ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲವೆಂದ ಡಿ.ಕೆ ಶಿವಕುಮಾರ್

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ನವೆಂಬರ್ 22: ಸಿಬಿಐ ಸಮನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಖುದ್ದು ಹಾಜರಾಗುವಂತೆ ಸಿಬಿಐ ನೋಟಿಸ್ ನೀಡಿದೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಸಿಬಿಐ ಸಮನ್ಸ್ ವಿಚಾರಕ್ಕೆ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದರು.

 ಸ್ವಪಕ್ಷದ ತೀರ್ಮಾನಕ್ಕೆ ಹಿರಿಯ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಸಮಾಧಾನ ಸ್ವಪಕ್ಷದ ತೀರ್ಮಾನಕ್ಕೆ ಹಿರಿಯ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅಸಮಾಧಾನ

ನಾನು ಮಂತ್ರಿಯಾಗಿದ್ದ ಸಂದರ್ಭದಲ್ಲಿ, ಕಳೆದ 30 ವರ್ಷ ರಾಜಕಾರಣದಲ್ಲಿ, ನನ್ನ ಮೇಲೆ ಯಾವುದೇ ಆರೋಪ ಇಲ್ಲ. ಕಮಿಷನ್ ತನಿಖೆ ಯಾವುದೂ ಇಲ್ಲ. ಮಾಡಿರುವ ತನಿಖೆಗಳೆಲ್ಲವೂ ಕೂಡಾ ಕ್ಲೋಸ್ ಆಗಿವೆ ಎಂದರು.

 Chitradurga: I Am Not Involved In Any Corruption: DK Shivakumar

ಆದಾಯಕ್ಕಿಂತ ಆಸ್ತಿ ಜಾಸ್ತಿಯಾಗಿದೆ ಎಂದು ಕರ್ನಾಟಕದಲ್ಲಿ ಒಂದೇ ಒಂದು ಕೇಸ್ ಸಿಬಿಐಗೆ ನೀಡಿದ್ದಾರೆ. ದಾಳಿ ಮಾಡಿದ್ದರು, ಈಗ ಸಮನ್ಸ್ ನೀಡಿದ್ದಾರೆ. ಕಾನೂನಿಗೆ ಗೌರವ ನೀಡಿ ಉತ್ತರ ನೀಡುತ್ತೇನೆ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಡಿ.ಕೆ ಶಿವಕುಮಾರ್, ಹೆಗಲ ಮೇಲಿನ ಶಾಲು ತೋರಿಸಿ ಇದು ಬಾವುಟ. ಕಾಂಗ್ರೆಸ್ ನವರಿಗೆ ಮಾತ್ರ ಇದು ಇರುವುದು, ಬೇರೆ ಯಾರಿಗೂ ಇಲ್ಲ ಇದೊಂದೆ ಉತ್ತರ ಎಂದು ಸಂಸದ ಪ್ರಹ್ಲಾದ್ ಜೋಶಿಗೆ ತಿರುಗೇಟು ನೀಡಿದರು.

 Chitradurga: I Am Not Involved In Any Corruption: DK Shivakumar

Recommended Video

Covid Vaccine ಹಂಚುವಿಕೆ ಬಗ್ಗೆ ಮುಖ್ಯಮಂತ್ರಿಗಳ ಸಭೆ ಕರೆದ Modi | Oneindia Kannada

ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಟಿಕೆಟ್ ಗಾಗಿ ಫೈಟ್ ವಿಚಾರ ಮಾತನಾಡಿದ ಅವರು, ಇದು ನನಗೆ ಗೊತ್ತಿಲ್ಲ, ಮುಂದೆ ನೋಡೋಣ ಎಂದು ಹೇಳಿ ಡಿ.ಕೆ ಶಿವಕುಮಾರ್ ಜಾರಿಕೊಂಡರು.

English summary
DK Shivakumar responded to the CBI summons with reporters in Chitradurga and said that I am not involved in any corruption.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X