ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಿರಿಯೂರು; ಈ ಬಡ ಕುಟುಂಬಕ್ಕೆ ಬೇಕಿದೆ ನೆರವಿನ ಹಸ್ತ

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಮೇ 26; ಮನೆಯಲ್ಲಿ ಕಿತ್ತು ತಿನ್ನುವ ಬಡತನ. ವಾಸಕ್ಕೆ ಯೋಗ್ಯವಾದ ಮನೆ ಇಲ್ಲ. ರೇಷನ್ ಕಾರ್ಡ್ ಸಿಕ್ಕಿಲ್ಲ. ಕ್ಯಾನ್ಸರ್ ಹಾಗೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಪತಿಯನ್ನು ಕಳೆದುಕೊಂಡು ಪತ್ನಿ ಮತ್ತು ಮಕ್ಕಳು ದಿಕ್ಕು ತೋಚದಂತಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ 30ನೇ ವಾರ್ಡ್‌ನ ಹರಿಶ್ಚಂದ್ರ ಘಾಟ್‌ನಲ್ಲಿ ವಾಸಿಸುವ ಬಡ ಕುಟುಂಬದ ನೋವಿನ ಕಥೆ ಇದು. ಹಿರಿಯೂರು ನಗರದ ಜಾಹಿದ್ ಮತ್ತು ಚಳ್ಳಕೆರೆಯ ರಾಜು 10 ವರ್ಷಗಳ ಹಿಂದೆ ವಿವಾಹವಾಗಿದ್ದರು.

ಹಿರಿಯೂರು; ಸರ್ಕಾರಿ ಆಸ್ಪತ್ರೆ ಕೋವಿಡ್ ಸೆಂಟರ್ ಆಗಿ ಪರಿವರ್ತನೆ ಹಿರಿಯೂರು; ಸರ್ಕಾರಿ ಆಸ್ಪತ್ರೆ ಕೋವಿಡ್ ಸೆಂಟರ್ ಆಗಿ ಪರಿವರ್ತನೆ

ಈ ದಂಪತಿಗೆ 4 ವರ್ಷದ ಒಂದು ಗಂಡು, 8 ಮತ್ತು 6 ವರ್ಷದ ಎರಡು ಹೆಣ್ಣು ಮಕ್ಕಳಿದ್ದಾರೆ. ಕಿತ್ತು ತಿನ್ನುವ ಬಡತನದಲ್ಲೇ ಕುಟುಂಬ ಜೀವನ ನಿರ್ವಹಣೆ ಮಾಡುತ್ತಿತ್ತು. ಕುಟುಂಬಕ್ಕೆ ಆಧಾರವಾಗಿದ್ದ ರಾಜು ಕ್ಯಾನ್ಸರ್ ಮತ್ತು ಕಿಡ್ನಿ ವೈಫಲ್ಯಕ್ಕೆ ತುತ್ತಾಗಿ ಹಾಸಿಗೆ ಹಿಡಿದರು.

ಹಿರಿಯೂರು; ತಂದೆಯ ಶವಕ್ಕೆ ಹೆಗಲು ಕೊಟ್ಟ ಮಗಳು ಹಿರಿಯೂರು; ತಂದೆಯ ಶವಕ್ಕೆ ಹೆಗಲು ಕೊಟ್ಟ ಮಗಳು

Hiriyur Poor Family In Trouble Need Help

ಪತಿಯನ್ನು ಉಳಿಸಿಕೊಳ್ಳಲು ಜಾಹಿದ್ ಪಣತೊಟ್ಟು ಒಂದಿಷ್ಟು ಸಾಲ ಮಾಡಿ, ಮನೆಯಲ್ಲಿದ್ದ ವಸ್ತುಗಳನ್ನು ಮಾರಾಟ ಮಾಡಿ ಚಿಕಿತ್ಸೆ ಕೊಡಿಸಿದ್ದರು. ರಾಜು ಐದು ದಿನಗಳ ಹಿಂದೆ ಮೃತಪಟ್ಟಿದ್ದು, ಕುಟುಂಬ ದಿಕ್ಕು ತೋಚದಂತಾಗಿದೆ.

ಹಿರಿಯೂರು ತೇರುಮಲ್ಲೇಶ್ವರ ದೇವಾಲಯದ ಇತಿಹಾಸ ಹಿರಿಯೂರು ತೇರುಮಲ್ಲೇಶ್ವರ ದೇವಾಲಯದ ಇತಿಹಾಸ

ತಂದೆಯ ಶವದ ಪಕ್ಕದಲ್ಲಿ ನಿಂತು ನೋಡುತ್ತಿರುವ ಏನು ಅರಿಯಾದ ಪುಟಾಣಿ ಮಕ್ಕಳನ್ನು ನೋಡಿದರೆ ಜನರು ಸಹ ಮುರುಕ ಪಟ್ಟರು. ಇವರ ಕುಟುಂಬಕ್ಕೆ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಇಲ್ಲ. ವಾಸಿಸಲು ಸ್ವಂತವಾದ ಮನೆಯಿಲ್ಲ.

ಕೋವಿಡ್ ಸಂದರ್ಭದಲ್ಲಿ ತುತ್ತು ಅನ್ನಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸ್ಥಿತಿಯಲ್ಲಿರುವ ಬಡ ಕುಟುಂಬ ಸಹಾಯದ ನಿರೀಕ್ಷೆಯಲ್ಲಿದೆ. ಸರ್ಕಾರದಿಂದ ಸೂಕ್ತ ಸಹಕಾರ ಸಿಗುವುದೇ ಕಾದು ನೋಡಬೇಕಿದೆ.

Recommended Video

B S Yediyurappa ನವರನ್ನು ಸದ್ಯದಲ್ಲೇ ಕುರ್ಚಿಯಿಂದ ಇಳಿಸಿದ್ದಾರಾ | Oneindia Kannada

ಸಹಾಯ ಮಾಡಲು ದಾನಿಗಳು ಮುಂದೆ ಬಂದರೆ ಕುಟುಂಬಕ್ಕೆ ನೆರವಾಗಲಿದೆ. ಕೋವಿಡ್ ಸಂದರ್ಭದಲ್ಲಿ ಆಹಾರದ ಕಿಟ್ ವಿತರಣೆ ಮಾಡುವವರು ಇವರಿಗೆ ಸಹಾಯ ಮಾಡಲಿದ್ದಾರೆಯೇ ಕಾದು ನೋಡಬೇಕು. ಸ್ಥಳೀಯ ಆಡಳಿತ ಕುಟುಂಬಕ್ಕೆ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮಾಡಿಸಿ ಕೊಡಲು ನೆರವಾಗಬೇಕಿದೆ.

English summary
Chitradurga district Hiriyur town ward number 30 resident Jahizada family in trouble after she lost her husband due to kidney failure. Officials to help family to get ration and adhaar card.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X