ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾಸಕರ ಬಳಿ ಯಾವ ಸಿಡಿ ಇದೆ ಗೊತ್ತಿಲ್ಲ; ಎಂಟಿಬಿ ನಾಗರಾಜ್

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜನವರಿ 15: "ಶಾಸಕರ ಬಳಿ ಯಾವ ಸಿಡಿ ಇದೆಯೋ ಗೊತ್ತಿಲ್ಲ. ಅಂತೆ ಕಂತೆಗಳನ್ನೇ ಮಾಧ್ಯಮಗಳ ಮುಂದೆ ಹೇಳಿದ್ದಾರೆ" ಎಂದು ಬಿಜೆಪಿ ನಾಯಕ, ಸಚಿವ ಎಂಟಿಬಿ ನಾಗರಾಜ್ ಹೇಳಿದರು.

ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ಸಿಗದ ಶಾಸಕರು ಬಹಿರಂಗ ಹೇಳಿಕೆಗಳನ್ನು ನೀಡುತ್ತಿದ್ದಾರೆ. ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದೆ.

ಯತ್ನಾಳ ಸಿಡಿ ಹೇಳಿಕೆ; ಯಾವ ಸಿಡಿನೂ ಇಲ್ಲ ಅಂದ್ರು ನಾಯಕರು! ಯತ್ನಾಳ ಸಿಡಿ ಹೇಳಿಕೆ; ಯಾವ ಸಿಡಿನೂ ಇಲ್ಲ ಅಂದ್ರು ನಾಯಕರು!

"ಕೆಲವರು ಸಿಡಿ ತೋರಿಸಿ ಯಡಿಯೂರಪ್ಪ ಹೆದರಿಸಿ ಸಚಿವರಾಗಿದ್ದಾರೆ. ಇನ್ನು ಕೆಲವರು ಅಪಾರ ಪ್ರಮಾಣದ ಹಣ ನೀಡಿ ಸಚಿವರಾಗಿದ್ದಾರೆ" ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಸಂಪುಟ ಸೇರಿದ 7 ಸಚಿವರಿಗೆ ವಿಧಾನಸೌಧದಲ್ಲಿ ಯಾವ ಕೊಠಡಿ ಸಿಕ್ತು? ಸಂಪುಟ ಸೇರಿದ 7 ಸಚಿವರಿಗೆ ವಿಧಾನಸೌಧದಲ್ಲಿ ಯಾವ ಕೊಠಡಿ ಸಿಕ್ತು?

 I Dont Know Which CD They Have MTB Nagaraj

ಶುಕ್ರವಾರ ಚಿತ್ರದುರ್ಗದಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್, "ಸಿಡಿ ಇದೇ ಎಂದು ಬಿಜೆಪಿ ನಾಯಕರೋ ಅಥವಾ ಬೇರೆ ಪಕ್ಷದ ನಾಯಕರು ಹೇಳುತ್ತಾರೋ ಗೊತ್ತಿಲ್ಲ. ಸಿಡಿ ಇದ್ದರೆ ಬಿಡುಗಡೆ ಮಾಡಲಿ, ಸಿಡಿ ಹೆಸರು ಹೇಳಿಕೊಂಡು ರಾಜಕೀಯ ಮಾಡಿ ಪ್ರಯೋಜನವಿಲ್ಲ" ಎಂದರು.

ಬಿಎಸ್ವೈ ಸಂಪುಟ ವಿಸ್ತರಣೆಯ ನಂತರ ಯಾವ ಜಾತಿಗೆ ಎಷ್ಟು ಪ್ರಾತಿನಿಧ್ಯ?ಇಲ್ಲಿದೆ ಪಟ್ಟಿ ಬಿಎಸ್ವೈ ಸಂಪುಟ ವಿಸ್ತರಣೆಯ ನಂತರ ಯಾವ ಜಾತಿಗೆ ಎಷ್ಟು ಪ್ರಾತಿನಿಧ್ಯ?ಇಲ್ಲಿದೆ ಪಟ್ಟಿ

"ಸಿಡಿ ಹೆಸರು ಹೇಳಿಕೊಂಡು ಮಂತ್ರಿಯಾದವರು, ಸಿಡಿ ಇಟ್ಕೊಂಡು ಹೆದರಿಕೆ ಬೆದರಿಕೆ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಇನ್ನು ಸಚಿವ ಯೋಗೇಶ್ವರ ನನ್ನ ಬಳಿ ಆಸ್ತಿ ಅಡವಿಟ್ಟು ಸಾಲ ಪಡೆದುಕೊಂಡಿಲ್ಲ. ಮನೆನೂ ಅಡವಿಟ್ಟಿಲ್ಲ, ಮಠನೂ ಅಡವಿಟ್ಟಿಲ್ಲ. ಜಾರಕಿಹೂಳಿ ಯಾವ ಕಾರಣಕ್ಕೆ ಹೀಗೆ ಹೇಳುತ್ತಿರಿ? ಎಂದು ಕೇಳಿದ್ದೇನೆ" ಎಂದು ಎಂಟಿಬಿ ನಾಗರಾಜ್ ಸ್ಪಷ್ಟಪಡಿಸಿದರು.

"ಮೂರು ದಿನಗಳಲ್ಲಿ ಖಾತೆ ಹಂಚಿಕೆ ನಡೆಯಲಿದೆ. ಯಾವ ಖಾತೆ ಕೊಟ್ಟರು ನಾನು ನಿಭಾಯಿಸುವೆ. ಯಾರಿಗೆ ಯಾವ ಖಾತೆ ನೀಡುತ್ತಾರೋ ಗೊತ್ತಿಲ್ಲ. 17 ಶಾಸಕರು ಒಟ್ಟಾಗಿದ್ದೇವೆ. ಮುಂದಿನ ದಿನಗಳಲ್ಲಿ ಮುನಿರತ್ನ, ವಿಶ್ವನಾಥ್‌ ಸೇರಿ ಉಳಿದವರಿಗೂ ಸಚಿವ ಸ್ಥಾನ ಕೊಡುತ್ತಾರೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

Recommended Video

BJP ಸರ್ಕಾರದ ಬಗ್ಗೆ Munirathna ಗೆ ನಂಬಿಕೆ ಇಲ್ವಾ ?? | Oneindia Kannada

"ಸಚಿವ ಸ್ಥಾನ ಹಂಚಿಕೆ ಬಳಿಕ ಅಸಮಾಧಾನ ಆಗುವುದು ಸಹಜ. ವಿರೋಧ ಪಕ್ಷದವರು ಮಾತನಾಡುತ್ತಾರೆ. ಶಾಸಕ ಯತ್ನಾಳ್ ಬಳಿ ಸಿಡಿ ಇದ್ದರೆ ಬಿಡುಗಡೆ ಮಾಡಲಿ" ಎಂದು ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

English summary
BJP leader and minister MTB Nagaraj comment on Basanagouda Patil Yatnal CD allegation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X