ಹಿರಿಯೂರು ನಗರಸಭೆ ಅಧಿಕಾರಿಗಳಿಂದ ಅಕ್ರಮ ಮನೆಗಳ ತೆರವು
ಚಿತ್ರದುರ್ಗ, ಜುಲೈ 10: ನಗರಸಭೆಯ ವಾಣಿಜ್ಯ ಮಳಿಗೆಗಳ ಸ್ಥಳದಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದ ಗುಡಿಸಲುಗಳನ್ನು ಹಿರಿಯೂರು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದರು.
ನಗರದ ಹುಳಿಯಾರು ರಸ್ತೆಯ ಹರಿಶ್ಚಂದ್ರ ಘಾಟ್ ನಲ್ಲಿ ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ನಿನ್ನೆ ನಡೆಯಿತು. ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದ ಅಲ್ಲಿನ ಏಳು ಕುಟುಂಬಗಳು ಬೀದಿಗೆ ಬಂದಿದ್ದು, ಇದೀಗ ಅಲ್ಲಿಯೇ ಟೆಂಟ್ ಹಾಕಿಕೊಂಡು ಬೀದಿಯಲ್ಲಿ ಅಡುಗೆ ಮಾಡಿಕೊಂಡಿದ್ದಾರೆ.

ಮೂರು ದಶಕಗಳಿಂದ ಈ ಕುಟುಂಬಗಳು ಇಲ್ಲಿ ವಾಸ ಮಾಡುತ್ತಿದ್ದವು. ಹಿರಿಯೂರು ನಗರಸಭೆ ಅಧಿಕಾರಿಗಳು ಏಕಾಏಕಿ ಅಕ್ರಮ ಮನೆಗಳನ್ನು ಕೆಡವಿ ಹಾಕಿದ್ದು, ನಮಗೆ ಪರ್ಯಾಯ ವ್ಯವಸ್ಥೆಯನ್ನೂ ಮಾಡದೆ ಮನೆ ಕೆಡವಿದ್ದಾರೆ ಎಂದು ಸಂತ್ರಸ್ಥರು ಅಳಲು ತೋಡಿಕೊಂಡಿದ್ದಾರೆ.












Click it and Unblock the Notifications