ಹಿರಿಯೂರು ಜೆಡಿಎಸ್ ಅಭ್ಯರ್ಥಿ ಅಂತಿಮ: ಎಚ್.ಡಿ ರೇವಣ್ಣ ಆಪ್ತನಿಗೆ ಟಿಕೆಟ್
ನಿವೃತ್ತ ಮುಖ್ಯ ಇಂಜಿನಿಯರ್ ರವೀಂದ್ರಪ್ಪ ಅವರಿಗೆ ಹಿರಿಯೂರು ಕ್ಷೇತ್ರದ JDS ಟಿಕೆಟ್ ಬಹುತೇಕ ಖಚಿತವಾಗಲಿದೆ ಎನ್ನಲಾಗುತ್ತಿದೆ. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ನಿವೃತ್ತ ಮುಖ್ಯ ಇಂಜಿನಿಯರ್ ರವೀಂದ್ರಪ್ಪ ಅವರು ಮಾಜಿ ಸಚಿವ HD ರೇವಣ್ಣನ ಪರಮ ಆಪ್ತರಾಗಿದ್ದಾರೆ.
ಚಿತ್ರದುರ್ಗ, ಮಾರ್ಚ್ 1: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿವಿಧ ರಾಜಕೀಯ ಪಕ್ಷಗಳಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ. ದುಡ್ಡು ಇದ್ದರೆ ಹೊರಗಿನವರು ಯಾರು ಬೇಕಾದರೂ ಬಂದು ಸ್ಪರ್ಧಿಸಿ ಹಿರಿಯೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಬಹುದು ಎಂಬ ಹಣೆ ಪಟ್ಟಿಯನ್ನು ಹಿರಿಯೂರು ಕ್ಷೇತ್ರ ಕಟ್ಟಿಕೊಂಡಿದೆ.
ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡಿವೆ. ಜೆಡಿಎಸ್ನಲ್ಲಿ ಆಕಾಂಕ್ಷಿಗಳ ಪಟ್ಟಿ ಹೆಚ್ಚು ಇದ್ದರಿಂದ ಟಿಕೆಟ್ ಘೋಷಣೆಯಾಗಿರಲಿಲ್ಲ. ಇದೀಗ ನಿವೃತ್ತ ಮುಖ್ಯ ಇಂಜಿನಿಯರ್ ರವೀಂದ್ರಪ್ಪ ಅವರಿಗೆ ಹಿರಿಯೂರು ಕ್ಷೇತ್ರದ ಜೆಡಿಎಸ್ ಟಿಕೆಟ್ ಬಹುತೇಕ ಖಚಿತವಾಗಲಿದೆ ಎನ್ನಲಾಗುತ್ತಿದೆ. ಟಿಕೆಟ್ ಖಚಿತದ ಬಗ್ಗೆ ಸ್ಥಳೀಯ ಪ್ರಮುಖ ಮುಖಂಡರಿಂದ ಮಾಹಿತಿ ಹೊರಬಿದ್ದಿದೆ.

ಈ ಹಿಂದೆ ನಿರ್ಮಿತಿ ಕೇಂದ್ರದ ಅಧಿಕಾರಿ ಮೂಡಲಗಿರಿಯಪ್ಪ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಪಿಲಾಜಿನಲ್ಲಿ ಜಯಣ್ಣ, ಹಾಗೂ ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷರಾಗಿದ್ದ ಶಿವಪ್ರಸಾದ್ ಗೌಡ ಇವರು ಆಕಾಂಕ್ಷಿಗಳಾಗಿದ್ದರು. ಆದರೆ ಪಕ್ಷದ ವರಿಷ್ಠರು ಆಕಾಂಕ್ಷಿಗಳ ಜೊತೆ ಸಭೆ ನಡೆಸಿದ ಬಳಿಕ ಅಂತಿಮವಾಗಿ ರವೀಂದ್ರಪ್ಪ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ನಿಶ್ಚಿತವಾಗಿದೆ. ಶೀಘ್ರದಲ್ಲೇ ಪಕ್ಷದ ವರಿಷ್ಠರು ಹಿರಿಯೂರು ಕ್ಷೇತ್ರಕ್ಕೆ ಟಿಕೆಟ್ನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎನ್ನಬಹುದು.
ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ನಿವೃತ್ತ ಮುಖ್ಯ ಇಂಜಿನಿಯರ್ ರವೀಂದ್ರಪ್ಪ ಅವರು ಮಾಜಿ ಸಚಿವ ಎಚ್.ಡಿ. ರೇವಣ್ಣನ ಪರಮ ಆಪ್ತರಾಗಿದ್ದಾರೆ. ಮಾಜಿ ಸಚಿವ ರೇವಣ್ಣನ ಭರವಸೆಯೊಂದಿಗೆ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡಿದ್ದರು. ಟಿಕೆಟ್ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸಬೇಕಾಗಿತ್ತು. ಇದೀಗ ಟಿಕೆಟ್ ಸಿಗುವ ಸಾಧ್ಯತೆ ದಟ್ಟವಾಗಿದೆ.

ಈಗಾಗಲೇ ರವೀಂದ್ರಪ್ಪ ತಾಲೂಕಿನ ಉತ್ತಮ ಒಡನಾಟ ಹೊಂದಿದ್ದು, ಕ್ಷೇತ್ರದ ಮತದಾರರಿಗೆ ಚಿರಪರಿಚಿತರಾಗಿದ್ದಾರೆ. ಕ್ಷೇತ್ರದ ಎಲ್ಲಾ ಹಳ್ಳಿ, ಹಳ್ಳಿಗಳಲ್ಲೂ ರವೀಂದ್ರಪ್ಪ ಅವರ ಪ್ಲೆಕ್ಸ್, ಬ್ಯಾನರ್ ಕಟ್ಟಲಾಗಿದೆ. ಉಳಿದಂತೆ ಒಂದು ಸುತ್ತಿನ ಪ್ರಚಾರ ಕಾರ್ಯ ಮುಗಿಸಿ, ಮದುವೆ, ನಾಮಕರಣ, ದೇವರ ಉತ್ಸವ, ಜಾತ್ರೆ, ಇತರೇ ಸ್ಥಳೀಯ ಕಾರ್ಯಕ್ರಮಗಳಲೂ ಭಾಗವಹಿಸುತ್ತಿದ್ದಾರೆ. ಜೊತೆಗೆ ಸ್ಥಳೀಯ ನಾಯಕರನ್ನು ಭೇಟಿ ಮಾಡಿ ಬೆಂಬಲ ಸೂಚಿಸುವಂತೆಯೂ ಕೋರುತಿದ್ದಾರೆ. ಪಕ್ಷದಿಂದ ಅಧಿಕೃತವಾಗಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.
ಜೆಡಿಎಸ್ಗೆ ಸಾಂಪ್ರದಾಯಿಕ ಮತುಗಳು
ಈ ಕ್ಷೇತ್ರ ಜೆಡಿಎಸ್ ಮತ್ತು ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಜೆಡಿಎಸ್ ಪಕ್ಷಕ್ಕೆ ತನ್ನದೇ ಆದ ಸಾಂಪ್ರದಾಯಿಕ ಮತಗಳಿವೆ. ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿ ಸುಮಾರು 42 ಸಾವಿರ ಮತಗಳನ್ನು ಪಡೆದಿದ್ದರು. ಜೆಡಿಎಸ್ ಪಕ್ಷಕ್ಕೆ ಒಕ್ಕಲಿಗರ ಹೆಚ್ಚು ಮತಗಳಿವೆ. ಉಳಿದ ವಿವಿಧ ಸಮುದಾಯಗಳ ಮತಗಳು ಕೂಡ ಜೆಡಿಎಸ್ ಪಕ್ಷದ ಪರವಾಗಿ ಇದಾವೆ. ಇಷ್ಟೆಲ್ಲಾ ಇದ್ದರೂ ಟಿಕೆಟ್ ಮಾತ್ರ ಘೋಷಣೆಯಾಗಿಲ್ಲ. ಧರ್ಮಪುರ ಹೋಬಳಿಯಲ್ಲಿ ಜೆಡಿಎಸ್ ಪಕ್ಷಕ್ಕೆ ಹೆಚ್ಚು ಮತಗಳಿವೆ. ಕಸಬಾ, ಜವನಗೊಂಡನಹಳ್ಳಿ ಹೋಬಳಿಯಲ್ಲೂ ಜೆಡಿಎಸ್ ಪರವಾಗಿ ಮತದಾರರು ಇದ್ದಾರೆ. ಇನ್ನಾದರೂ ತುರ್ತಾಗಿ ಟಿಕೆಟ್ ಘೋಷಿಸಿದರೆ, ಈ ಬಾರಿ ಕ್ಷೇತ್ರದಲ್ಲಿ ತೆನೆ ಹೊತ್ತ ಮಹಿಳೆ ಆಡಳಿತ ನಡೆಸಲು ಅವಕಾಶವಿದೆ ಎನ್ನುವ ಭರವಸೆಯನ್ನು ಜೆಡಿಎಸ್ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ.
ಇನ್ನು ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಡಿ ಸುಧಾಕರ್ ಭರ್ಜರಿ ಪ್ರಚಾರ ಆರಂಭಿಸಿದ್ದು, ಮನೆ ಮನೆಗೆ ತೆರಳಿ ಮತದಾರನಿಗೆ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ. ಉಳಿದಂತೆ ಬಿಜೆಪಿಯ ಹಾಲಿ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಬಿಜೆಪಿ ಟಿಕೆಟ್ ಬಹುತೇಕ ಖಚಿತವಾಗಿದ್ದು ಅವರು ಕೂಡ ಮರು ಆಯ್ಕೆ ಬಯಸಿ ಪ್ರಚಾರ ಆರಂಭಿಸಿದ್ದಾರೆ.
ಒಟ್ಟಾರೆಯಾಗಿ ಹಿರಿಯೂರು ವಿಧಾನಸಭಾ ಕ್ಷೇತ್ರ ತ್ರಿಕೋನ ಸ್ಪರ್ಧೆಯಿಂದ ಏರ್ಪಟ್ಟಿದ್ದು, ಇದರ ಜೊತೆಗೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಹಾಗೂ ಎಎಪಿ ಅಭ್ಯರ್ಥಿಗಳು ಪೈಪೋಟಿ ನೀಡಲಿದ್ದಾರೆ. ಈ ಬಾರಿ ಮತದಾರರು ಸ್ಥಳೀಯ ಅಭ್ಯರ್ಥಿಗೆ ಅವಕಾಶ ನೀಡಲಿದ್ದಾರೆಯೇ ಅಥವಾ ಹೊರಗಿನ ಅಭ್ಯರ್ಥಿಗಳಿಗೆ ಜೈ ಎನ್ನುತ್ತಾರಾ ಕಾದು ನೋಡಬೇಕಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications