ಆ ಒಂದೇ ಒಂದು ಕಾರಣಕ್ಕೆ ನಾನು ಜೈ ಶ್ರೀರಾಮ್ ಅನ್ನಲ್ಲ.. ಜೈ ಸೀತಾರಾಮ್ ಎಂದು ಹೇಳುತ್ತೇನೆ: ಸಿದ್ದರಾಮಯ್ಯ ಹೀಗೆ ಹೇಳಿದ್ಯಾಕೆ?
ಚಿತ್ರದುರ್ಗ, ಏಪ್ರಿಲ್, 04: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಭಾರೀ ಪೈಪೋಟಿ ನಡೆಸುತ್ತಿದ್ದಾರೆ. ಅಲ್ಲದೆ ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತಿದ್ದಾರೆ. ಇನ್ನು ಇಂದು (ಏಪ್ರಿಲ್ 04) ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಕಾರ್ಯಕ್ರಮದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
"ರಾಮ ಕುಟುಂಬಸ್ಥ, ಸೀತೆ, ಲಕ್ಷ್ಮಣ ಬಿಟ್ರು, ರಾಮ ಒಬ್ಬನಿಗೆ ದೇವಾಲಯ ಕಟ್ಟಿ, ಜೈ ಶ್ರೀರಾಮ್ ಅಂತಾ ಹೇಳುತ್ತಾರೆ. ಶ್ರೀರಾಮ, ಸೀತೆ ಎಲ್ಲರೂ ಒಂದೇ. ಅದಕ್ಕಾಗಿಯೇ ನಾನು ಹೇಳುತ್ತೇನೆ ಜೈ ಸೀತಾರಾಮ, ನಿವೆಲ್ಲರೂ ಸೀತಾರಾಮ ಎಂದು ಹೇಳಿ," ಎಂದು ಜನರಿಗೆ ಕರೆ ನೀಡಿದರು.

ಇನ್ನು ಅಮಿತ್ ಷಾ ಅವರನ್ನು ಭೇಟಿ ಮಾಡಿ ಕರ್ನಾಟಕದಲ್ಲಿ ಬರಗಾಲ ಇದೆ, ಹಣ ಬಿಡುಗಡೆ ಮಾಡಿ ಎಂದು ಮನವಿ ಮಾಡಲಾಗಿತ್ತು. ಡಿಸೆಂಬರ್ 23ರಂದು ಸಭೆ ನಡೆಸಿ ರಾಜ್ಯಕ್ಕೆ ಹಣ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದರು. ಆದರೆ ಎಂಟು ತಿಂಗಳು ಕಳೆದರೂ ಸಭೆ ನಡೆಸಲಿಲ್ಲ, ಹಣ ಬಿಡುಗಡೆ ಮಾಡಲಿಲ್ಲ. ನಾವು ರಾಜ್ಯಕ್ಕೆ 18,171 ಕೋಟಿ ಹಣ ಕೇಳಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ನಾವು ರೈತರಿಗೆ 33,2,500 ಸಾವಿರ ರೈತರಿಗೆ 2,000 ಹಣ ಕೊಟ್ಟಿದ್ದೇವೆ ಎಂದು ಹೇಳಿದರು.
ನಮ್ಮ ರಾಜ್ಯದಿಂದಲೇ ಅತಿ ಹೆಚ್ಚು ತೆರಿಗೆ ಹಣ ವಸೂಲಿ ಮಾಡಿಕೊಡಲಾಗುತ್ತದೆ. ನಮಗೇ ಅನ್ಯಾಯ ಮಾಡಿದರೇ ಹೇಗೆ ನಿರ್ಮಲಾ ಸೀತಾರಾಮನ್ ಅವರೇ? ಎಂದು ಪ್ರಶ್ನೆ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಮತಕ್ಕಾಗಿ ಮೋದಿ ರೋಡ್ ಶೋ ಮಾಡ್ತಾರೆ. ದುಡ್ಡು ಕೊಟ್ಟು ಜನ ಕರೆದುಕೊಂಡು ಬರುತ್ತಾರೆ. 27 ಜನ ಸಂಸದರು ಇದ್ದರು. ರಾಜ್ಯದ ಬಗ್ಗೆ ಒಬ್ಬರು ಮಾತನಾಡಲಿಲ್ಲ. ಮೋದಿ ಕಂಡರೆ ಗಡಗಡ ಎಂದು ನಡುಗುತ್ತಾರೆ. ಇಂತಹವರನ್ನು ಯಾಕೆ ಪಾರ್ಲಿಮೆಂಟ್ಗೆ ಕಳುಹಿಸಬೇಕು. ರಾಜ್ಯದ 27 ಬಿಜೆಪಿ ಎಂಪಿಗಳು ಕೋಲೆ ಬಸವನ ರೀತಿ ಇದ್ದಾರೆ. ಎಲ್ಲದಕ್ಕೂ ಬರೀ ತಲೆ ಅಲ್ಲಾಡಿಸುತ್ತಾರೆ, ನಾರಾಯಣಸ್ವಾಮಿ ಮಾತಾಡಲಿಲ್ಲ, ಗೋವಿಂದ ಕಾರಜೋಳ ಮಾತನಾಡಲಿಲ್ಲ ಎಂದು ಸಂಸದರ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಬಿಜೆಪಿ ವಿರುದ್ಧ ಮಾತನಾಡಿದವರನ್ನು ಹೆದರಿಸುತ್ತಾರೆ. ಹಾಗೆಯೇ ಕೆ.ಎಸ್.ಈಶ್ವರಪ್ಪ ಪಕ್ಷೇತರವಾಗಿ ನಿಂತರೆ ಅವರಿಗೆ ಇ.ಡಿ ಬಿಟ್ಟು ಹೆದರಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications