ಚಿತ್ರದುರ್ಗದಲ್ಲಿ ಆರ್ಭಟಿಸಿದ ಹುಬ್ಬೆ ಮಳೆ; ಹಳ್ಳಕೊಳ್ಳಗಳೆಲ್ಲಾ ಭರ್ತಿ
ಚಿತ್ರದುರ್ಗ, ಸೆಪ್ಟೆಂಬರ್ 10: ಕೋಟೆ ನಾಡು ಚಿತ್ರದುರ್ಗದಲ್ಲಿ ಹುಬ್ಬೆ ಮಳೆ ಆರ್ಭಟಕ್ಕೆ ಹಳ್ಳ ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಮಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಗತನಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಿನ್ನೆ ರಾತ್ರಿ ಸುರಿದ ಮಳೆಗೆ ಜಿಲ್ಲೆಯಲ್ಲಿ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ರಭಸವಾಗಿ ಹರಿಯುತ್ತಿರುವ ಹಳ್ಳದಲ್ಲಿ ಚಾಲಕ ಟ್ರ್ಯಾಕ್ಟರ್ ಚಲಾಯಿಸಿದ್ದು, ಟ್ರ್ಯಾಕ್ಟರ್ ಕೊಚ್ಚಿ ಹೋಗಿದೆ. ಅದರಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರ್ಯಾಕ್ಟರ್ ಹೊರ ತೆಗೆಯಲು ಗ್ರಾಮಸ್ಥರು ಮುಂದಾಗಿದ್ದಾರೆ.

ಹರಿಯುತ್ತಿರುವ ವೇದಾವತಿ ನದಿ
ಚಿಕ್ಕಮಗಳೂರು ಜಿಲ್ಲೆಯ ಸುತ್ತಮುತ್ತ ಗುಡುಗು, ಮಿಂಚು, ಸಿಡಿಲು ಸಹಿತ ಮಳೆರಾಯ ಅಬ್ಬರಿಸಿದ್ದರಿಂದ ವೇದಾವತಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ವಿವಿ ಸಾಗರಕ್ಕೆ ಹೆಚ್ಚಿನ ನೀರು ಹರಿದು ಬರುವ ಸಾಧ್ಯತೆ ಇದೆ. ಈಗಾಗಲೇ ಹೊಸದುರ್ಗ ತಾಲ್ಲೂಕಿನ ಕೆಲ್ಲೋಡ್ ಚೆಕ್ ಡ್ಯಾಂ ತುಂಬಿ ಹರಿಯುತ್ತಿದ್ದು ಮುಂದೆ ಕಾರೇಹಳ್ಳಿ ಬ್ರಿಡ್ಜ್ ಕಡೆ ನೀರು ಹರಿಯುತ್ತಿದೆ. ಹೊಸದುರ್ಗ ತಾಲ್ಲೂಕಿನಲ್ಲಿ ಸಹ ಉತ್ತಮ ಮಳೆಯಾಗಿದ್ದು ಇಲ್ಲಿನ ಹಳ್ಳ ಕೊಳ್ಳ ಮೈದುಂಬಿ ಹರಿಯುತ್ತಿವೆ.

ಗೋಡೆ ಕುಸಿದು ಬಾಲಕಿ ಸಾವು
ನಿನ್ನೆ ರಾತ್ರಿ ಸುರಿದ ಮಳೆಗೆ ಪರುಶುರಾಂಪುರ ಹೋಬಳಿಯ ಜಾಜೂರು ಗ್ರಾಮದ ಶ್ರೀಜನ್ಯ (6) ಸ್ಥಳದಲ್ಲೇ ಸಾವನ್ನಪ್ಪಿದ್ದಳು. ಮನೆ ತುಂಬಾ ಹಳೆಯದಾಗಿದ್ದರಿಂದ ಮನೆ ಕುಸಿದು ಈ ಘಟನೆ ನಡೆದಿತ್ತು. ಬಾಲಕಿ ತಂದೆ, ಅಜ್ಜಿ, ಅಣ್ಣನಿಗೆ ಗಾಯಗಳಾಗಿದ್ದವು. ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ಶಾಸಕ ಟಿ. ರಘುಮೂರ್ತಿ ಮೃತಪಟ್ಟ ಬಾಲಕಿ ಕುಟುಂಬಕ್ಕೆ ಜಿಲ್ಲಾಡಳಿತದಿಂದ 5 ಲಕ್ಷದ ಚೆಕ್ ಪರಿಹಾರ ನೀಡಿ ಸಾಂತ್ವನ ಹೇಳಿದರು.

ಜಿಲ್ಲೆಯಲ್ಲಿ ಸರಾಸರಿ 52 ಮಿ.ಮಿ. ಮಳೆ
ಜಿಲ್ಲೆಯ ಹಿರಿಯೂರಿನಲ್ಲಿ 21.02 ಮಿ.ಮೀ, ಹೊಳಲ್ಕೆರೆ 23.4 ಮಿ.ಮೀ, ಮೊಳಕಾಲ್ಮೂರು 10.6 ಮಿ.ಮೀ, ಚಳ್ಳಕೆರೆ 3.4 ಮಿ.ಮೀ ಮಳೆಯಾಗಿದೆ. ನಿನ್ನೆ ಜಿಲ್ಲೆಯಲ್ಲಿ ಸರಾಸರಿ 52 ಮಿ.ಮಿ. ಮಳೆಯಾಗಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 34.75 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ.
Recommended Video

7.40 ಲಕ್ಷ ರೂ ಕೃಷಿ ಬೆಳೆ ನಷ್ಟ
ಮಳೆಯಿಂದಾಗಿ ಕೃಷಿ ಬೆಳೆಗೆ 17.40 ಲಕ್ಷ ರೂ ನಷ್ಟವಾಗಿದೆ. ಮನೆಗಳ ಕುಸಿತದಿಂದ 12.40 ಲಕ್ಷ ರೂ ನಷ್ಟ ಉಂಟಾಗಿದೆ. ಜಿಲ್ಲೆಯ ಹಲವು ಕಡೆ ಈರುಳ್ಳಿ, ಮೆಕ್ಕೆಜೊಳ, ರಾಗಿ, ಶೇಂಗಾ ಮತ್ತಿತರ ಬೆಳೆಗಳು ಮಳೆಗೆ ಕೊಚ್ಚಿ ಹೋಗಿವೆ. ಹಲವಾರು ರೈತರ ಜಮೀನುಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications