್ಯೆ 230 ಗ್ರಾಮ ಪಂಚಾಯತಿ ನಿರ್ಣಯದ ಸಂಖ್ಯೆ-7 ದಿನಾಂಕ 15/4/2020 ಈ ಸ್ವತ್ತು ದಾಖಲೆಯನ್ನು ನೀಡಲಾಗಿದೆ.
ಸದರಿ ಈ ಸ್ವತ್ತು ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ಅಕ್ರಮ ಮತ್ತು ಕಾನೂನುಬಾಹಿರವಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಸರ್ಕಾರಕ್ಕೆ ಮತ್ತು ಗ್ರಾಮ ಪಂಚಾಯಿತಿಗೆ ಆರ್ಥಿಕ ನಷ್ಟ ಉಂಟು ಮಾಡಿರುತ್ತಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಪಿಡಿಓ ಎಸ್.ಬಸವರಾಜು ಅವರನ್ನು ಅಮಾನತು ಮಾಡಲಾಗಿದೆ.
ಅಲ್ಲದೆ ಜವನಗೊಂಡನಹಳ್ಳಿ ಹೋಬಳಿಯ ಕರಿಯಾಲ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಚಂದ್ರಕಲಾ ಅವರು ಸಾರ್ವಜನಿಕರಿಗೆ ಮತ್ತು ಜನಪ್ರತಿನಿಧಿಗಳೊಂದಿಗೆ ಸೌಜನ್ಯವಾಗಿ ವರ್ತಿಸದೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತೀವ್ರ ನಿರ್ಲಕ್ಷ ವಹಿಸುತ್ತಿದ್ದು, ಗ್ರಾಮ ಪಂಚಾಯತಿ ಕರ್ತವ್ಯಕ್ಕೂ ಸರಿಯಾಗಿ ಹಾಜರಾಗದೆ ತೀವ್ರ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ.
2023- 24ನೇ ಸಾಲಿನ ಚಾಲ್ತಿ ವರ್ಷದ ಒಟ್ಟು ಕಂದಾಯ ಬೇಡಿಕೆ 9,31,801 ರೂಪಾಯಿಗಳಿದ್ದು, ಇದರಲ್ಲಿ ಕೇವಲ 1,51,901 ರೂಪಾಯಿಗಳು ಮಾತ್ರ ವಸೂಲಿ ಮಾಡಿ, ಶೇಕಡಾ 16.30ರಷ್ಟು ಮಾತ್ರ ಪ್ರಗತಿ ಸಾಧಿಸಿರುತ್ತಾರೆ. ಈ ಬಗ್ಗೆ ಸಾಕಷ್ಟು ಬಾರಿ ಈ ಕಚೇರಿಯಿಂದ ಪ್ರಗತಿ ಸಾಧಿಸಲು ಸೂಚಿಸಿದ್ದರೂ, ಪ್ರಗತಿ ಸಾಧಿಸದೆ ಮೇಲಾಧಿಕಾರಿಗಳ ಸೂಚನೆಯನ್ನು ಉಲ್ಲಂಘಿಸುತ್ತಾರೆ ಎಂಬ ಆರೋಪದ ಮೇಲೆ ಅಮಾನತು ಮಾಡಲಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications