ಚಿತ್ರದುರ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಕೆಶಿ ಹೊರಗೆ ಬರಲಿ ಎಂದು ನಾನೂ ಪ್ರಾರ್ಥಿಸಿದ್ದೆ: ಶ್ರೀರಾಮುಲು

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಅಕ್ಟೋಬರ್ 24: "ಡಿ.ಕೆ.ಶಿವಕುಮಾರ್ ಬಗ್ಗೆ ನಾನು ಮಾಡಿದ ಟೀಕೆಗಳು ನನ್ನ ಮನಸ್ಸಿನಿಂದ ಬಂದದ್ದಲ್ಲ" ಎಂದಿದ್ದಾರೆ ಆರೋಗ್ಯ ಸಚಿವ ಶ್ರೀರಾಮುಲು.

ಚಿತ್ರದುರ್ಗದಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಹೊರಟ ವೇಳೆ ಮಾತನಾಡಿದ ಅವರು, "ಡಿಕೆ ಶಿವಕುಮಾರ್ ಜೈಲಿಗೆ ಹೋಗಬೇಕೆಂದು ನಾನೆಂದೂ ಬಯಸಿರಲಿಲ್ಲ. ಡಿ.ಕೆ.ಶಿವಕುಮಾರ್ ಹೊರಗೆ ಬರಲಿ ಎಂದು ಪ್ರಾರ್ಥಿಸಿದ್ದೆ. ಈಗ ಅವರು ಜಾಮೀನು ಪಡೆದು ಹೊರಬಂದಿದ್ದಾರೆ. ಈ ದೇಶದ ಕಾನೂನಿನ ಮೇಲೆ ಎಲ್ಲರಿಗೂ ಗೌರವ, ನಂಬಿಕೆ ಇದೆ" ಎಂದಿದ್ದಾರೆ.

ಡಿಕೆ ಶಿವಕುಮಾರ್‌ಗೆ ಜಾಮೀನು: ನಾಯಕರು ಹೇಳಿದ್ದೇನು?ಡಿಕೆ ಶಿವಕುಮಾರ್‌ಗೆ ಜಾಮೀನು: ನಾಯಕರು ಹೇಳಿದ್ದೇನು?

ಇದೇ ಸಂದರ್ಭದಲ್ಲಿ ಮೈತ್ರಿ ಸರ್ಕಾರದ ಕುರಿತೂ ಮಾತನಾಡಿದರು. "ಸಿದ್ದರಾಮಯ್ಯ ಎಲ್ಲಿಯೂ ಸಮಾಧಾನವಾಗಿ ಇರುವುದಿಲ್ಲ. ಅವರು ಸಿಎಂ ಆಗಿದ್ದಾಗಲೂ ಪ್ರಚೋದನಕಾರಿ ಮಾತುಗಳನ್ನು ಆಡಿದ್ದರು. ಕುಮಾರಸ್ವಾಮಿ ಅವರ ಮೈತ್ರಿ ಸರ್ಕಾರ ಬೀಳಿಸಲು ಸಿದ್ದರಾಮಯ್ಯ ಅವರೇ ನೇರ ಕಾರಣ. ಕೆಳಗೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಅನ್ನೋ ಹಾಗೆ ಸಿದ್ದರಾಮಯ್ಯ ಇರ್ತಾರೆ" ಎಂದರು.

I Prayed God With Regard To Dk Shivakumar Said Sriramulu In Chitradurga

ಡಿಕೆಶಿ ಬಂಧಮುಕ್ತ: ವಕೀಲರ ಸಲಹೆ, ದೇವರ ಆಶೀರ್ವಾದ ಏನನ್ನುತ್ತೆ? ಡಿಕೆಶಿ ಬಂಧಮುಕ್ತ: ವಕೀಲರ ಸಲಹೆ, ದೇವರ ಆಶೀರ್ವಾದ ಏನನ್ನುತ್ತೆ?

ಡಿಕೆಶಿ ಜೈಲಿಗೆ ಹೋಗಿದ್ದಕ್ಕೆ ಖುಷಿಪಟ್ಟಿದ್ದ ಬಿಜೆಪಿ ನಾಯಕರಿಗೆ ಧನ್ಯವಾದ ಹೇಳಿದ ವಿಚಾರವಾಗಿ ಪ್ರತಿಕ್ರಿಯಿಸಿದ ಶ್ರೀರಾಮುಲು, "ಬಿಜೆಪಿಯವರು ಶತ್ರುಗಳಿಗೂ ಕೆಟ್ಟದ್ದನ್ನು ಬಯಸುವುದಿಲ್ಲ. ದೇವರೇ ಕೈ ಹಿಡಿದು ಕಷ್ಟಗಳನ್ನು ಪರಿಹರಿಸುತ್ತಾನೆ ಎಂಬುದು ನಮ್ಮ ನಂಬಿಕೆ, ಯಾರೇ ತಪ್ಪು ಮಾಡಿದರೂ ಕಾನೂನು ಇದೆ. ಡಿಕೆಶಿ ಜೈಲಿಗೆ ಹೋಗಿದ್ದಾಗ ಅವರು ಬೇಗ ಹೊರಗೆ ಬರಲಿ ಎಂದು ನಾವೂ ಪ್ರಾರ್ಥಿಸಿದ್ದೇವೆ" ಎಂದು ತಿಳಿಸಿದರು.

English summary
"My comments about DK Shivakumar are not from my heart" said Health Minister Sriramulu in chitradurga
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X