ಅಂಜನಾದ್ರಿಯಿಂದ ರಾಮ ಜನ್ಮಭೂಮಿಗೆ ಹಿರಿಯೂರು ಯುವಕನ ಸೈಕಲ್ ಜಾಥಾ
ಚಿತ್ರದುರ್ಗ, ಏಪ್ರಿಲ್ 12: ರಾಜ್ಯ ಹಾಗೂ ದೇಶದಲ್ಲಿ ಕೊರೊನಾ ಸೋಂಕು ಅಬ್ಬರಿಸಿ ಬೊಬ್ಬಿರಿಯುತ್ತಿರುವ ಈ ಸಮಯದಲ್ಲಿ ಇಲ್ಲೊಬ್ಬ ಯುವಕ ಕೊರೊನಾ ಮುಕ್ತ ಸಮಾಜ ಮಾಡಲು ಆಂಜನೇಯನ ಜನ್ಮ ಭೂಮಿಯಿಂದ ರಾಮ ಜನ್ಮಭೂಮಿಯವರೆಗೂ ಸೈಕಲ್ ಮೂಲಕ ಜಾಥಾ ಹೊರಟಿದ್ದಾನೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಸಾಹಸಿಗರಿಗೇನು ಕೊರತೆಯಿಲ್ಲ. ಒಂದಲ್ಲ ಒಂದು ಸಾಹಸಕ್ಕೆ ಇಲ್ಲಿನ ಯುವಕರು ಕೈ ಹಾಕುತ್ತಲೇ ಇರುತ್ತಾರೆ. ಹಾಗೆಯೇ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮದ ಕರಿಯಪ್ಪ ಎಂಬ ಯುವಕ ಅಯೋಧ್ಯೆಯವರೆಗೂ ಸೈಕಲ್ ಜಾಥಾ ಹೋಗಲಿದ್ದಾನೆ.
ಕೊರೊನಾ ಮುಕ್ತ ಸಮಾಜ ನಿರ್ಮಾಣ, ದೇಶವನ್ನು ಪ್ರಾಮಾಣಿಕತೆಗೆ ಕೊಂಡ್ಯೂಬೇಕು, ಉತ್ತಮ ಆಹಾರ ಪದ್ದತಿ ಅನುಸರಿಸಬೇಕು, ಯುವಕರ ಭಕ್ತಿಯೇ ರಾಮ ಶಕ್ತಿ ಹಾಗೂ ಜೀವ ಜಲ ಉಳಿವಿಗಾಗಿ ಹೋರಾಟ ಇಂತಹ ಉತ್ತಮ ಅಂಶಗಳನ್ನು ಮುಂದಿಟ್ಟುಕೊಂಡು ಕೊಪ್ಪಳ ಜಿಲ್ಲೆಯ "ಆಂಜನಾದ್ರಿ ಬೆಟ್ಟದಿಂದ ಶ್ರೀರಾಮ ಜನ್ಮಭೂಮಿವರೆಗೆ' ಸುಮಾರು 25ರಿಂದ 30 ದಿನಗಳ ಸೈಕಲ್ ಜಾಥವನ್ನು ಕೈಗೊಂಡಿದ್ದಾನೆ.

ಇದಕ್ಕೆ ತಗಲುವ ಒಟ್ಟು 25ರಿಂದ 30 ಸಾವಿರ ಹಣದ ಖರ್ಚು ವೆಚ್ಚವನ್ನು ಸ್ನೇಹಿತರು ಹಾಗೂ ದಾನಿಗಳು ನೀಡಿದರೆ ಅವರಿಂದ ತೆಗೆದುಕೊಳ್ಳುವುದು ಹಾಗೂ ತನ್ನ ಸ್ವಂತ ಖರ್ಚಿನಿಂದಲೂ ಕರ್ನಾಟಕ, ಆಂದ್ರ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮೂಲಕ ಉತ್ತರಪ್ರದೇಶ ತಲುಪಿ ರಾಮ ಜನ್ಮಭೂಮಿ ಅಯೋಧ್ಯೆ ಪ್ರವೇಶ ಮಾಡಲಿದ್ದಾನೆ.

ಒಟ್ಟು 2000 ಕಿಲೋಮೀಟರ್ ಸೈಕಲ್ ಜಾಥಾದ ಯುವಕನ ಸಾಧನೆಗೆ ರೈತ ಮುಖಂಡ ಕಸವನಹಳ್ಳಿ ರಮೇಶ್ ಚಾಲನೆ ನೀಡಿದರು. ಹುಟ್ಟಿದೂರಿನಿಂದ ಆರಂಭಗೊಂಡಿರುವ ಸೈಕಲ್ ಜಾಥಾ ಹಿರಿಯೂರು ನಗರದ ಶ್ರೀ ತೇರುಮಲ್ಲೇಶ್ವರ ದೇವಸ್ಥಾನ ಹಾಗೂ ರಾಮ ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆಯಲಿದ್ದಾನೆ.

ಸೋಮವಾರ ರಾತ್ರಿ ಚಿತ್ರದುರ್ಗದಲ್ಲಿ ವಾಸ್ತವ್ಯ ಮಾಡಿ, ನಂತರ ನಾಳೆ ಮಧ್ಯಾಹ್ನ ಮೂರು ಗಂಟೆಗೆ ಜಾಥಾ ಮುಂದುವರೆಸಲಿದ್ದಾರೆ. ಮಾರ್ಗ ಮಧ್ಯೆ ಸಿಗುವ ದೇವಸ್ಥಾನ ಅಥವಾ ಆಶ್ರಮಗಳಲ್ಲಿ ವಾಸ್ತವ್ಯ ತಂಗಿ, ಮುಂದೆ ಪ್ರಯಾಣ ನಡೆಸಲಿದ್ದಾನೆ. ಸೈಕಲ್ ಜಾಥಾ ಯಶಸ್ವಿಯಾಗಿ, ಸುರಕ್ಷಿತವಾಗಿ ಬರುವಂತೆ ಕರಿಯಣ್ಣನ ಸ್ನೇಹಿತರು ಶುಭ ಹಾರೈಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications