ಹನಿಟ್ರ್ಯಾಪ್ ಬಗ್ಗೆ ಗೊತ್ತಿಲ್ಲ, ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಗೂಳಿಹಟ್ಟಿ ಶೇಖರ್
ಚಿತ್ರದುರ್ಗ, ಡಿಸೆಂಬರ್ 17: 2008 ರಲ್ಲಿ ಬಿಜೆಪಿ ಸರ್ಕಾರ ಬರಲು ನಾನೇ ಕಾರಣ ಆಗಿದ್ದೆನು, ಪಕ್ಷೇತರ ಶಾಸಕನಾಗಿದ್ದ ನಾನೇ ಮೊದಲ ವಿಕೆಟ್ ಆಗಿದ್ದೆ, ಆಗ ಸಿಎಂ ಲೆಫ್ಟ್, ರೈಟ್ ಇದ್ದವರು ಯಾರೂ ರಾಜೀನಾಮೆ ಕೊಟ್ಟು ಬಂದಿರಲಿಲ್ಲ ಎಂದು ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ ಗೂಳಿಹಟ್ಟಿ ಶೇಖರ್, 2008ರ ಸರ್ಕಾರ ಬರಲು ನಾನೇ ಕಾರಣ ಎಂದು ಎದೆತಟ್ಟಿ ಹೇಳುತ್ತೇನೆ, ನಾನು ಸಹ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ಆಗಿದ್ದೇನೆ ಎಂದು ಹೇಳುವ ಮೂಲಕ ಸಚಿವ ಸ್ಥಾನದ ಮೇಲೆ ಕಣ್ಣೀಟ್ಟಿದ್ದಾರೆ.
17 ಜನರ ತ್ಯಾಗದಿಂದಾಗಿ ಈಗ ಬಿಜೆಪಿ ಸರ್ಕಾರ ಬಂದಿದೆ, ಅವರಿಗೆ ನ್ಯಾಯ ನೀಡುವುದರ ಜತೆಗೆ ನನ್ನನ್ನೂ ಪರಿಗಣಿಸಬೇಕು ಎಂದಿದ್ದಾರೆ. 2008 ರಲ್ಲಿ 3 ಶಾಸಕರು ಬೇಕಿತ್ತು, ಆಗ ಮೊದಲು ನಾನು ಬೆಂಬಲಿಸಿದ್ದು, 2008 ಬಿಜೆಪಿ ಸರ್ಕಾರದಲ್ಲಿ ನನಗೆ ಅನ್ಯಾಯ ಆಗಿತ್ತು, ಈಗ ಆ ಅನ್ಯಾಯ ಸರಿದೂಗಿಸಬೇಕಿದೆ ಎಂದರು.

ಪ್ರಬಲ ಖಾತೆ, ಜಿಲ್ಲಾಉಸ್ತುವಾರಿ, ಮೆಡಿಕಲ್ ಕಾಲೇಜು, ಸಾವಿರಾರು ಕೋಟಿ ಅನುದಾನ ಯಾವುದೂ ಆಗ ಕೊಡಲಿಲ್ಲ 2008ರಲ್ಲಿ ನನಗಾದ ಅನ್ಯಾಯ ಈಗ ಸರಿಪಡಿಸಬೇಕೆಂದು ಕೇಳುತ್ತೇನೆ ಎಂದಿದ್ದಾರೆ.
ಹನಿಟ್ರ್ಯಾಪ್ ಪ್ರಕರಣದಲ್ಲಿ ಗೂಳಿಹಟ್ಟು ಹೆಸರು ಕೇಳಿ ಬರುತ್ತಿರುವ ವಿಚಾರ
ನಾನು ಆ ರೀತಿ ಎಲ್ಲೂ ನಡೆದುಕೊಂಡಿಲ್ಲ, ಯಾರೂ ಬ್ಲಾಕ್ಮೇಲ್ ಮಾಡಿಲ್ಲ, ಮಂತ್ರಿಗಿರಿ ರೇಸ್ ನಿಂದ ಹಿಂದೆ ಸರಿಸಲು ಷಡ್ಯಂತ್ರ ರೂಪಿಸಿರಬಹುದು. ಹಿಂದೆಯೂ ವಿಧಾನಸೌಧದಲ್ಲಿ ಅಂಗಿ ಹರಿದುಕೊಂಡರೆಂದು ಅಪಪ್ರಚಾರ ಮಾಡಿದ್ರು, ಚುನಾವಣೆ, ರಾಜಕಾರಣ ವಿಚಾರದಲ್ಲಿ ಅಪಪ್ರಚಾರ ಮಾಡಲಾಗುತ್ತದೆ ಎಂದು ತಿಳಿಸಿದರು.
ಹನಿಟ್ರ್ಯಾಪ್ ಪ್ರಕರಣದಲ್ಲಿ ವಿನಾ ಕಾರಣ ನನ್ನ ಹೆಸರನ್ನು ಹರಿಯಬಿಡಲಾಗಿದೆ, ಇದೊಂದು ಷಡ್ಯಂತ್ರವಾಗಿದ್ದು, ನಾನು ಆ ರೀತಿಯ ವ್ಯಕ್ತಿತ್ವವನ್ನು ಹೊಂದಿಲ್ಲ ಎಂದು ಹೇಳಿದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications